AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗ್ಗೇಶ್ ಧ್ವನಿಯಲ್ಲಿ ಮೂಡಿ ಬರ್ತಿದೆ ಹೊಸ ಸಿನಿಮಾ; ಇದು ಪಕ್ಕಾ ‘ಪೌಡರ್’ ಕಥೆ

ಜಗ್ಗೇಶ್ ಅವರು ‘ವಿಕ್ಟರಿ’ ಸೇರಿದಂತೆ ಹಲವು ಚಿತ್ರಗಳಿಗೆ ಅವರು ಧ್ವನಿ ಆಗಿದ್ದಾರೆ. ಈಗ ‘ಪೌಡರ್’ ಸಿನಿಮಾದಲ್ಲಿ ಅವರು ವಾಯ್ಸ್ ಗೈಡ್‍ ಆಗಿ ಕೆಲಸ ಮಾಡಿದ್ದಾರೆ. ಇಡೀ ಚಿತ್ರವನ್ನು ತಮ್ಮ ಕಾಮೆಂಟರಿಯ ಮೂಲಕ ಮುನ್ನಡೆಸಿದ್ದಾರೆ. ಈ ವಿಚಾರವನ್ನು ‘ಪೌಡರ್’ ತಂಡದವರು ಮಾಹಿತಿ ಹಂಚಿಕೊಂಡಿದ್ದಾರೆ.

ಜಗ್ಗೇಶ್ ಧ್ವನಿಯಲ್ಲಿ ಮೂಡಿ ಬರ್ತಿದೆ ಹೊಸ ಸಿನಿಮಾ; ಇದು ಪಕ್ಕಾ ‘ಪೌಡರ್’ ಕಥೆ
ಜಗ್ಗೇಶ್ ಧ್ವನಿಯಲ್ಲಿ ಮೂಡಿ ಬರ್ತಿದೆ ಹೊಸ ಸಿನಿಮಾ; ಇದು ಪಕ್ಕಾ ‘ಪೌಡರ್’ ಕಥೆ
ರಾಜೇಶ್ ದುಗ್ಗುಮನೆ
|

Updated on:Aug 22, 2024 | 8:46 AM

Share

‘ಪೌಡರ್’ ಸಿನಿಮಾದ ಟ್ರೇಲರ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಸಿನಿಮಾದಲ್ಲಿ ದಿಗಂತ್, ರಂಗಾಯಣ ರಘು ಸೇರಿದಂತೆ ಅನೇಕರು ನಟಿಸಿದ್ದಾರೆ. ಈ ಸಿನಿಮಾದ ಟ್ರೇಲರ್ ಸಖತ್ ಫನ್ನಿ ಆಗಿದೆ. ಇದು ಡ್ರಗ್ಸ್​ ವಿಚಾರ ಇಟ್ಟುಕೊಂಡು ಮಾಡಿರೋ ಸಿನಿಮಾ ಅನ್ನೋದು ಟ್ರೇಲರ್​ನಲ್ಲಿ ಗೊತ್ತಾಗುತ್ತದೆ. ಈ ಸಿನಿಮಾದ ವಿಶೇಷತೆ ಎಂದರೆ ಜಗ್ಗೇಶ್ ಅವರ ಧ್ವನಿ ಚಿತ್ರದಲ್ಲಿ ಇರಲಿದೆ. ಇಡೀ ಸಿನಿಮಾದ ಕಥೆ ಅವರ ನಿರೂಪಣೆಯಲ್ಲಿ ಸಾಗಲಿದೆ.

ಜಗ್ಗೇಶ್ ಅವರು ಹೀರೋ ಆಗಿ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಇದರ ಜೊತೆಗೆ ‘ವಿಕ್ಟರಿ’ ಸೇರಿದಂತೆ ಹಲವು ಚಿತ್ರಗಳಿಗೆ ಅವರು ಧ್ವನಿ ಆಗಿದ್ದಾರೆ. ಈಗ ‘ಪೌಡರ್’ ಸಿನಿಮಾದಲ್ಲಿ ಅವರು ವಾಯ್ಸ್ ಗೈಡ್‍ ಆಗಿ ಕೆಲಸ ಮಾಡಿದ್ದಾರೆ. ಇಡೀ ಚಿತ್ರವನ್ನು ತಮ್ಮ ಕಾಮೆಂಟರಿಯ ಮೂಲಕ ಮುನ್ನಡೆಸಿದ್ದಾರೆ. ಈ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಚಿತ್ರದ ಕೊನೆಯ 20 ನಿಮಿಷ ಗ್ರಾಫಿಕ್ಸ್ ಇರಲಿದೆ ಅನ್ನೋದು ವಿಶೇಷ.

ಈ ಚಿತ್ರದಲ್ಲಿ ಪಕ್ಕಾ ಕಾಮಿಡಿ ಇದೆ. ಪೌಡರ್​ನ (ಡ್ರಗ್ಸ್​) ಹುಡುಕಿ ಹೋಗುವ ಕಥೆ ಇದೆ ಅನ್ನೋದು ಟ್ರೇಲರ್​ನಲ್ಲಿ ಗೊತ್ತಾಗುತ್ತದೆ. ಕನ್ನಡದ ಪ್ರತಿಭಾವಂತ ಕಲಾವಿದರನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಈ ಚಿತ್ರವನ್ನು ಜನಾರ್ಧನ್‍ ಚಿಕ್ಕಣ್ಣ ನಿರ್ದೇಶನ ಮಾಡಿದ್ದಾರೆ. ಇದು ಪಕ್ಕಾ ಮನರಂಜನಾತ್ಮಕ ಚಿತ್ರ ಎಂದು ತಂಡ ಹೇಳಿಕೊಂಡಿದೆ. ಜನಾರ್ಧನ್ ಚಿಕ್ಕಣ್ಣ ಅವರಿಗೆ KRG ಸ್ಟುಡಿಯೋಸ್‍ನ ಕಾರ್ತಿಕ್‍ ಒಂದು ಸ್ಕ್ರಿಪ್ಟ್ ಕಳುಹಿಸಿದ್ದರು. ಕನ್ನಡಿಗ ದೀಪಕ್‍ ವೆಂಕಟೇಶನ್‍ ಎಂಬುವವರು ಬರೆದ ಕಥೆ ಇದು. ಈ ಕಥೆ ಇಷ್ಟ ಆಗಿ ಜನಾರ್ಧನ್ ಸಿನಿಮಾ ಮಾಡಿದ್ದಾರೆ. ಕ್ಲೈಮ್ಯಾಕ್ಸ್​ನಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಳ್ಳಲಾಗಿದೆ. ಸಿನಿಮಾದಲ್ಲಿ ಲಾಜಿಕ್ ಹುಡುಕಬೇಡಿ ಎಂದು ತಂಡ ಕೇಳಿಕೊಂಡಿದೆ.

ಇದನ್ನೂ ಓದಿ: ‘ಕರ್ಮ ಹಿಂಬಾಲಿಸುತ್ತದೆ, ಪಾಪಕರ್ಮ ಅವನ ಸುಡುತ್ತದೆ’; ದರ್ಶನ್ ಕೇಸ್​ ಬೆನ್ನಲ್ಲೇ ಜಗ್ಗೇಶ್ ಮಾರ್ಮಿಕ ಟ್ವೀಟ್

ಆಗಸ್ಟ್​ 15ರಂದು ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ, ಅಂದು ಹಲವು ಸಿನಿಮಾಗಳು ರಿಲೀಸ್ ಆಗುತ್ತಿವೆ. ಈ ಕಾರಣಕ್ಕೆ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಆಗಸ್ಟ್ 23ಕ್ಕೆ ಮುಂದೂಡಿಕೊಳ್ಳಲಾಗಿದೆ. ಜನಾರ್ಧನ್ ಚಿಕ್ಕಣ್ಣ ಅವರು ಈ ಮೊದಲು ‘ಗುಳ್ಟು’ ಮಾಡಿದ್ದರು. ಶರ್ಮಿಳಾ ಮಾಂಡ್ರೆ ಈ ಚಿತ್ರದಲ್ಲಿ ಆ್ಯಕ್ಷನ್ ಮೆರೆದಿದ್ದಾರೆ. ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ, ರವಿಶಂಕರ್ ಗೌಡ, ಧನ್ಯಾ ರಾಮ್‍ಕುಮಾರ್‍, ನಾಗಭೂಷಣ್, ಅನಿರುದ್ಧ್ ಆಚಾರ್ಯ ಮೊದಲಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:24 am, Thu, 8 August 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More