Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯತಿರಾಜ್​ ಕಾರು ಅಪಘಾತ ಪ್ರಕರಣ; ಪೊಲೀಸರಿಗೆ ಸೂಕ್ತ ಮಾಹಿತಿ ನೀಡದ ಜಗ್ಗೇಶ್, ಟ್ವೀಟ್​ ಡಿಲೀಟ್

ಕಾರನ್ನು ಯಾರು ಚಾಲನೆ ಮಾಡುತ್ತಿದ್ದರು ಎನ್ನುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕು. ಆದರೆ, ಆ ಕೆಲಸವನ್ನು ಜಗ್ಗೇಶ್​ ಮಾಡಿಲ್ಲ ಎನ್ನಲಾಗಿದೆ.

ಯತಿರಾಜ್​ ಕಾರು ಅಪಘಾತ ಪ್ರಕರಣ; ಪೊಲೀಸರಿಗೆ ಸೂಕ್ತ ಮಾಹಿತಿ ನೀಡದ ಜಗ್ಗೇಶ್, ಟ್ವೀಟ್​ ಡಿಲೀಟ್
ಜಗ್ಗೇಶ್​
Follow us
TV9 Web
| Updated By: ಮದನ್​ ಕುಮಾರ್​

Updated on: Jul 01, 2021 | 5:21 PM

ಕನ್ನಡ ಚಿತ್ರರಂಗದ ಹಿರಿಯ ನಟ ಜಗ್ಗೇಶ್ ಅವರ ಪುತ್ರ ಯತಿರಾಜ್ ಚಲಿಸುತ್ತಿದ್ದ ಬಿಎಂಡಬ್ಲ್ಯೂ ಕಾರು ಬೆಂಗಳೂರು ಹೈದರಾಬಾದ್ ರಸ್ತೆಯ ಅಗಲಗುರ್ಕಿ ಬಳಿ ಇಂದು (ಜುಲೈ 1) ಮಧ್ಯಾಹ್ನ  ಅಪಘಾತಕ್ಕೆ ತುತ್ತಾಗಿದೆ. ಅಪಘಾತ ನಡೆದ ನಂತರ ಜಗ್ಗೇಶ್​ ಕುಟುಂಬ ಪೊಲೀಸರಿಗೆ ಸರಿಯಾದ ಮಾಹಿತಿ ನೀಡಿಲ್ಲ ಎನ್ನಲಾಗಿದೆ.

ಕಾರನ್ನು ಯಾರು ಚಾಲನೆ ಮಾಡುತ್ತಿದ್ದರು ಎನ್ನುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕು. ಆದರೆ, ಆ ಕೆಲಸವನ್ನು ಜಗ್ಗೇಶ್​ ಮಾಡಿಲ್ಲ. ಕಾರು ಅಪಘಾತದ ಬಗ್ಗೆಯೂ ಪೊಲೀಸರಿಗೆ ದೂರು ನೀಡಿಲ್ಲ. ಇದರಿಂದ ಕಾರು ಅಪಘಾತ ಪ್ರಕರಣದ ಬಗ್ಗೆ ಗೊಂದಲ ಸೃಷ್ಟಿಯಾಗಿದೆ. ಹೀಗಾಗಿ ಪ್ರತ್ಯಕ್ಷದರ್ಶಿಗಳಿಂದ ದೂರು ಪಡೆಯಲಾಗುತ್ತಿದೆ ಎಂದು ಚಿಕ್ಕಬಳ್ಳಾಪುರ ಎಸ್​ಪಿ ಜಿ.ಕೆ. ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.

ಕಾರಿನ ನಂಬರ್ ಮಾಲಿಕತ್ವದ ಬಗ್ಗೆ ತಿಳಿದುಕೊಳ್ಳಲು ಪೊಲೀಸರು ಸಾರಿಗೆ ಇಲಾಖೆಯ ಮೊರೆ ಹೋಗಿದ್ದಾರೆ. ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಕಲೆ ಹಾಕುವ ಕಾರ್ಯ ಮುಂದುವರಿದಿದೆ.

ಇನ್ನು, ಜಗ್ಗೇಶ್​ ಅಪಘಾತದ ಬಗ್ಗೆ ಮಾಡಿರುವ ಟ್ವೀಟ್​ಗಳನ್ನು ಡಿಲೀಟ್​ ಮಾಡಿದ್ದು ಕೂಡ ಸಾಕಷ್ಟು ಅನುಮಾನ ಹುಟ್ಟುಹಾಕಿದೆ. ‘ಕೊರೊನಾ ಬಂದಾಗಿನಿಂದ ಹೊರ ಹೋಗಿಲ್ಲ. ಹೀಗಾಗಿ, ಹೊರಗೆ ಹೋಗಿಬರುವೆ ಎಂದು ಅಮ್ಮನಿಗೆ ಹೇಳಿ ಮಗ ಯತಿರಾಜ್​ ಹೊರಹೋಗಿದ್ದ. ಅವನ ಇಷ್ಟದ ರಸ್ತೆ ಬೆಂಗಳೂರು-ಚಿಕ್ಕಬಳ್ಳಾಪುರ ರಸ್ತೆಯಲ್ಲಿ ಹೋಗುವಾಗ ಅಡ್ಡ ಬಂದ ನಾಯಿ ರಕ್ಷಿಸಲು ಹೋಗಿ ರಸ್ತೆ ವಿಭಜಕ್ಕೆ ಹೊಡೆದು ಕಾರು ಪಕ್ಕದ ರಸ್ತೆಗೆ ಬಿದ್ದಿದೆ. ರಾಯರ ದಯೆ ಹಾಗೂ ನಿಮ್ಮ ಶುಭಹಾರೈಕೆ ಯತಿರಾಜನಿಗೆ ಸಣ್ಣ ಗಾಯವೂ ಆಗಿಲ್ಲ’ ಎಂದು ಬರೆದುಕೊಂಡಿದ್ದರು. ಆದರೆ, ಅವರ ಖಾತೆಯಲ್ಲಿ ಈ ಟ್ವೀಟ್​ ಕಾಣುತ್ತಿಲ್ಲ.

ಇದನ್ನೂ ಓದಿ:

ಗಂಭೀರ ಅಪಘಾತವಾದರೂ ಜಗ್ಗೇಶ್ ಮಗ ಯತಿರಾಜ್ ಪಾರಾಗಿದ್ದು ಹೇಗೆ? ಪ್ರತಿಕ್ರಿಯಿಸಿದ ನವರಸ ನಾಯಕ

ಅಪಘಾತದಲ್ಲಿ ನಟ ಜಗ್ಗೇಶ್​ ಮಗ ಯತಿರಾಜ್​​ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜು; ಇಲ್ಲಿವೆ ಫೋಟೋಗಳು

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!