AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaggesh: ಡಾ.ಭುಜಂಗ ಶೆಟ್ಟಿಯ ಜೊತೆಗಿನ ಒಡನಾಟದ ಬಗ್ಗೆ ಮಾತನಾಡಿದ ನಟ ಜಗ್ಗೇಶ್   

ಡಾ. ಭುಜಂಗ ಶೆಟ್ಟಿ ಅವರ ನಿಧನ ವಾರ್ತೆ ಜಗ್ಗೇಶ್ ಅವರಿಗೆ ಆಘಾತ ತಂದಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ.

Jaggesh: ಡಾ.ಭುಜಂಗ ಶೆಟ್ಟಿಯ ಜೊತೆಗಿನ ಒಡನಾಟದ ಬಗ್ಗೆ ಮಾತನಾಡಿದ ನಟ ಜಗ್ಗೇಶ್   
ಜಗ್ಗೇಶ್​-ಡಾ. ಭುಜಂಗ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: May 20, 2023 | 7:33 AM

Share

ಖ್ಯಾತ ನೇತ್ರತಜ್ಞ ಡಾ. ಭುಜಂಗ ಶೆಟ್ಟಿ (Dr Bhujanga Shetty) ಅವರು ನಿಧನ ಹೊಂದಿದ್ದು ನಿಜಕ್ಕೂ ಬೇಸರದ ವಿಚಾರ. ಅವರ ಸಾವಿಗೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕರು ಭುಜಂಗ ಶೆಟ್ಟಿ ಅವರು ಮಾಡಿದ ಒಳ್ಳೆಯ ಕೆಲಸವನ್ನು ನೆನಪಿಸಿಕೊಂಡಿದ್ದಾರೆ. ನಟ, ರಾಜಕಾರಣಿ ಜಗ್ಗೇಶ್ (Jaggesh) ಅವರು ಕೂಡ ಡಾ. ಭುಜಂಗ ಶೆಟ್ಟಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಹಳೆಯ ದಿನಗಳನ್ನು ಅವರು ತೆರೆದಿಟ್ಟಿದ್ದಾರೆ.

ಜಗ್ಗೇಶ್ ಅವರು ಸದ್ಯ ಸಿನಿಮಾ ಹಾಗೂ ರಾಜಕೀಯ ಎರಡರಲ್ಲೂ ಬ್ಯುಸಿ ಇದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿದ್ದಾರೆ. ಅನೇಕ ಆಗುಹೋಗುಗಳ ಬಗ್ಗೆ ಅವರು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಾರೆ. ಈಗ ಡಾ. ಭುಜಂಗ ಶೆಟ್ಟಿ ಅವರ ಸಾವಿನ ವಾರ್ತೆ ಅವರಿಗೆ ಆಘಾತ ತಂದಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ.

‘ಇಂದಿನ ದೇವಯ್ಯಪಾರ್ಕ್ ಮೆಟ್ರೋ ಅಡಿಯಲ್ಲಿ 1980ರಲ್ಲಿ ಇವರ ಕಣ್ಣಿನ ಕ್ಲಿನಿಕ್ ಇತ್ತು. ಅಮ್ಮನ ಕಣ್ಣಿನ ಪರೀಕ್ಷೆಗಾಗಿ ಇವರ ಬಳಿ ಹೋಗಿದ್ದ ನೆನಪು. ನಂತರ ಅವರ ಬೆಳವಣಿಗೆ, ಅವರ ಆಸ್ಪತ್ರೆಯಲ್ಲಿ ನಡೆದ ನನ್ನ ಅನೇಕ ಚಿತ್ರದ ಚಿತ್ರೀಕರಣ.. ರಾಜಣ್ಣ ಕಣ್ಣಿನ ದಾನಕ್ಕೆ ಇವರೇ ಪ್ರೇರಣೆ. ಒಟ್ಟಾರೆ ಆತ್ಮೀಯರು ಕಾಲವಾದ ವಿಷಯ ಕೇಳಿ ಅಘಾತವಾಯಿತು’ ಎಂದು ಜಗ್ಗೇಶ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಅಣ್ಣಾವ್ರ ಜೊತೆ ಡಾ. ಭುಜಂಗ ಶೆಟ್ಟಿಗೆ ಒಡನಾಟ ಬೆಳೆದಿದ್ದು ಹೇಗೆ? ಇಲ್ಲಿದೆ ಹಳೆಯ ದಿನಗಳ ಕಥೆ

1993ರಲ್ಲಿ ಬೆಂಗಳೂರಿನ ರಾಜಾಜಿನಗರದಲ್ಲಿ ನಾರಾಯಣ ನೇತ್ರಾಲಯವನ್ನು ಡಾ. ಭುಜಂಗ ಶೆಟ್ಟಿ ಆರಂಭಿಸಿದರು. ಇದನ್ನು ಉದ್ಘಾಟನೆ ಮಾಡಿದ್ದು ಡಾ. ರಾಜ್​ಕುಮಾರ್. ಬಳಿಕ 1994ರಲ್ಲಿ ಅಣ್ಣಾವ್ರು ತಂಗಿಯ ಕಣ್ಣಿನ ಆಪರೇಷನ್​ಗೆ ಇಲ್ಲಿಗೆ ಬಂದಿದ್ದರು. ಈ ವೇಳೆ ಭುಜಂಗ ಶೆಟ್ಟಿ ಅವರು ಕಣ್ಣಿನ ದಾನದ ಕುರಿತು ಮಾತನಾಡಿದ್ದರು. ಆಗ ರಾಜ್​ಕುಮಾರ್ ಕಣ್ಣಿನ ದಾನಕ್ಕೆ ಮುಂದಾದರು. ಡಾ. ಭುಜಂಗ ಶೆಟ್ಟಿ ಅವರು ಡಾ. ರಾಜ್​ಕುಮಾರ್ ನೇತ್ರದಾನ ಕೇಂದ್ರ ಆರಂಭಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!