AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್ ಹಳೆಯ ವಿಡಿಯೋ ಹಂಚಿಕೊಂಡ ನಟ ಜಗ್ಗೇಶ್​; ಗುರುಪೂರ್ಣಿಮೆಗೆ ವಿಶೇಷ ಸ್ಮರಣೆ

‘ನಮ್ಮದು ಕಲಾವಿದರ ಜಾತಿ. ಕಲಾವಿದರು ಬೆಳೆದರೆ ನನಗೆ ಖುಷಿ. ನಾನು ನಟ ಮಾತ್ರನಲ್ಲ. ನಾನು ಅಭಿಮಾನಿಯೂ ಹೌದು. ಕಲೆಯ ಅಭಿಮಾನ ನನಗೆ ತುಂಬಾನೇ ಇದೆ’ ಎಂದು ವಿಡಿಯೋದಲ್ಲಿ ರಾಜ್​ಕುಮಾರ್​ ಮಾತನಾಡಿದ್ದಾರೆ.

ರಾಜ್​ಕುಮಾರ್ ಹಳೆಯ ವಿಡಿಯೋ ಹಂಚಿಕೊಂಡ ನಟ ಜಗ್ಗೇಶ್​; ಗುರುಪೂರ್ಣಿಮೆಗೆ ವಿಶೇಷ ಸ್ಮರಣೆ
‘ಅಣ್ಣಾವ್ರ ಹಿತನುಡಿ ಮನದಲ್ಲಿ ಲೀನವಾಗಿ ಬದುಕಿನ ಭಾಗವಾಗಿದೆ’; ಗುರುಪೂರ್ಣಿಮೆ ದಿನ ಜಗ್ಗೇಶ್​ ಸ್ಮರಣೆ
TV9 Web
| Edited By: |

Updated on: Jul 24, 2021 | 4:59 PM

Share

ಇಂದು ಗುರುಪೂರ್ಣಿಮೆ. ತಮ್ಮ ಜೀವನದಲ್ಲಿ ಬಂದು ಒಂದಲ್ಲಾ ಒಂದು ರೀತಿಯಲ್ಲಿ ಪಾಠ ಕಲಿಸಿದ ಗುರುವನ್ನು ಎಲ್ಲರೂ ನೆನೆಯುತ್ತಿದ್ದಾರೆ. ನಟ ಜಗ್ಗೇಶ್​ ಕೂಡ ಈ ವಿಶೇಷ ದಿನದಂದು ತಮ್ಮ ಗುರುವನ್ನು ನೆನೆದಿದ್ದು, ವರನಟ ಡಾ. ರಾಜ್​ಕುಮಾರ್​ ಅವರಿಗೆ ಗುರುಪೂರ್ಣಿಮೆಯ ನಮನಗಳು ಎಂದಿದ್ದಾರೆ.

ರಾಜ್​ಕುಮಾರ್​ ಅವರು ಮಾತನಾಡಿದ ವಿಡಿಯೋವನ್ನು ಜಗ್ಗೇಶ್​ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ, ‘ಈ ಮಾತುಗಳನ್ನು ಎದುರಲ್ಲೇ ಕೂತು ಕೇಳಿದ ಅದೃಷ್ಟವಂತ ನಾನು. ಇವರ ಎಲ್ಲಾ ಹಿತನುಡಿ ನನ್ನ ಮನದಲ್ಲಿ ಲೀನವಾಗಿ ಬದುಕಿನ ಭಾಗವಾಗಿದೆ. ಯಾವಜನ್ಮದ ಪುಣ್ಯವೋ ಅವರ ಅಭಿಮಾನಿಯಾಗಿ, ಅವರ ಕಾಲದಲ್ಲೇ ನಟಿಸಿ ಅವರ ಬಳಿಯೇ ಶಹಭಾಸ್​​ಗಿರಿ ಪಡೆದುಬಿಟ್ಟೆ. ನನ್ನ ಕಲಾರಂಗದ ಗುರುವಿಗೆ ಗುರುಪೂರ್ಣಿಮೆಯ ನಮನಗಳು. ಗುರುಭ್ಯೋನಮಃ’ ಎಂದು ಜಗ್ಗೇಶ್​ ಬರೆದುಕೊಂಡಿದ್ದಾರೆ.

‘ನಮ್ಮದು ಕಲಾವಿದರ ಜಾತಿ. ಕಲಾವಿದರು ಬೆಳೆದರೆ ನನಗೆ ಖುಷಿ. ನಾನು ನಟ ಮಾತ್ರನಲ್ಲ. ನಾನು ಅಭಿಮಾನಿಯೂ ಹೌದು. ಕಲೆಯ ಅಭಿಮಾನ ನನಗೆ ತುಂಬಾನೇ ಇದೆ’ ಎಂದು ವಿಡಿಯೋದಲ್ಲಿ ರಾಜ್​ಕುಮಾರ್​ ಮಾತನಾಡಿದ್ದಾರೆ. ಇದಲ್ಲದೆ, ನಿರ್ಮಾಪಕರ ಬಗ್ಗೆಯೂ ರಾಜ್​ಕುಮಾರ್​ ಮಾತನಾಡಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿರುವ ಸೆಲೆಬ್ರಿಟಿಗಳಲ್ಲಿ ನಟ ಜಗ್ಗೇಶ್​ ಕೂಡ ಪ್ರಮುಖರು. ಸಿನಿಮಾ ಮಾತ್ರವಲ್ಲದೆ ಹಲವು ವಿಚಾರಗಳನ್ನು ಹಂಚಿಕೊಳ್ಳುವ ಅವರು ಸದಾ ಕಾಲ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರುತ್ತಾರೆ. ಕೊರೊನಾ ಎರಡನೇ ಹಾವಳಿ ಬಳಿಕ ಒಂದಷ್ಟು ದಿನಗಳ ಕಾಲ ಸಾಮಾಜಿಕ ಜಾಲತಾಣದಿಂದ ದೂರ ಉಳಿದುಕೊಂಡಿದ್ದ ಜಗ್ಗೇಶ್​ ಈಗ ಮತ್ತೆ ಸಕ್ರಿಯರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಜಗ್ಗೇಶ್​ ಅವರು ನಾಲ್ಕು ಒಳ್ಳೆಯ ಸ್ಕ್ರಿಪ್ಟ್​ಗಳನ್ನು ಕೇಳಿದ್ದಾರೆ. ಆ ಪೈಕಿ ಎರಡಕ್ಕೆ ಗ್ರೀನ್​ ಸಿಗ್ನಲ್​ ನೀಡಿದ್ದು, ಇನ್ನೆರಡು ಸ್ಕ್ರಿಪ್ಟ್​ಗಳ ಮಾತುಕತೆ ನಡೆಯುತ್ತಿದೆ ಎಂದು ಅವರು​ ಇತ್ತೀಚೆಗೆ ಮಾಹಿತಿ ನೀಡಿದ್ದರು. ವಿಜಯ್​ ಪ್ರಸಾದ್​ ನಿರ್ದೇಶನದ ‘ತೋತಾಪುರಿ’ ಸಿನಿಮಾ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: ದರ್ಶನ್​ ವಿವಾದ: ಫ್ಯಾನ್ಸ್​ ಇಟ್ಟ ಬೇಡಿಕೆಗೆ ಒಂದೇ ಮಾತಲ್ಲಿ ಉತ್ತರಿಸಿದ ಜಗ್ಗೇಶ್​

ಜಗ್ಗೇಶ್​ 10ನೇ ಕ್ಲಾಸ್​ ಅಂಕಪಟ್ಟಿ ವೈರಲ್​; ಅಪ್ಪನಿಂದ ಬಿದ್ದಿತ್ತು ಬೂಟಿನ ಏಟು

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು