AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಲ್​ ಹೀರೋ ಆದ ಜಗ್ಗೇಶ್​; 20 ದಿನಗಳಿಂದ ಕೊರೊನಾ ರೋಗಿಗಳ ಸೇವೆಯಲ್ಲಿ ನಟ

ಬಾಲಿವುಡ್​ ನಟ ಸೋನು ಸೂದ್​ ಸೇರಿದಂತೆ ಸಾಕಷ್ಟು ಮಂದಿ ಜನಸಾಮಾನ್ಯರ ಸಹಾಯಕ್ಕೆ ನಿಂತಿದ್ದಾರೆ. ಕನ್ನಡದ ಹೀರೋ ಅರ್ಜುನ್​ ಗೌಡ ಆ್ಯಂಬುಲೆನ್ಸ್​ ಡ್ರೈವರ್ ಆಗುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ರಿಯಲ್​ ಹೀರೋ ಆದ ಜಗ್ಗೇಶ್​; 20 ದಿನಗಳಿಂದ ಕೊರೊನಾ ರೋಗಿಗಳ ಸೇವೆಯಲ್ಲಿ ನಟ
ನಟ ಜಗ್ಗೇಶ್​
ರಾಜೇಶ್ ದುಗ್ಗುಮನೆ
|

Updated on: Apr 30, 2021 | 7:13 PM

Share

ಕೊರೊನಾ ವೈರಸ್​ ಮಿತಿಮೀರಿ ಹರಡುತ್ತಿದೆ. ಇದರಿಂದ ಅನೇಕ ಸೆಲೆಬ್ರಿಟಿಗಳು ಮನೆಯಲ್ಲೇ ಕೂತಿದ್ದಾರೆ. ಆದರೆ, ಕೆಲವೇ ಕೆಲವು ಸೆಲೆಬ್ರಿಟಿಗಳು ಮಾತ್ರ ಮನೆಯಿಂದ ಹೊರಬಂದು ಕೊರೊನಾ ರೋಗಿಗಳ ಸೇವೆ ಮಾಡುತ್ತಿದ್ದಾರೆ. ಇದಕ್ಕೆ ನಟ ಜಗ್ಗೇಶ್​ ಕೂಡ ಹೊರತಾಗಿಲ್ಲ. ಅವರು ಕಳೆದ 20 ದಿನಗಳಿಂದ ಕೊರೊನಾ ರೋಗಿಗಳಿಗೆ ಸಹಾಯ ಮಾಡುತ್ತಿದ್ದಾರೆ.

ಇತ್ತೀಚೆಗೆ ಜಗ್ಗೇಶ್​ ಟ್ವೀಟ್ ಒಂದನ್ನು ಮಾಡಿದ್ದರು. ಈ ಟ್ವೀಟ್​ನಲ್ಲಿ, ಮಾನ್ಯ ಮುಖ್ಯ ಮಂತ್ರಿಗಳ ಗಮನಕ್ಕೆ. ಕೊರೊನಾ ರೋಗಿ ಅಡ್ಮಿಟ್ ಆದ 2-3ದಿನಕ್ಕೆ ಸಾವು ಸಂಭವಿಸುತ್ತಿದೆ. ವೈದ್ಯರು ಯಾವ ರೀತಿ ಚಿಕಿತ್ಸೆ ನೀಡುತ್ತಾರೆ ಎಂಬುದು ಬಂಧುಗಳಿಗೆ ತಿಳಿಯದು. ಸಾವಾಗಿದೆ ಎಂದು ತಿಳಿಸುತ್ತಾರೆ ಆದರೆ ಮುಖ ನೋಡಲಾಗದು. ಕೆಲ ಸಿಬ್ಬಂದಿ ಹೊರತುಪಡಿಸಿ ಬೇರೆ ಯಾರೂ ಸಿಗುವುದಿಲ್ಲ ಎಂದು ಬರೆದುಕೊಂಡಿದ್ದರು.

ಈ ಟ್ವೀಟ್​ಗೆ ನಿಮಗೆ ಚಿಕಿತ್ಸೆ ಬಗ್ಗೆ ಅನುಮಾನ ಇದ್ದರೆ PPE ಕಿಟ್​ ಹಾಕಿಕೊಂಡು ಒಳಗೆ ಹೋಗಿ ನೋಡಿ ಬನ್ನಿ ಎಂದು ಅಭಿಮಾನಿಯೋರ್ವ ಕಮೆಂಟ್​ ಹಾಕಿದ್ದ. ಇದಕ್ಕೆ ಜಗ್ಗೇಶ್​ ಉತ್ತರ ನೀಡಿದ್ದಾರೆ.

20 ದಿನಗಳಿಂದ ಅದೇ ಕೆಲಸ ಮಾಡುತ್ತಿದ್ದೇನೆ. ನಿಮಗೆ ಧೈರ್ಯ ಇದ್ದರೆ ಬರಬಹುದು, ನಾನು ಕರೆದುಕೊಂಡು ಹೋಗುವೆ. ನಾರಾಯಣ ಆಸ್ಪತ್ರೆಯಲ್ಲಿ ಆಮ್ಲಜನಕ ಪಡೆದು ದೇವೆಗೌಡ ಬಂಕ್ ಹತ್ತಿರ ಕೊರೊನಾ ರೋಗಿಗೆ ಕೊಟ್ಟು ಬರುತ್ತಿರುವೆ. ನಿಮಗೆ ಆಗುತ್ತ ನನ್ನ ಸಹಾಯಕ್ಕೆ ಬರಲು ಎಂದು ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ತಾವು ಎನು ಮಾಡುತ್ತಿದ್ದೇವೆ ಎಂಬುದನ್ನು ಜಗ್ಗೇಶ್​ ಹೇಳಿಕೊಂಡಿದ್ದಾರೆ. ಜಗ್ಗೇಶ್​ ಮಾಡುತ್ತಿರುವ ಕಾರ್ಯಕ್ಕೆ ಎಲ್ಲ ಕಡೆಗಳಿಂದ ಶ್ಲಾಘನೆ ವ್ಯಕ್ತವಾಗಿದೆ.

ಕೊರೊನಾ ಎರಡನೇ ಅಲೇ ದೊಡ್ಡ ಮಟ್ಟದಲ್ಲಿ ತೊಂದರೆ ನೀಡುತ್ತಿದೆ. ಸಾವುನೋವುಗಳು ಕೂಡ ಹೆಚ್ಚಾಗುತ್ತಿವೆ. ಬಾಲಿವುಡ್​ ನಟ ಸೋನು ಸೂದ್​ ಸೇರಿದಂತೆ ಸಾಕಷ್ಟು ಮಂದಿ ಜನಸಾಮಾನ್ಯರ ಸಹಾಯಕ್ಕೆ ನಿಂತಿದ್ದಾರೆ. ಕನ್ನಡದ ಹೀರೋ ಅರ್ಜುನ್​ ಗೌಡ ಆ್ಯಂಬುಲೆನ್ಸ್​ ಡ್ರೈವರ್ ಆಗುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಇದನ್ನೂ ಓದಿ: Actor Arjun Gowda: ಜನರ ಕಷ್ಟ ನೋಡಲಾಗದೇ ಆ್ಯಂಬುಲೆನ್ಸ್​ ಚಾಲಕನಾದ ಕನ್ನಡ ಸಿನಿಮಾ ನಟ ಅರ್ಜುನ್​​ ಗೌಡ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ