ರಿಯಲ್​ ಹೀರೋ ಆದ ಜಗ್ಗೇಶ್​; 20 ದಿನಗಳಿಂದ ಕೊರೊನಾ ರೋಗಿಗಳ ಸೇವೆಯಲ್ಲಿ ನಟ

ಬಾಲಿವುಡ್​ ನಟ ಸೋನು ಸೂದ್​ ಸೇರಿದಂತೆ ಸಾಕಷ್ಟು ಮಂದಿ ಜನಸಾಮಾನ್ಯರ ಸಹಾಯಕ್ಕೆ ನಿಂತಿದ್ದಾರೆ. ಕನ್ನಡದ ಹೀರೋ ಅರ್ಜುನ್​ ಗೌಡ ಆ್ಯಂಬುಲೆನ್ಸ್​ ಡ್ರೈವರ್ ಆಗುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ರಿಯಲ್​ ಹೀರೋ ಆದ ಜಗ್ಗೇಶ್​; 20 ದಿನಗಳಿಂದ ಕೊರೊನಾ ರೋಗಿಗಳ ಸೇವೆಯಲ್ಲಿ ನಟ
ನಟ ಜಗ್ಗೇಶ್​
Follow us
|

Updated on: Apr 30, 2021 | 7:13 PM

ಕೊರೊನಾ ವೈರಸ್​ ಮಿತಿಮೀರಿ ಹರಡುತ್ತಿದೆ. ಇದರಿಂದ ಅನೇಕ ಸೆಲೆಬ್ರಿಟಿಗಳು ಮನೆಯಲ್ಲೇ ಕೂತಿದ್ದಾರೆ. ಆದರೆ, ಕೆಲವೇ ಕೆಲವು ಸೆಲೆಬ್ರಿಟಿಗಳು ಮಾತ್ರ ಮನೆಯಿಂದ ಹೊರಬಂದು ಕೊರೊನಾ ರೋಗಿಗಳ ಸೇವೆ ಮಾಡುತ್ತಿದ್ದಾರೆ. ಇದಕ್ಕೆ ನಟ ಜಗ್ಗೇಶ್​ ಕೂಡ ಹೊರತಾಗಿಲ್ಲ. ಅವರು ಕಳೆದ 20 ದಿನಗಳಿಂದ ಕೊರೊನಾ ರೋಗಿಗಳಿಗೆ ಸಹಾಯ ಮಾಡುತ್ತಿದ್ದಾರೆ.

ಇತ್ತೀಚೆಗೆ ಜಗ್ಗೇಶ್​ ಟ್ವೀಟ್ ಒಂದನ್ನು ಮಾಡಿದ್ದರು. ಈ ಟ್ವೀಟ್​ನಲ್ಲಿ, ಮಾನ್ಯ ಮುಖ್ಯ ಮಂತ್ರಿಗಳ ಗಮನಕ್ಕೆ. ಕೊರೊನಾ ರೋಗಿ ಅಡ್ಮಿಟ್ ಆದ 2-3ದಿನಕ್ಕೆ ಸಾವು ಸಂಭವಿಸುತ್ತಿದೆ. ವೈದ್ಯರು ಯಾವ ರೀತಿ ಚಿಕಿತ್ಸೆ ನೀಡುತ್ತಾರೆ ಎಂಬುದು ಬಂಧುಗಳಿಗೆ ತಿಳಿಯದು. ಸಾವಾಗಿದೆ ಎಂದು ತಿಳಿಸುತ್ತಾರೆ ಆದರೆ ಮುಖ ನೋಡಲಾಗದು. ಕೆಲ ಸಿಬ್ಬಂದಿ ಹೊರತುಪಡಿಸಿ ಬೇರೆ ಯಾರೂ ಸಿಗುವುದಿಲ್ಲ ಎಂದು ಬರೆದುಕೊಂಡಿದ್ದರು.

ಈ ಟ್ವೀಟ್​ಗೆ ನಿಮಗೆ ಚಿಕಿತ್ಸೆ ಬಗ್ಗೆ ಅನುಮಾನ ಇದ್ದರೆ PPE ಕಿಟ್​ ಹಾಕಿಕೊಂಡು ಒಳಗೆ ಹೋಗಿ ನೋಡಿ ಬನ್ನಿ ಎಂದು ಅಭಿಮಾನಿಯೋರ್ವ ಕಮೆಂಟ್​ ಹಾಕಿದ್ದ. ಇದಕ್ಕೆ ಜಗ್ಗೇಶ್​ ಉತ್ತರ ನೀಡಿದ್ದಾರೆ.

20 ದಿನಗಳಿಂದ ಅದೇ ಕೆಲಸ ಮಾಡುತ್ತಿದ್ದೇನೆ. ನಿಮಗೆ ಧೈರ್ಯ ಇದ್ದರೆ ಬರಬಹುದು, ನಾನು ಕರೆದುಕೊಂಡು ಹೋಗುವೆ. ನಾರಾಯಣ ಆಸ್ಪತ್ರೆಯಲ್ಲಿ ಆಮ್ಲಜನಕ ಪಡೆದು ದೇವೆಗೌಡ ಬಂಕ್ ಹತ್ತಿರ ಕೊರೊನಾ ರೋಗಿಗೆ ಕೊಟ್ಟು ಬರುತ್ತಿರುವೆ. ನಿಮಗೆ ಆಗುತ್ತ ನನ್ನ ಸಹಾಯಕ್ಕೆ ಬರಲು ಎಂದು ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ತಾವು ಎನು ಮಾಡುತ್ತಿದ್ದೇವೆ ಎಂಬುದನ್ನು ಜಗ್ಗೇಶ್​ ಹೇಳಿಕೊಂಡಿದ್ದಾರೆ. ಜಗ್ಗೇಶ್​ ಮಾಡುತ್ತಿರುವ ಕಾರ್ಯಕ್ಕೆ ಎಲ್ಲ ಕಡೆಗಳಿಂದ ಶ್ಲಾಘನೆ ವ್ಯಕ್ತವಾಗಿದೆ.

ಕೊರೊನಾ ಎರಡನೇ ಅಲೇ ದೊಡ್ಡ ಮಟ್ಟದಲ್ಲಿ ತೊಂದರೆ ನೀಡುತ್ತಿದೆ. ಸಾವುನೋವುಗಳು ಕೂಡ ಹೆಚ್ಚಾಗುತ್ತಿವೆ. ಬಾಲಿವುಡ್​ ನಟ ಸೋನು ಸೂದ್​ ಸೇರಿದಂತೆ ಸಾಕಷ್ಟು ಮಂದಿ ಜನಸಾಮಾನ್ಯರ ಸಹಾಯಕ್ಕೆ ನಿಂತಿದ್ದಾರೆ. ಕನ್ನಡದ ಹೀರೋ ಅರ್ಜುನ್​ ಗೌಡ ಆ್ಯಂಬುಲೆನ್ಸ್​ ಡ್ರೈವರ್ ಆಗುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಇದನ್ನೂ ಓದಿ: Actor Arjun Gowda: ಜನರ ಕಷ್ಟ ನೋಡಲಾಗದೇ ಆ್ಯಂಬುಲೆನ್ಸ್​ ಚಾಲಕನಾದ ಕನ್ನಡ ಸಿನಿಮಾ ನಟ ಅರ್ಜುನ್​​ ಗೌಡ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ