AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರ್ಮ ಹಿಂಬಾಲಿಸುತ್ತದೆ, ಪಾಪಕರ್ಮ ಅವನ ಸುಡುತ್ತದೆ’; ದರ್ಶನ್ ಕೇಸ್​ ಬೆನ್ನಲ್ಲೇ ಜಗ್ಗೇಶ್ ಮಾರ್ಮಿಕ ಟ್ವೀಟ್

ಕ್ಷುಲ್ಲಕ ಕಾರಣಕ್ಕಾಗಿ ರೇಣುಕಾ ಸ್ವಾಮಿ ಎಂಬುವವರನ್ನು ಹತ್ಯೆ ಮಾಡಲಾಗಿದೆ. ಈ ಆರೋಪದಲ್ಲಿ ದರ್ಶನ್​, ಪವಿತ್ರಾ ಗೌಡ, ವಿ. ವಿನಯ್ ಸೇರಿ 17 ಜನರು ಅರೆಸ್ಟ್ ಆಗಿದ್ದಾರೆ. ಆರು ದಿನಗಳ ಕಾಲ ದರ್ಶನ್ ವಿಚಾರಣೆ ನಡೆಯಲಿದೆ. ಇಂದಿನಿಂದ ಸಾಕ್ಷ್ಯ ಕಲೆ ಹಾಕೋ ಕೆಲಸ ಆರಂಭ ಆಗಲಿದೆ. ಅನೇಕ ಸೆಲೆಬ್ರಿಟಿಗಳು ಈ ಬಗ್ಗೆ ತಮ್ಮ ಅಭಿಪ್ರಾಯ ಹೊರ ಹಾಕಿದ್ದಾರೆ.

‘ಕರ್ಮ ಹಿಂಬಾಲಿಸುತ್ತದೆ, ಪಾಪಕರ್ಮ ಅವನ ಸುಡುತ್ತದೆ’; ದರ್ಶನ್ ಕೇಸ್​ ಬೆನ್ನಲ್ಲೇ ಜಗ್ಗೇಶ್ ಮಾರ್ಮಿಕ ಟ್ವೀಟ್
ದರ್ಶನ್-ಜಗ್ಗೇಶ್
Follow us
ರಾಜೇಶ್ ದುಗ್ಗುಮನೆ
|

Updated on: Jun 12, 2024 | 10:42 AM

ದರ್ಶನ್ (Darshan) ಕೊಲೆ ಪ್ರಕರಣ ಇಡೀ ಕರ್ನಾಟಕದಾದ್ಯಂತ ಸಂಚಲನ ಸೃಷ್ಟಿ ಮಾಡಿದೆ. ದರ್ಶನ್ ಅವರು ಈ ರೀತಿ ಮಾಡಬಾರದಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬಗೆಬಗೆಯ ಚರ್ಚೆ ನಡೆಯುತ್ತಿದೆ. ಕೆಲವು ಸೆಲೆಬ್ರಿಟಿಗಳು ತಮ್ಮ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ನಟ ಜಗ್ಗೇಶ್ ಕೂಡ ಈ ಬಗ್ಗೆ ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.

‘ಸರ್ವ ಆತ್ಮಾನೇನ ಬ್ರಹ್ಮ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಇದರ ಅರ್ಥವನ್ನು ಅವರು ವಿವರಿಸಿದ್ದಾರೆ. ‘ಸರ್ವ ಜೀವಿಯಲ್ಲಿ ದೇವರಿದ್ದಾನೆ. ಯಾರನ್ನು ಕೊಲ್ಲುವ ಹಕ್ಕು ಯಾರಿಗೂ ಇಲ್ಲ’ ಎಂದು ಜಗ್ಗೇಶ್ ಹೇಳಿದ್ದಾರೆ. ಈ ಮೂಲಕ ಅವರು ದರ್ಶನ್ ಬಗ್ಗೆಯೇ ಟ್ವೀಟ್ ಮಾಡಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

‘ಕರ್ಮ ಜೀವನವನ್ನು ಹಿಂಬಾಲಿಸುತ್ತದೆ. ಅವನ ಪಾಪಕರ್ಮ ಅವನ ಸುಡುತ್ತದೆ. ಕಲಿಯುಗದಲ್ಲಿ ದೇವರು ಕಲ್ಲಲ್ಲ. ಎಲ್ಲಾ ಕರ್ಮಕ್ಕೂ ತತ್ತಕ್ಷಣ ಫಲಿತಾಂಶ ಉಂಟು. ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ’ ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಿನಿಮೀಯ ರೀತಿಯಲ್ಲಿ ದರ್ಶನ್ ಲಿಂಕ್ ಪತ್ತೆ ಹಚ್ಚಿದ ಪೊಲೀಸರು

‘ಮದಕ್ಕೆ ಕಾರುಣ್ಯದ ಅರಿವಿಲ್ಲಾ’ ಎನ್ನುವ ವಾಕ್ಯವನ್ನೂ ಜಗ್ಗೇಶ್ ಅವರು ಬಳಸಿದ್ದಾರೆ. ಅಂದರೆ ಮದ ಇದ್ದವನಿಗೆ ಕರುಣೆ ಎಂಬುದೆಲ್ಲ ಇರುವುದಿಲ್ಲ ಎಂಬುದು ಈ ವಾಕ್ಯದ ಅರ್ಥ. ಈ ಟ್ವೀಟ್ ಸಖತ್ ವೈರಲ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ