Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹಂಕಾರ ಅಡಗಿ ಮನಸ್ಸು ಶಾಂತವಾಗುತ್ತೆ: ಮಹಾಕುಂಭಮೇಳದ ಬಗ್ಗೆ ಜಗ್ಗೇಶ್ ಮಾತು

‘ನವರಸ ನಾಯಕ’ ಜಗ್ಗೇಶ್ ಅವರು ಮಹಾಕುಂಭಮೇಳದಲ್ಲಿ ಪಾಲ್ಗೊಂಡಿದ್ದಾರೆ. ತಮ್ಮ ಅನುಭವವನ್ನು ಅವರು ವಿವರಿಸಿದ್ದಾರೆ. ಜಗ್ಗೇಶ್ ಅವರಿಗೆ ಅಪಾರ ದೈವ ಭಕ್ತಿ ಇದೆ. ಕುಂಭಮೇಳದಲ್ಲಿ ಭಾಗಿಯಾಗುವ ಅವಕಾಶವನ್ನು ಅವರು ಸದ್ಬಳಕೆ ಮಾಡಿಕೊಂಡಿದ್ದಾರೆ. ಸಿನಿಮಾ ಮತ್ತು ರಾಜಕೀಯದ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ಅವರು ಕುಂಭಮೇಳಕ್ಕೆ ಹೋಗಿ ಬಂದಿದ್ದಾರೆ.

ಅಹಂಕಾರ ಅಡಗಿ ಮನಸ್ಸು ಶಾಂತವಾಗುತ್ತೆ: ಮಹಾಕುಂಭಮೇಳದ ಬಗ್ಗೆ ಜಗ್ಗೇಶ್ ಮಾತು
Jaggesh
Follow us
ಮದನ್​ ಕುಮಾರ್​
|

Updated on: Feb 20, 2025 | 5:46 PM

ಮಹಾಕುಂಭಮೇಳದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದಾರೆ. ನಟ ಜಗ್ಗೇಶ್ ಕೂಡ ಇದರಲ್ಲಿ ಪಾಲ್ಗೊಂಡಿದ್ದಾರೆ. ತಮ್ಮ ಅನುಭವದ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ರೀತಿ ಬರೆದುಕೊಂಡಿದ್ದಾರೆ. ‘ಕಳೆದ ಬಾರಿ 1880ರಲ್ಲಿ ನಡೆದದ್ದು ಈ ಮಹಾಕುಂಭಮೇಳ. ನನ್ನ ತಾತನ ಜನನ ಆದದ್ದು 1896ರಲ್ಲಿ. ಅಂದರೆ ನಮ್ಮ ತಾತ ಹುಟ್ಟುವ 16ವರ್ಷದ ಹಿಂದೆ. ನಮ್ಮ ತಾತನಿಂದ ನನ್ನ ಮೊಮ್ಮಗ ಅರ್ಜುನ 5ನೇ ತಲೆಮಾರಿಗೆ ಬಂದಿದೆ. ಮುಂದಿನ ಬಾರಿ ಈ ಮಹಾಕುಂಭ ಬರೋದು 2170 ಇಸವಿಯಲ್ಲಿ. ಅಂದರೆ ನಮ್ಮ ಮುಂದಿನ 5 ತಲೆಮಾರಿನ ಬದುಕು ಇಲ್ಲವಾಗಿರುತ್ತದೆ.’

‘ನಾನು ನನ್ನದು ನನ್ನಹಣ ನನ್ನ ಮನೆ ನನ್ನ ಹೆಂಡತಿ ನನ್ನ ಮಕ್ಕಳು ನನ್ನ ಪರಿವಾರ ಎನ್ನುವ ಕಥೆ ಏನಾಗಿರುತ್ತದೆಯೋ ದೇವರೆ ಬಲ್ಲ. ಕಡೆಯಪಕ್ಷ ನಮ್ಮ ಚಿತ್ರಪಟವು ಗೋಡೆಯಿಂದ ಮರೆಯಾಗಿ ಅಟ್ಟ ಸೇರುತ್ತೆ, ಇಲ್ಲ ಕಸದ ಜೊತೆ ಲೀನ. ನಾವು ದುಡಿದದ್ದು ಮುಂದಿನವರು ಉಳಿಸಿಕೊಂಡಿದ್ದರೆ ಅಲ್ಪಸ್ವಲ್ಪ ಹರಟೆಯಲ್ಲಿ ನಮ್ಮ ಹೆಸರು ಬಂದುಹೋಗಬಹುದು.’

‘ಆದರೆ ಯಾರು ಹೋದರೂ ಒಬ್ಬರು ನೆನಪಲ್ಲಿ ಉಳಿದೇ ಇರುತ್ತಾರೆ ಅವರೇ ಶಾರದಾಸುತರು ಅಂದರೆ ಗಾಯಕರು ನಟರು ನಟಿಯರು ಸಂಗೀತ ವಿದ್ವಾಂಸರು ಹಾಗು ಲೇಖಕರು. ಅಲ್ಲಿಗೆ ಯಾವ ಪುರುಷಾರ್ಥಕ್ಕೆ ಮನುಷ್ಯರು ನಾವು ನಾವೇ ,ನಮ್ಮದೇ, ನಂದೇ, ನಾನಿಲ್ಲದೇ, ಎಂಬ ಅಜ್ಞಾನ ಬೇರೂರಿದೆ ಒಳಗೆ. ಈ ಮಹಾಕುಂಭಕ್ಕೆ ಆಧ್ಯಾತ್ಮಿಕ ಸಾಧನೆಗೆ ಹೋದವರಿಗೆ ನಾನು ಮೇಲೆ ಹೇಳಿದ್ದ ಎಲ್ಲಾ ಮಾತುಗಳು ಮಾನಸದಲ್ಲಿ ಮಜ್ಜನವಾಗಿ, ನಾನು ದೇಹವಲ್ಲ ಮುಂದೆ ಮಣ್ಣು ಎಂಬ ಅರಿವು ಮನದ ಆಳಕ್ಕೆ ಹೋಗಿ, ಮನನವಾಗಿ ಮೌನವಾಗಿ ಅಹಂಕಾರ ಅಡಗಿ ಶಾಂತವಾಗುತ್ತದೆ ಮನಸ್ಸು.’

ಇದನ್ನೂ ಓದಿ: ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ

‘ನಾನು ಹೋದೆ ನೋಡಿದೆ ಬಂದೆ ಎನ್ನುವವರಿಗೆ ಅವರ ಬದುಕಿನ ಮತ್ತೊಂದು ಪ್ರವಾಸ ಅನ್ನಿಸುತ್ತದೆ. ನಾನು ಭಾವುಕನಾದೆ ನನ್ನ ವಂಶದ ಎಲ್ಲಾ ಹಿರಿಯರ ನೆನೆದೆ ಮುಂದಿನ ಪೀಳಿಗೆಯ ಮಕ್ಕಳಿಗೆ ಶುಭಕೋರಿದೆ. ನನಗನ್ನಿಸಿದ್ದು ದೇವರ ಕೃಪೆಯಿಲ್ಲದೆ ನಮ್ಮ ಬದುಕಿನ ಆಟ ಯಾವುದೂ ನಡೆಯದು. ಇನ್ನೂ ಸಮಯವಿದೆ. ಹೋಗುವವರು ಹೋಗಿ ಬನ್ನಿ. ಮತ್ತೆ ನೋಡಲಾಗದು ಈ ಮಹಾಕುಂಭ. ಸರ್ವೇಜನಾಃಸುಖಿನೋಭವಂತು’

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ