Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಲ್​ ಹೀರೋ ಆದ ಜಗ್ಗೇಶ್​; 20 ದಿನಗಳಿಂದ ಕೊರೊನಾ ರೋಗಿಗಳ ಸೇವೆಯಲ್ಲಿ ನಟ

ಬಾಲಿವುಡ್​ ನಟ ಸೋನು ಸೂದ್​ ಸೇರಿದಂತೆ ಸಾಕಷ್ಟು ಮಂದಿ ಜನಸಾಮಾನ್ಯರ ಸಹಾಯಕ್ಕೆ ನಿಂತಿದ್ದಾರೆ. ಕನ್ನಡದ ಹೀರೋ ಅರ್ಜುನ್​ ಗೌಡ ಆ್ಯಂಬುಲೆನ್ಸ್​ ಡ್ರೈವರ್ ಆಗುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ರಿಯಲ್​ ಹೀರೋ ಆದ ಜಗ್ಗೇಶ್​; 20 ದಿನಗಳಿಂದ ಕೊರೊನಾ ರೋಗಿಗಳ ಸೇವೆಯಲ್ಲಿ ನಟ
ನಟ ಜಗ್ಗೇಶ್​
Follow us
ರಾಜೇಶ್ ದುಗ್ಗುಮನೆ
|

Updated on: Apr 30, 2021 | 7:13 PM

ಕೊರೊನಾ ವೈರಸ್​ ಮಿತಿಮೀರಿ ಹರಡುತ್ತಿದೆ. ಇದರಿಂದ ಅನೇಕ ಸೆಲೆಬ್ರಿಟಿಗಳು ಮನೆಯಲ್ಲೇ ಕೂತಿದ್ದಾರೆ. ಆದರೆ, ಕೆಲವೇ ಕೆಲವು ಸೆಲೆಬ್ರಿಟಿಗಳು ಮಾತ್ರ ಮನೆಯಿಂದ ಹೊರಬಂದು ಕೊರೊನಾ ರೋಗಿಗಳ ಸೇವೆ ಮಾಡುತ್ತಿದ್ದಾರೆ. ಇದಕ್ಕೆ ನಟ ಜಗ್ಗೇಶ್​ ಕೂಡ ಹೊರತಾಗಿಲ್ಲ. ಅವರು ಕಳೆದ 20 ದಿನಗಳಿಂದ ಕೊರೊನಾ ರೋಗಿಗಳಿಗೆ ಸಹಾಯ ಮಾಡುತ್ತಿದ್ದಾರೆ.

ಇತ್ತೀಚೆಗೆ ಜಗ್ಗೇಶ್​ ಟ್ವೀಟ್ ಒಂದನ್ನು ಮಾಡಿದ್ದರು. ಈ ಟ್ವೀಟ್​ನಲ್ಲಿ, ಮಾನ್ಯ ಮುಖ್ಯ ಮಂತ್ರಿಗಳ ಗಮನಕ್ಕೆ. ಕೊರೊನಾ ರೋಗಿ ಅಡ್ಮಿಟ್ ಆದ 2-3ದಿನಕ್ಕೆ ಸಾವು ಸಂಭವಿಸುತ್ತಿದೆ. ವೈದ್ಯರು ಯಾವ ರೀತಿ ಚಿಕಿತ್ಸೆ ನೀಡುತ್ತಾರೆ ಎಂಬುದು ಬಂಧುಗಳಿಗೆ ತಿಳಿಯದು. ಸಾವಾಗಿದೆ ಎಂದು ತಿಳಿಸುತ್ತಾರೆ ಆದರೆ ಮುಖ ನೋಡಲಾಗದು. ಕೆಲ ಸಿಬ್ಬಂದಿ ಹೊರತುಪಡಿಸಿ ಬೇರೆ ಯಾರೂ ಸಿಗುವುದಿಲ್ಲ ಎಂದು ಬರೆದುಕೊಂಡಿದ್ದರು.

ಈ ಟ್ವೀಟ್​ಗೆ ನಿಮಗೆ ಚಿಕಿತ್ಸೆ ಬಗ್ಗೆ ಅನುಮಾನ ಇದ್ದರೆ PPE ಕಿಟ್​ ಹಾಕಿಕೊಂಡು ಒಳಗೆ ಹೋಗಿ ನೋಡಿ ಬನ್ನಿ ಎಂದು ಅಭಿಮಾನಿಯೋರ್ವ ಕಮೆಂಟ್​ ಹಾಕಿದ್ದ. ಇದಕ್ಕೆ ಜಗ್ಗೇಶ್​ ಉತ್ತರ ನೀಡಿದ್ದಾರೆ.

20 ದಿನಗಳಿಂದ ಅದೇ ಕೆಲಸ ಮಾಡುತ್ತಿದ್ದೇನೆ. ನಿಮಗೆ ಧೈರ್ಯ ಇದ್ದರೆ ಬರಬಹುದು, ನಾನು ಕರೆದುಕೊಂಡು ಹೋಗುವೆ. ನಾರಾಯಣ ಆಸ್ಪತ್ರೆಯಲ್ಲಿ ಆಮ್ಲಜನಕ ಪಡೆದು ದೇವೆಗೌಡ ಬಂಕ್ ಹತ್ತಿರ ಕೊರೊನಾ ರೋಗಿಗೆ ಕೊಟ್ಟು ಬರುತ್ತಿರುವೆ. ನಿಮಗೆ ಆಗುತ್ತ ನನ್ನ ಸಹಾಯಕ್ಕೆ ಬರಲು ಎಂದು ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ತಾವು ಎನು ಮಾಡುತ್ತಿದ್ದೇವೆ ಎಂಬುದನ್ನು ಜಗ್ಗೇಶ್​ ಹೇಳಿಕೊಂಡಿದ್ದಾರೆ. ಜಗ್ಗೇಶ್​ ಮಾಡುತ್ತಿರುವ ಕಾರ್ಯಕ್ಕೆ ಎಲ್ಲ ಕಡೆಗಳಿಂದ ಶ್ಲಾಘನೆ ವ್ಯಕ್ತವಾಗಿದೆ.

ಕೊರೊನಾ ಎರಡನೇ ಅಲೇ ದೊಡ್ಡ ಮಟ್ಟದಲ್ಲಿ ತೊಂದರೆ ನೀಡುತ್ತಿದೆ. ಸಾವುನೋವುಗಳು ಕೂಡ ಹೆಚ್ಚಾಗುತ್ತಿವೆ. ಬಾಲಿವುಡ್​ ನಟ ಸೋನು ಸೂದ್​ ಸೇರಿದಂತೆ ಸಾಕಷ್ಟು ಮಂದಿ ಜನಸಾಮಾನ್ಯರ ಸಹಾಯಕ್ಕೆ ನಿಂತಿದ್ದಾರೆ. ಕನ್ನಡದ ಹೀರೋ ಅರ್ಜುನ್​ ಗೌಡ ಆ್ಯಂಬುಲೆನ್ಸ್​ ಡ್ರೈವರ್ ಆಗುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಇದನ್ನೂ ಓದಿ: Actor Arjun Gowda: ಜನರ ಕಷ್ಟ ನೋಡಲಾಗದೇ ಆ್ಯಂಬುಲೆನ್ಸ್​ ಚಾಲಕನಾದ ಕನ್ನಡ ಸಿನಿಮಾ ನಟ ಅರ್ಜುನ್​​ ಗೌಡ

ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ