ಗಂಭೀರ ಅಪಘಾತವಾದರೂ ಜಗ್ಗೇಶ್ ಮಗ ಯತಿರಾಜ್ ಪಾರಾಗಿದ್ದು ಹೇಗೆ? ಪ್ರತಿಕ್ರಿಯಿಸಿದ ನವರಸ ನಾಯಕ

ಯತಿರಾಜ್ ಚಲಿಸುತ್ತಿದ್ದ ಬಿಎಂಡಬ್ಲ್ಯೂ ಕಾರು ಬೆಂಗಳೂರು ಹೈದರಾಬಾದ್ ರಸ್ತೆಯ ಅಗಲಗುರ್ಕಿ ಬಳಿ ಅಪಘಾತಕ್ಕೆ ತುತ್ತಾಗಿದೆ. ಯತಿರಾಜ್​ ಅಚ್ಚರಿಯ ರೀತಿಯಲ್ಲಿ ಪಾರಾಗಿದ್ದಾರೆ.

ಗಂಭೀರ ಅಪಘಾತವಾದರೂ ಜಗ್ಗೇಶ್ ಮಗ ಯತಿರಾಜ್ ಪಾರಾಗಿದ್ದು ಹೇಗೆ? ಪ್ರತಿಕ್ರಿಯಿಸಿದ ನವರಸ ನಾಯಕ
ಜಗ್ಗೇಶ್​
Follow us
| Updated By: ರಾಜೇಶ್ ದುಗ್ಗುಮನೆ

Updated on:Jul 01, 2021 | 3:50 PM

ಕನ್ನಡ ಚಿತ್ರರಂಗದ ಹಿರಿಯ ನಟ ಜಗ್ಗೇಶ್ ಅವರ ಪುತ್ರ ಯತಿರಾಜ್ ಚಲಿಸುತ್ತಿದ್ದ ಬಿಎಂಡಬ್ಲ್ಯೂ ಕಾರು ಬೆಂಗಳೂರು ಹೈದರಾಬಾದ್ ರಸ್ತೆಯ ಅಗಲಗುರ್ಕಿ ಬಳಿ ಅಪಘಾತಕ್ಕೆ ತುತ್ತಾಗಿದೆ. ಯತಿರಾಜ್​ ಅಚ್ಚರಿಯ ರೀತಿಯಲ್ಲಿ ಪಾರಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನಟ ಜಗ್ಗೇಶ್​ ಪ್ರತಿಕ್ರಿಯೆ ನೀಡಿದ್ದಾರೆ.

ಅಪಘಾತವಾಗಿದ್ದು ಹೇಗೆ ಎಂಬ ಬಗ್ಗೆ ಟ್ವಿಟರ್​ನಲ್ಲಿ ಪ್ರತಿಕ್ರಿಯಿಸಿರುವ ಜಗ್ಗೇಶ್​, ‘ಕೊರನಾ ಬಂದಾಗಿನಿಂದ ಹೊರ ಹೋಗಿಲ್ಲ. ಹೀಗಾಗಿ, ಹೊರಗೆ ಹೋಗಿ ಬರುವೆ ಎಂದು ಅಮ್ಮನಿಗೆ ಹೇಳಿ ಮಗ ಯತಿರಾಜ್​ ಹೊರಹೋಗಿದ್ದ. ಅವನ ಇಷ್ಟದ ರಸ್ತೆ ಬೆಂಗಳೂರು-ಚಿಕ್ಕಬಳ್ಳಾಪುರ ರಸ್ತೆಯಲ್ಲಿ ಹೋಗುವಾಗ ಅಡ್ಡ ಬಂದ ನಾಯಿ ರಕ್ಷಿಸಲು ಹೋಗಿ ರಸ್ತೆ ವಿಭಜಕಕ್ಕೆ ಹೊಡೆದು ಕಾರು ಪಕ್ಕದ ರಸ್ತೆಗೆಬಿದ್ದಿದೆ. ರಾಯರ ದಯೆ ಹಾಗೂ ನಿಮ್ಮ ಶುಭಹಾರೈಕೆ ಯತಿರಾಜನಿಗೆ ಸಣ್ಣ ಗಾಯವು ಆಗಿಲ್ಲ’ ಎಂದಿದ್ದಾರೆ.

‘ರಾಯರು ನನ್ನ ಜೊತೆ ಸದ ಇರುತ್ತಾರೆ, ಇದ್ದಾರೆ. ಇಂಥ ಘಟನೆಗಳು ಚಮತ್ಕಾರ ನನ್ನ ಬದುಕಲ್ಲಿ ನಡೆವುದೇ ನಾನಿದ್ದೀನೋ ಇರುತ್ತೀನೋ ನಿನ್ನ ಜೊತೆ ಯಾವಾಗಲು ಎಂದು ರಾಯರು ಅವರ ಪವಾಡ ನಿರೂಪಿಸಲು! ನಿನ್ನೆ ಪೂಜೆಯಲ್ಲಿ ಕುಟುಂಬದ ರಕ್ಷಣೆಗೆ ಪ್ರಾರ್ಥಿಸಿದ್ದೆ. ಸದಾ ಅವರ ಸ್ಮರಣೆಯಲ್ಲೇ ಬದುಕುವ ನನಗೆ ಇದು ಮತ್ತೊಂದು ಪವಾಡ. ನಂಬಿ ಕೆಟ್ಟವರಿಲ್ಲ ಗುರುರಾಯರ’ ಎಂದಿದ್ದಾರೆ.

ಇದನ್ನೂ ಓದಿ: ಅಪಘಾತದಲ್ಲಿ ನಟ ಜಗ್ಗೇಶ್​ ಮಗ ಯತಿರಾಜ್​​ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜು; ಇಲ್ಲಿವೆ ಫೋಟೋಗಳು

Published On - 3:09 pm, Thu, 1 July 21