Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್​ಕುಮಾರ್ ಹಳೆಯ ವಿಡಿಯೋ ಹಂಚಿಕೊಂಡ ನಟ ಜಗ್ಗೇಶ್​; ಗುರುಪೂರ್ಣಿಮೆಗೆ ವಿಶೇಷ ಸ್ಮರಣೆ

‘ನಮ್ಮದು ಕಲಾವಿದರ ಜಾತಿ. ಕಲಾವಿದರು ಬೆಳೆದರೆ ನನಗೆ ಖುಷಿ. ನಾನು ನಟ ಮಾತ್ರನಲ್ಲ. ನಾನು ಅಭಿಮಾನಿಯೂ ಹೌದು. ಕಲೆಯ ಅಭಿಮಾನ ನನಗೆ ತುಂಬಾನೇ ಇದೆ’ ಎಂದು ವಿಡಿಯೋದಲ್ಲಿ ರಾಜ್​ಕುಮಾರ್​ ಮಾತನಾಡಿದ್ದಾರೆ.

ರಾಜ್​ಕುಮಾರ್ ಹಳೆಯ ವಿಡಿಯೋ ಹಂಚಿಕೊಂಡ ನಟ ಜಗ್ಗೇಶ್​; ಗುರುಪೂರ್ಣಿಮೆಗೆ ವಿಶೇಷ ಸ್ಮರಣೆ
‘ಅಣ್ಣಾವ್ರ ಹಿತನುಡಿ ಮನದಲ್ಲಿ ಲೀನವಾಗಿ ಬದುಕಿನ ಭಾಗವಾಗಿದೆ’; ಗುರುಪೂರ್ಣಿಮೆ ದಿನ ಜಗ್ಗೇಶ್​ ಸ್ಮರಣೆ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 24, 2021 | 4:59 PM

ಇಂದು ಗುರುಪೂರ್ಣಿಮೆ. ತಮ್ಮ ಜೀವನದಲ್ಲಿ ಬಂದು ಒಂದಲ್ಲಾ ಒಂದು ರೀತಿಯಲ್ಲಿ ಪಾಠ ಕಲಿಸಿದ ಗುರುವನ್ನು ಎಲ್ಲರೂ ನೆನೆಯುತ್ತಿದ್ದಾರೆ. ನಟ ಜಗ್ಗೇಶ್​ ಕೂಡ ಈ ವಿಶೇಷ ದಿನದಂದು ತಮ್ಮ ಗುರುವನ್ನು ನೆನೆದಿದ್ದು, ವರನಟ ಡಾ. ರಾಜ್​ಕುಮಾರ್​ ಅವರಿಗೆ ಗುರುಪೂರ್ಣಿಮೆಯ ನಮನಗಳು ಎಂದಿದ್ದಾರೆ.

ರಾಜ್​ಕುಮಾರ್​ ಅವರು ಮಾತನಾಡಿದ ವಿಡಿಯೋವನ್ನು ಜಗ್ಗೇಶ್​ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ, ‘ಈ ಮಾತುಗಳನ್ನು ಎದುರಲ್ಲೇ ಕೂತು ಕೇಳಿದ ಅದೃಷ್ಟವಂತ ನಾನು. ಇವರ ಎಲ್ಲಾ ಹಿತನುಡಿ ನನ್ನ ಮನದಲ್ಲಿ ಲೀನವಾಗಿ ಬದುಕಿನ ಭಾಗವಾಗಿದೆ. ಯಾವಜನ್ಮದ ಪುಣ್ಯವೋ ಅವರ ಅಭಿಮಾನಿಯಾಗಿ, ಅವರ ಕಾಲದಲ್ಲೇ ನಟಿಸಿ ಅವರ ಬಳಿಯೇ ಶಹಭಾಸ್​​ಗಿರಿ ಪಡೆದುಬಿಟ್ಟೆ. ನನ್ನ ಕಲಾರಂಗದ ಗುರುವಿಗೆ ಗುರುಪೂರ್ಣಿಮೆಯ ನಮನಗಳು. ಗುರುಭ್ಯೋನಮಃ’ ಎಂದು ಜಗ್ಗೇಶ್​ ಬರೆದುಕೊಂಡಿದ್ದಾರೆ.

‘ನಮ್ಮದು ಕಲಾವಿದರ ಜಾತಿ. ಕಲಾವಿದರು ಬೆಳೆದರೆ ನನಗೆ ಖುಷಿ. ನಾನು ನಟ ಮಾತ್ರನಲ್ಲ. ನಾನು ಅಭಿಮಾನಿಯೂ ಹೌದು. ಕಲೆಯ ಅಭಿಮಾನ ನನಗೆ ತುಂಬಾನೇ ಇದೆ’ ಎಂದು ವಿಡಿಯೋದಲ್ಲಿ ರಾಜ್​ಕುಮಾರ್​ ಮಾತನಾಡಿದ್ದಾರೆ. ಇದಲ್ಲದೆ, ನಿರ್ಮಾಪಕರ ಬಗ್ಗೆಯೂ ರಾಜ್​ಕುಮಾರ್​ ಮಾತನಾಡಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿರುವ ಸೆಲೆಬ್ರಿಟಿಗಳಲ್ಲಿ ನಟ ಜಗ್ಗೇಶ್​ ಕೂಡ ಪ್ರಮುಖರು. ಸಿನಿಮಾ ಮಾತ್ರವಲ್ಲದೆ ಹಲವು ವಿಚಾರಗಳನ್ನು ಹಂಚಿಕೊಳ್ಳುವ ಅವರು ಸದಾ ಕಾಲ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರುತ್ತಾರೆ. ಕೊರೊನಾ ಎರಡನೇ ಹಾವಳಿ ಬಳಿಕ ಒಂದಷ್ಟು ದಿನಗಳ ಕಾಲ ಸಾಮಾಜಿಕ ಜಾಲತಾಣದಿಂದ ದೂರ ಉಳಿದುಕೊಂಡಿದ್ದ ಜಗ್ಗೇಶ್​ ಈಗ ಮತ್ತೆ ಸಕ್ರಿಯರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಜಗ್ಗೇಶ್​ ಅವರು ನಾಲ್ಕು ಒಳ್ಳೆಯ ಸ್ಕ್ರಿಪ್ಟ್​ಗಳನ್ನು ಕೇಳಿದ್ದಾರೆ. ಆ ಪೈಕಿ ಎರಡಕ್ಕೆ ಗ್ರೀನ್​ ಸಿಗ್ನಲ್​ ನೀಡಿದ್ದು, ಇನ್ನೆರಡು ಸ್ಕ್ರಿಪ್ಟ್​ಗಳ ಮಾತುಕತೆ ನಡೆಯುತ್ತಿದೆ ಎಂದು ಅವರು​ ಇತ್ತೀಚೆಗೆ ಮಾಹಿತಿ ನೀಡಿದ್ದರು. ವಿಜಯ್​ ಪ್ರಸಾದ್​ ನಿರ್ದೇಶನದ ‘ತೋತಾಪುರಿ’ ಸಿನಿಮಾ ಕೆಲಸಗಳಲ್ಲಿ ಅವರು ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: ದರ್ಶನ್​ ವಿವಾದ: ಫ್ಯಾನ್ಸ್​ ಇಟ್ಟ ಬೇಡಿಕೆಗೆ ಒಂದೇ ಮಾತಲ್ಲಿ ಉತ್ತರಿಸಿದ ಜಗ್ಗೇಶ್​

ಜಗ್ಗೇಶ್​ 10ನೇ ಕ್ಲಾಸ್​ ಅಂಕಪಟ್ಟಿ ವೈರಲ್​; ಅಪ್ಪನಿಂದ ಬಿದ್ದಿತ್ತು ಬೂಟಿನ ಏಟು

ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ