AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯತಿರಾಜ್​ ಕಾರು ಅಪಘಾತ ಪ್ರಕರಣ; ಪೊಲೀಸರಿಗೆ ಸೂಕ್ತ ಮಾಹಿತಿ ನೀಡದ ಜಗ್ಗೇಶ್, ಟ್ವೀಟ್​ ಡಿಲೀಟ್

ಕಾರನ್ನು ಯಾರು ಚಾಲನೆ ಮಾಡುತ್ತಿದ್ದರು ಎನ್ನುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕು. ಆದರೆ, ಆ ಕೆಲಸವನ್ನು ಜಗ್ಗೇಶ್​ ಮಾಡಿಲ್ಲ ಎನ್ನಲಾಗಿದೆ.

ಯತಿರಾಜ್​ ಕಾರು ಅಪಘಾತ ಪ್ರಕರಣ; ಪೊಲೀಸರಿಗೆ ಸೂಕ್ತ ಮಾಹಿತಿ ನೀಡದ ಜಗ್ಗೇಶ್, ಟ್ವೀಟ್​ ಡಿಲೀಟ್
ಜಗ್ಗೇಶ್​
TV9 Web
| Edited By: |

Updated on: Jul 01, 2021 | 5:21 PM

Share

ಕನ್ನಡ ಚಿತ್ರರಂಗದ ಹಿರಿಯ ನಟ ಜಗ್ಗೇಶ್ ಅವರ ಪುತ್ರ ಯತಿರಾಜ್ ಚಲಿಸುತ್ತಿದ್ದ ಬಿಎಂಡಬ್ಲ್ಯೂ ಕಾರು ಬೆಂಗಳೂರು ಹೈದರಾಬಾದ್ ರಸ್ತೆಯ ಅಗಲಗುರ್ಕಿ ಬಳಿ ಇಂದು (ಜುಲೈ 1) ಮಧ್ಯಾಹ್ನ  ಅಪಘಾತಕ್ಕೆ ತುತ್ತಾಗಿದೆ. ಅಪಘಾತ ನಡೆದ ನಂತರ ಜಗ್ಗೇಶ್​ ಕುಟುಂಬ ಪೊಲೀಸರಿಗೆ ಸರಿಯಾದ ಮಾಹಿತಿ ನೀಡಿಲ್ಲ ಎನ್ನಲಾಗಿದೆ.

ಕಾರನ್ನು ಯಾರು ಚಾಲನೆ ಮಾಡುತ್ತಿದ್ದರು ಎನ್ನುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕು. ಆದರೆ, ಆ ಕೆಲಸವನ್ನು ಜಗ್ಗೇಶ್​ ಮಾಡಿಲ್ಲ. ಕಾರು ಅಪಘಾತದ ಬಗ್ಗೆಯೂ ಪೊಲೀಸರಿಗೆ ದೂರು ನೀಡಿಲ್ಲ. ಇದರಿಂದ ಕಾರು ಅಪಘಾತ ಪ್ರಕರಣದ ಬಗ್ಗೆ ಗೊಂದಲ ಸೃಷ್ಟಿಯಾಗಿದೆ. ಹೀಗಾಗಿ ಪ್ರತ್ಯಕ್ಷದರ್ಶಿಗಳಿಂದ ದೂರು ಪಡೆಯಲಾಗುತ್ತಿದೆ ಎಂದು ಚಿಕ್ಕಬಳ್ಳಾಪುರ ಎಸ್​ಪಿ ಜಿ.ಕೆ. ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.

ಕಾರಿನ ನಂಬರ್ ಮಾಲಿಕತ್ವದ ಬಗ್ಗೆ ತಿಳಿದುಕೊಳ್ಳಲು ಪೊಲೀಸರು ಸಾರಿಗೆ ಇಲಾಖೆಯ ಮೊರೆ ಹೋಗಿದ್ದಾರೆ. ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಕಲೆ ಹಾಕುವ ಕಾರ್ಯ ಮುಂದುವರಿದಿದೆ.

ಇನ್ನು, ಜಗ್ಗೇಶ್​ ಅಪಘಾತದ ಬಗ್ಗೆ ಮಾಡಿರುವ ಟ್ವೀಟ್​ಗಳನ್ನು ಡಿಲೀಟ್​ ಮಾಡಿದ್ದು ಕೂಡ ಸಾಕಷ್ಟು ಅನುಮಾನ ಹುಟ್ಟುಹಾಕಿದೆ. ‘ಕೊರೊನಾ ಬಂದಾಗಿನಿಂದ ಹೊರ ಹೋಗಿಲ್ಲ. ಹೀಗಾಗಿ, ಹೊರಗೆ ಹೋಗಿಬರುವೆ ಎಂದು ಅಮ್ಮನಿಗೆ ಹೇಳಿ ಮಗ ಯತಿರಾಜ್​ ಹೊರಹೋಗಿದ್ದ. ಅವನ ಇಷ್ಟದ ರಸ್ತೆ ಬೆಂಗಳೂರು-ಚಿಕ್ಕಬಳ್ಳಾಪುರ ರಸ್ತೆಯಲ್ಲಿ ಹೋಗುವಾಗ ಅಡ್ಡ ಬಂದ ನಾಯಿ ರಕ್ಷಿಸಲು ಹೋಗಿ ರಸ್ತೆ ವಿಭಜಕ್ಕೆ ಹೊಡೆದು ಕಾರು ಪಕ್ಕದ ರಸ್ತೆಗೆ ಬಿದ್ದಿದೆ. ರಾಯರ ದಯೆ ಹಾಗೂ ನಿಮ್ಮ ಶುಭಹಾರೈಕೆ ಯತಿರಾಜನಿಗೆ ಸಣ್ಣ ಗಾಯವೂ ಆಗಿಲ್ಲ’ ಎಂದು ಬರೆದುಕೊಂಡಿದ್ದರು. ಆದರೆ, ಅವರ ಖಾತೆಯಲ್ಲಿ ಈ ಟ್ವೀಟ್​ ಕಾಣುತ್ತಿಲ್ಲ.

ಇದನ್ನೂ ಓದಿ:

ಗಂಭೀರ ಅಪಘಾತವಾದರೂ ಜಗ್ಗೇಶ್ ಮಗ ಯತಿರಾಜ್ ಪಾರಾಗಿದ್ದು ಹೇಗೆ? ಪ್ರತಿಕ್ರಿಯಿಸಿದ ನವರಸ ನಾಯಕ

ಅಪಘಾತದಲ್ಲಿ ನಟ ಜಗ್ಗೇಶ್​ ಮಗ ಯತಿರಾಜ್​​ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜು; ಇಲ್ಲಿವೆ ಫೋಟೋಗಳು

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ