AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗ್ಗೇಶ್​ ನಟನಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದ ಗುರುಗಳ ನಿಧನ! ಕಂಬನಿ ಮಿಡಿದ ನವರಸ ನಾಯಕ

Jaggesh: ನಟ ಜಗ್ಗೇಶ್ ಅವರು ಅಭಿಮಾನಿಗಳ ಜೊತೆ ಆಗಾಗ ತಮ್ಮ ಖಾಸಗಿ ಜೀವನದ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಾರೆ. ಈಗ ಅವರೊಂದು ಬೇಸರದ ಸಂಗತಿ ತಿಳಿಸಿದ್ದಾರೆ.

ಜಗ್ಗೇಶ್​ ನಟನಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದ ಗುರುಗಳ ನಿಧನ! ಕಂಬನಿ ಮಿಡಿದ ನವರಸ ನಾಯಕ
ಜಗ್ಗೇಶ್​​
ಮದನ್​ ಕುಮಾರ್​
|

Updated on: Mar 19, 2021 | 2:15 PM

Share

ನಟ ಜಗ್ಗೇಶ್​ ಓರ್ವ ಅಪ್ರತಿಮ ಕಲಾವಿದ ಎಂಬುದರಲ್ಲಿ ಅನುಮಾನವೇ ಇಲ್ಲ. ಕನ್ನಡ ಚಿತ್ರರಂಗದಲ್ಲಿ ಅವರು ಮೂರು ದಶಕಗಳ ಹಿಂದೆಯೇ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತು ಪಡಿಸಿದರು. ಈಗಲೂ ಬಹುಬೇಡಿಕೆಯ ಕಲಾವಿದನಾಗಿ ಸ್ಯಾಂಡಲ್​ವುಡ್​ನಲ್ಲಿ ಸಕ್ರಿಯರಾಗಿದ್ದಾರೆ. ಆದರೆ ಅವರು ಬಾಲ್ಯದಲ್ಲಿ ಇದ್ದಾಗಲೇ ಅವರೊಳಗಿನ ಕಲಾವಿದನನ್ನು ಗುರುತಿಸಿದ್ದು ಯಾರು ಎಂಬ ಬಗ್ಗೆ ಜಗ್ಗೇಶ್​ ಈಗ ಮಾಹಿತಿ ನೀಡಿದ್ದಾರೆ. ತೀವ್ರ ನೋವಿನೊಂದಿಗೆ ಅವರು ಆ ವಿಚಾರವನ್ನು ನೆನಪು ಮಾಡಿಕೊಂಡಿದ್ದಾರೆ.

ಹೌದು, ಜಗ್ಗೇಶ್​ ಅವರು ಪ್ರೌಡಶಾಲಾ ವಿದ್ಯಾರ್ಥಿ ಆಗಿದ್ದಾಗಲೇ ಅವರೊಳಗಿನ ಕಲಾವಿದನ್ನು ಒಬ್ಬರು ಶಿಕ್ಷಕರು ಗುರುತಿಸಿದ್ದರು. ಅವರ ಹೆಸರು ಎಂ. ರಾಮಮೂರ್ತಿ. ಆದರೆ ಇಂದು ಅವರು ನಮ್ಮೊಂದಿಗಿಲ್ಲ. ಗುರುವಾರ ರಾತ್ರಿ 8.40ಕ್ಕೆ ಇಹಲೋಕ ತ್ಯಜಿಸಿದರು. ಟ್ವಿಟರ್​ ಮೂಲಕ ಈ ಬೇಸರದ ಸುದ್ದಿಯನ್ನು ಜಗ್ಗೇಶ್​ ತಿಳಿಸಿದ್ದಾರೆ. ತಮ್ಮ ನೆಚ್ಚಿನ ಶಿಕ್ಷಕರನ್ನು ಅವರು ನೆನಪು ಮಾಡಿಕೊಂಡಿದ್ದಾರೆ.

‘ನನಗೆ ಗಣಿತ – ವಿಜ್ಞಾನ ಪಾಠ ಮಾಡಿ ಹಾಗು ಒಂದಲ್ಲಾ ಒಂದು ದಿನ ಇವನು ಕಲಾವಿದ ಆಗುತ್ತಾನೆ ಎಂದು ನಾನು 8ನೇ ಕ್ಲಾಸಿನಲ್ಲಿ ಇರಬೇಕಾದರೆ ಭವಿಷ್ಯ ನುಡಿದಿದ್ದ ಗುರುಗಳು. ಮಾರ್ಚ್​ 18ರಂದು ಶಿವನಲ್ಲಿ ಲೀನವಾದರು. ನಮ್ಮ #MRM SIR.. #BPIHS ಶಾಲೆ ಮಲ್ಲೇಶ್ವರದ ಹೆಮ್ಮೆಯ ಪ್ರಾಧ್ಯಾಪಕರ ಆತ್ಮಕ್ಕೆ ಶಾಂತಿ ಕೋರುವ ನಿಮ್ಮ ತುಂಟ ವಿದ್ಯಾರ್ಥಿ ಈಶ್ವರ ಗೌಡ. ಓಂಶಾಂತಿ…’ ಎಂದು ಜಗ್ಗೇಶ್​ ಟ್ವೀಟ್​ ಮಾಡಿದ್ದಾರೆ. ಎಂ. ರಾಮಮೂರ್ತಿ ಅವರಿಗೆ ಜಗ್ಗೇಶ್​ ರೀತಿಯೇ ಅನೇಕ ವಿದ್ಯಾರ್ಥಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ.

ಎಂ. ರಾಮಮೂರ್ತಿ ನಿಧನದ ಬಗ್ಗೆ ಅವರ ಪುತ್ರ ಫೇಸ್​ಬುಕ್​ನಲ್ಲಿ ಪೋಸ್ಟ್​ ಮಾಡಿದ್ದಾರೆ. 60 ವರ್ಷಗಳ ಕಾಲ ಗಣಿತ ಮತ್ತು ವಿಜ್ಞಾನ ಪಾಠ ಮಾಡಿದ ಅನುಭವ ರಾಮಮೂರ್ತಿ ಅವರದ್ದಾಗಿತ್ತು. ಲಕ್ಷಾಂತರ ವಿದ್ಯಾರ್ಥಿಗಳಿಗೆ ಅವರು ಪಾಠ ಮಾಡಿದ್ದರು. ಬಿ.ಪಿ. ಇಂಡಿಯನ್​ ಪಬ್ಲಿಕ್​ ಸ್ಕೂಲ್​ ಮತ್ತು ನಾಗಸೇನಾ ವಿದ್ಯಾಲಯದಲ್ಲಿ ಸೇವೆ ಸಲ್ಲಿಸಿದ್ದರು. ಜಗ್ಗೇಶ್​ ಒಬ್ಬ ಕಲಾವಿದನಾಗುತ್ತಾರೆ ಎಂಬುದನ್ನು ಚಿಕ್ಕ ವಯಸ್ಸಿನಲ್ಲಿಯೇ ರಾಮಮೂರ್ತಿ ಅವರು ಗುರುತಿಸಿದ್ದರು.

ಇದನ್ನೂ ಓದಿ: ನವರಸ ನಾಯಕ ಜಗ್ಗೇಶ್​ಗೆ ಹ್ಯಾಪಿ ಬರ್ತ್​​ಡೇ ಹೇಳಿದ ಚಾಲೆಂಜಿಂಗ್​ ಸ್ಟಾರ್​ ದರ್ಶನ್!

Darshan Interview | ಜಗ್ಗೇಶ್​ ವಿವಾದಕ್ಕೆ ತೆರೆ: ಅಭಿಮಾನಿಗಳ ಪರವಾಗಿ ಕ್ಷಮೆ ಕೇಳಿದ ನಟ ದರ್ಶನ್​

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ