AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗ್ಗೇಶ್ ಧ್ವನಿಯಲ್ಲಿ ಮೂಡಿ ಬರ್ತಿದೆ ಹೊಸ ಸಿನಿಮಾ; ಇದು ಪಕ್ಕಾ ‘ಪೌಡರ್’ ಕಥೆ

ಜಗ್ಗೇಶ್ ಅವರು ‘ವಿಕ್ಟರಿ’ ಸೇರಿದಂತೆ ಹಲವು ಚಿತ್ರಗಳಿಗೆ ಅವರು ಧ್ವನಿ ಆಗಿದ್ದಾರೆ. ಈಗ ‘ಪೌಡರ್’ ಸಿನಿಮಾದಲ್ಲಿ ಅವರು ವಾಯ್ಸ್ ಗೈಡ್‍ ಆಗಿ ಕೆಲಸ ಮಾಡಿದ್ದಾರೆ. ಇಡೀ ಚಿತ್ರವನ್ನು ತಮ್ಮ ಕಾಮೆಂಟರಿಯ ಮೂಲಕ ಮುನ್ನಡೆಸಿದ್ದಾರೆ. ಈ ವಿಚಾರವನ್ನು ‘ಪೌಡರ್’ ತಂಡದವರು ಮಾಹಿತಿ ಹಂಚಿಕೊಂಡಿದ್ದಾರೆ.

ಜಗ್ಗೇಶ್ ಧ್ವನಿಯಲ್ಲಿ ಮೂಡಿ ಬರ್ತಿದೆ ಹೊಸ ಸಿನಿಮಾ; ಇದು ಪಕ್ಕಾ ‘ಪೌಡರ್’ ಕಥೆ
ಜಗ್ಗೇಶ್ ಧ್ವನಿಯಲ್ಲಿ ಮೂಡಿ ಬರ್ತಿದೆ ಹೊಸ ಸಿನಿಮಾ; ಇದು ಪಕ್ಕಾ ‘ಪೌಡರ್’ ಕಥೆ
ರಾಜೇಶ್ ದುಗ್ಗುಮನೆ
|

Updated on:Aug 22, 2024 | 8:46 AM

Share

‘ಪೌಡರ್’ ಸಿನಿಮಾದ ಟ್ರೇಲರ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಸಿನಿಮಾದಲ್ಲಿ ದಿಗಂತ್, ರಂಗಾಯಣ ರಘು ಸೇರಿದಂತೆ ಅನೇಕರು ನಟಿಸಿದ್ದಾರೆ. ಈ ಸಿನಿಮಾದ ಟ್ರೇಲರ್ ಸಖತ್ ಫನ್ನಿ ಆಗಿದೆ. ಇದು ಡ್ರಗ್ಸ್​ ವಿಚಾರ ಇಟ್ಟುಕೊಂಡು ಮಾಡಿರೋ ಸಿನಿಮಾ ಅನ್ನೋದು ಟ್ರೇಲರ್​ನಲ್ಲಿ ಗೊತ್ತಾಗುತ್ತದೆ. ಈ ಸಿನಿಮಾದ ವಿಶೇಷತೆ ಎಂದರೆ ಜಗ್ಗೇಶ್ ಅವರ ಧ್ವನಿ ಚಿತ್ರದಲ್ಲಿ ಇರಲಿದೆ. ಇಡೀ ಸಿನಿಮಾದ ಕಥೆ ಅವರ ನಿರೂಪಣೆಯಲ್ಲಿ ಸಾಗಲಿದೆ.

ಜಗ್ಗೇಶ್ ಅವರು ಹೀರೋ ಆಗಿ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಇದರ ಜೊತೆಗೆ ‘ವಿಕ್ಟರಿ’ ಸೇರಿದಂತೆ ಹಲವು ಚಿತ್ರಗಳಿಗೆ ಅವರು ಧ್ವನಿ ಆಗಿದ್ದಾರೆ. ಈಗ ‘ಪೌಡರ್’ ಸಿನಿಮಾದಲ್ಲಿ ಅವರು ವಾಯ್ಸ್ ಗೈಡ್‍ ಆಗಿ ಕೆಲಸ ಮಾಡಿದ್ದಾರೆ. ಇಡೀ ಚಿತ್ರವನ್ನು ತಮ್ಮ ಕಾಮೆಂಟರಿಯ ಮೂಲಕ ಮುನ್ನಡೆಸಿದ್ದಾರೆ. ಈ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಚಿತ್ರದ ಕೊನೆಯ 20 ನಿಮಿಷ ಗ್ರಾಫಿಕ್ಸ್ ಇರಲಿದೆ ಅನ್ನೋದು ವಿಶೇಷ.

ಈ ಚಿತ್ರದಲ್ಲಿ ಪಕ್ಕಾ ಕಾಮಿಡಿ ಇದೆ. ಪೌಡರ್​ನ (ಡ್ರಗ್ಸ್​) ಹುಡುಕಿ ಹೋಗುವ ಕಥೆ ಇದೆ ಅನ್ನೋದು ಟ್ರೇಲರ್​ನಲ್ಲಿ ಗೊತ್ತಾಗುತ್ತದೆ. ಕನ್ನಡದ ಪ್ರತಿಭಾವಂತ ಕಲಾವಿದರನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಈ ಚಿತ್ರವನ್ನು ಜನಾರ್ಧನ್‍ ಚಿಕ್ಕಣ್ಣ ನಿರ್ದೇಶನ ಮಾಡಿದ್ದಾರೆ. ಇದು ಪಕ್ಕಾ ಮನರಂಜನಾತ್ಮಕ ಚಿತ್ರ ಎಂದು ತಂಡ ಹೇಳಿಕೊಂಡಿದೆ. ಜನಾರ್ಧನ್ ಚಿಕ್ಕಣ್ಣ ಅವರಿಗೆ KRG ಸ್ಟುಡಿಯೋಸ್‍ನ ಕಾರ್ತಿಕ್‍ ಒಂದು ಸ್ಕ್ರಿಪ್ಟ್ ಕಳುಹಿಸಿದ್ದರು. ಕನ್ನಡಿಗ ದೀಪಕ್‍ ವೆಂಕಟೇಶನ್‍ ಎಂಬುವವರು ಬರೆದ ಕಥೆ ಇದು. ಈ ಕಥೆ ಇಷ್ಟ ಆಗಿ ಜನಾರ್ಧನ್ ಸಿನಿಮಾ ಮಾಡಿದ್ದಾರೆ. ಕ್ಲೈಮ್ಯಾಕ್ಸ್​ನಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಳ್ಳಲಾಗಿದೆ. ಸಿನಿಮಾದಲ್ಲಿ ಲಾಜಿಕ್ ಹುಡುಕಬೇಡಿ ಎಂದು ತಂಡ ಕೇಳಿಕೊಂಡಿದೆ.

ಇದನ್ನೂ ಓದಿ: ‘ಕರ್ಮ ಹಿಂಬಾಲಿಸುತ್ತದೆ, ಪಾಪಕರ್ಮ ಅವನ ಸುಡುತ್ತದೆ’; ದರ್ಶನ್ ಕೇಸ್​ ಬೆನ್ನಲ್ಲೇ ಜಗ್ಗೇಶ್ ಮಾರ್ಮಿಕ ಟ್ವೀಟ್

ಆಗಸ್ಟ್​ 15ರಂದು ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ, ಅಂದು ಹಲವು ಸಿನಿಮಾಗಳು ರಿಲೀಸ್ ಆಗುತ್ತಿವೆ. ಈ ಕಾರಣಕ್ಕೆ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಆಗಸ್ಟ್ 23ಕ್ಕೆ ಮುಂದೂಡಿಕೊಳ್ಳಲಾಗಿದೆ. ಜನಾರ್ಧನ್ ಚಿಕ್ಕಣ್ಣ ಅವರು ಈ ಮೊದಲು ‘ಗುಳ್ಟು’ ಮಾಡಿದ್ದರು. ಶರ್ಮಿಳಾ ಮಾಂಡ್ರೆ ಈ ಚಿತ್ರದಲ್ಲಿ ಆ್ಯಕ್ಷನ್ ಮೆರೆದಿದ್ದಾರೆ. ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ, ರವಿಶಂಕರ್ ಗೌಡ, ಧನ್ಯಾ ರಾಮ್‍ಕುಮಾರ್‍, ನಾಗಭೂಷಣ್, ಅನಿರುದ್ಧ್ ಆಚಾರ್ಯ ಮೊದಲಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:24 am, Thu, 8 August 24

Follow Us
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!