AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actor Jaggesh: ಒಂದು ತಿಂಗಳಾಗುತ್ತಾ ಬಂದರೂ ಟ್ವಿಟರ್​ಗೆ ಮರಳಲೇ ಇಲ್ಲ ನಟ ಜಗ್ಗೇಶ್

ಜಗ್ಗೇಶ್​ ಟ್ವಿಟರ್​ನಿಂದ ದೂರ ಉಳಿದು ಈಗ ಒಂದು ತಿಂಗಳಾಗುತ್ತಾ ಬಂದಿದೆ. ಆದಾಗ್ಯೂ ಅವರು​ ಟ್ವಿಟರ್​ಗೆ ಮರಳಿಲ್ಲ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

Actor Jaggesh: ಒಂದು ತಿಂಗಳಾಗುತ್ತಾ ಬಂದರೂ ಟ್ವಿಟರ್​ಗೆ ಮರಳಲೇ ಇಲ್ಲ ನಟ ಜಗ್ಗೇಶ್
ಜಗ್ಗೇಶ್​
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Jun 10, 2021 | 7:23 AM

Share

ನಟ ಜಗ್ಗೇಶ್​ ಸಾಮಾಜಿಕ ಜಾಲತಾಣದಲ್ಲಿ ಸದಾ ಆ್ಯಕ್ಟಿವ್​ ಆಗಿರುತ್ತಾರೆ. ಅಭಿಮಾನಿಗಳು ಮಾಡುವ ಧನಾತ್ಮಕ ಹಾಗೂ ಋಣಾತ್ಮಕ ಟ್ವೀಟ್​ಗಳಿಗೆ ಜಗ್ಗೇಶ್​ ಸಾಕಷ್ಟು ಬಾರಿ ಉತ್ತರಿಸಿದ್ದಿದೆ. ಆದರ, ಈಗ ಅವರು ಟ್ವಿಟರ್​ ತೊರೆದು ಒಂದು ತಿಂಗಳಾಗುತ್ತಾ ಬಂದಿದೆ. ಅವರು ಟ್ವಿಟರ್​ಗೆ ಮರಳೋದು ಯಾವಾಗ ಎಂದು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ.

ಕೊರೊನಾ ಕಾಲದಲ್ಲಿ ನಟ ಜಗ್ಗೇಶ್​ ಎಲ್ಲರ ಸಹಾಯಕ್ಕೆ ನಿಂತಿದ್ದರು. ಅಗತ್ಯ ಇರುವ ಕೊರೊನಾ ರೋಗಿಗಳಿಗೆ ವೈದ್ಯಕೀಯ ಆಮ್ಲಜನಕ ಸಿಲಿಂಡರ್​ ಪೂರೈಕೆ ಮಾಡುವ ಕೆಲಸದಲ್ಲಿ ತೊಡಗಿದ್ದರು. ಆದರೆ, ಬಳಿಕ ಕೊರೊನಾ ಅವರ ಆಪ್ತರನ್ನೇ ಬಲಿ ತೆಗೆದುಕೊಂಡಿತ್ತು. ಈ ಕಾರಣದಿಂದ ಮೇ 14ರಂದು ಕೆಲ ಸಮಯದವರೆಗೆ ಸಾಮಾಜಿಕ ಜಾಲತಾಣದಿಂದ ದೂರ ಉಳಿಯುವ ನಿರ್ಧಾರವನ್ನು ಜಗ್ಗೇಶ್​ ತೆಗೆದುಕೊಂಡಿದ್ದರು.

‘ಕೆಲದಿನ ನಾ ಇಲ್ಲಿಂದ ದೂರ ಉಳಿಯುವೆ. ನನ್ನ ಆಪ್ತ ಮಾದೇಗೌಡನ ಮಗನ ಸಾವಿನಿಂದ ನನ್ನ ಮನಸ್ಸು ಒಡೆದು ಚೂರಾಗಿದೆ. ಏನು ಮಾಡಿದರೂ ಸಮಾಧಾನ ಆಗುತ್ತಿಲ್ಲ. ಬಂಗಾರದಂತಹ ನನ್ನ ಆತ್ಮೀಯ ಹೃದಯಗಳೇ ನಿಮ್ಮ ನೀವು ಕಾಪಾಡಿಕೊಳ್ಳಿ. ಇಂದಿನ ಯಾಂತ್ರಿಕ ಚಿಂತನೆ ಜಗದಲ್ಲಿ ಯಾರು ನಮಗಾಗಿ ಬರರು. ಸ್ವಾರ್ಥ, ಮೋಸ, ಧನದಾಹಿ ಜಗತ್ತು. ಒಳ್ಳೆಯವರಿಗಲ್ಲ ಇಂದಿನ ಜಗತ್ತು, ಕ್ಷಮೆಯಿರಲಿ’ಎಂದು ಜಗ್ಗೇಶ್​ ಬೇಸರ ಹೊರ ಹಾಕಿದ್ದರು.

ಜಗ್ಗೇಶ್​ ಟ್ವಿಟರ್​ನಿಂದ ದೂರ ಉಳಿದು ಈಗ ಒಂದು ತಿಂಗಳಾಗುತ್ತಾ ಬಂದಿದೆ. ಆದಾಗ್ಯೂ ಅವರು​ ಟ್ವಿಟರ್​ಗೆ ಮರಳಿಲ್ಲ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಹೀಗಾಗಿ, ಅಣ್ಣಾ ಬೇಗ ಬನ್ನಿ ಎಂದು ಕೆಲವರು ಟ್ವೀಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ: ಪ್ರಶಾಂತ್ ನೀಲ್ ಸಂಭಾವನೆ ಎಷ್ಟು? ಅತಿ ಹೆಚ್ಚು ಸಂಭಾವನೆ ಪಡೆಯುವ ನಿರ್ದೇಶಕ ವಿಚಾರಕ್ಕೆ ಪ್ರತಿಕ್ರಿಯಿಸಿದ ಸ್ಟಾರ್ ಡೈರೆಕ್ಟರ್

ರಿಯಲ್​ ಹೀರೋ ಆದ ಜಗ್ಗೇಶ್​; 20 ದಿನಗಳಿಂದ ಕೊರೊನಾ ರೋಗಿಗಳ ಸೇವೆಯಲ್ಲಿ ನಟ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!