Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaggesh: ಜಗ್ಗೇಶ್​ 10ನೇ ಕ್ಲಾಸ್​ ಅಂಕಪಟ್ಟಿ ವೈರಲ್​; ಅಪ್ಪನಿಂದ ಬಿದ್ದಿತ್ತು ಬೂಟಿನ ಏಟು

ಜಗ್ಗೇಶ್​ ಅವರು ಶಾಲೆಯಲ್ಲಿ ಅಷ್ಟೇನೂ ಚುರುಕಿನ ವಿದ್ಯಾರ್ಥಿ ಆಗಿರಲಿಲ್ಲ. ಬಡತನದ ಕುಟುಂಬದಲ್ಲಿ ಬೆಳೆದ ಅವರು 10ನೇ ತರಗತಿ ಪರೀಕ್ಷೆಯಲ್ಲಿ 600ಕ್ಕೆ 342 ಅಂಕ ಪಡೆದುಕೊಂಡಿದ್ದರು.

Jaggesh: ಜಗ್ಗೇಶ್​ 10ನೇ ಕ್ಲಾಸ್​ ಅಂಕಪಟ್ಟಿ ವೈರಲ್​; ಅಪ್ಪನಿಂದ ಬಿದ್ದಿತ್ತು ಬೂಟಿನ ಏಟು
ಜಗ್ಗೇಶ್​ 10ನೇ ಕ್ಲಾಸ್​ ಅಂಕಪಟ್ಟಿ ವೈರಲ್​; ಅಪ್ಪನಿಂದ ಬಿದ್ದಿತ್ತು ಬೂಟಿನ ಏಟು
Follow us
TV9 Web
| Updated By: Digi Tech Desk

Updated on:Aug 06, 2021 | 4:26 PM

ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿರುವ ಸೆಲೆಬ್ರಿಟಿಗಳಲ್ಲಿ ನಟ ಜಗ್ಗೇಶ್​ (Jaggesh) ಕೂಡ ಪ್ರಮುಖರು. ಸಿನಿಮಾ ಮಾತ್ರವಲ್ಲದೆ ಹಲವು ವಿಚಾರಗಳನ್ನು ಹಂಚಿಕೊಳ್ಳುವ ಅವರು ಸದಾ ಕಾಲ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರುತ್ತಾರೆ. ಕೊರೊನಾ ಎರಡನೇ ಹಾವಳಿ ಬಳಿಕ ಒಂದಷ್ಟು ದಿನಗಳ ಕಾಲ ಟ್ವಿಟರ್​ನಿಂದ (Jaggesh Twitter) ದೂರ ಉಳಿದುಕೊಂಡಿದ್ದ ಜಗ್ಗೇಶ್​ ಈಗ ಮತ್ತೆ ಸಕ್ರಿಯರಾಗಿದ್ದಾರೆ. ವಿಶೇಷವೆಂದರೆ ಈ ಬಾರಿ ಅವರು ತಮ್ಮ ಎಸ್​ಎಸ್​ಎಲ್​ಸಿ (SSLC) ಅಂಕಪಟ್ಟಿಯನ್ನು ಹಂಚಿಕೊಂಡಿದ್ದಾರೆ.

ವಿದ್ಯಾಭ್ಯಾಸ ಏನೇ ಇರಲಿ, ಚಿತ್ರರಂಗದಲ್ಲಿ ಉತ್ತುಂಗಕ್ಕೆ ಬೆಳೆದವರು ಜಗ್ಗೇಶ್​. ಅವರು ಶಾಲೆಯಲ್ಲಿ ಅಷ್ಟೇನೂ ಚುರುಕಿನ ವಿದ್ಯಾರ್ಥಿ ಆಗಿರಲಿಲ್ಲ. ಬಡತನದ ಕುಟುಂಬದಲ್ಲಿ ಬೆಳೆದ ಅವರು 10ನೇ ತರಗತಿ ಪರೀಕ್ಷೆಯಲ್ಲಿ 600ಕ್ಕೆ 342 ಅಂಕ ಪಡೆದುಕೊಂಡಿದ್ದರು. ಕನ್ನಡದಲ್ಲಿ 150ಕ್ಕೆ ಅವರು 101 ಅಂಕ ಪಡೆದಿದ್ದರು. ಇಂಗ್ಲಿಷ್​ನಲ್ಲಿ 100ಕ್ಕೆ 54, ಹಿಂದಿಯಲ್ಲಿ 50ಕ್ಕೆ 20, ಗಣಿತದಲ್ಲಿ 100ಕ್ಕೆ 57, ವಿಜ್ಞಾನದಲ್ಲಿ 100ಕ್ಕೆ 52 ಹಾಗೂ ಸಮಾಜ ವಿಜ್ಞಾನದಲ್ಲಿ 100ಕ್ಕೆ 58 ಮಾರ್ಕ್ಸ್​ ಪಡೆದು ಜಗ್ಗೇಶ್​ ಪಾಸ್​ ಆಗಿದ್ದರು.

ಆ ದಿನಗಳನ್ನು ಟ್ವಿಟರ್​​ ಮೂಲಕ ಜಗ್ಗೇಶ್​ ನೆನಪಿಸಿಕೊಂಡಿದ್ದಾರೆ. ಕಡಿಮೆ ಅಂಕ ಪಡೆದ ಅವರಿಗೆ ಅಂದು ಅವಮಾನ ಆಗಿತ್ತು. ಅದರಿಂದ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಆಲೋಚನೆಯನ್ನೂ ಮಾಡಿದ್ದರು. ಈ ಬಗ್ಗೆ ತಮ್ಮದೇ ಧಾಟಿಯಲ್ಲಿ ಅವರು ಟ್ವೀಟ್​ ಮಾಡಿದ್ದಾರೆ. ‘ಇಂದಿನ ಜಗ್ಗೇಶ ಶಾಲೆಯ ಈಶ್ವರ. ಭಾಷಾಭಿಮಾನ ಬಾಲ್ಯದಿಂದ ಬಂದಾಗ ಮಾತ್ರ ಅವನು ಸಾಯುವವರೆಗೆ ಕನ್ನಡ ಹೃದಯಬಡಿತದ ಜೊತೆಯಲ್ಲೇ ಉಳಿಯುತ್ತದೆ’ ಎಂದು ಅವರು ಬರಹ ಆರಂಭಿಸಿದ್ದಾರೆ.

‘ಈ ಅಂಕಕ್ಕೆ ಅಪ್ಪ ನಡುರೋಡಲ್ಲಿ ಬೂಟಿನಲ್ಲಿ ಹೊಡೆದಿದ್ದರು. ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದೆ. ಒಂದುವೇಳೆ ಹೋಗಿದ್ದರೆ ಇಂದು ಜಗ್ಗೇಶ ಸತ್ತವರಲ್ಲಿ ಒಬ್ಬ. ಮಕ್ಕಳನ್ನು ತಂದೆ ತಾಯಿ ಹುರಿದುಂಬಿಸಿ. ಸಾಧಕ ಹುಟ್ಟುತ್ತಾನೆ’ ಎಂದು ಜಗ್ಗೇಶ್​ ಟ್ವೀಟ್​ ಮಾಡಿದ್ದಾರೆ.

ಸದ್ಯ ಈ ಮಾರ್ಕ್ಸ್​ ಕಾರ್ಡ್​ ಫೋಟೋ ವೈರಲ್​ ಆಗುತ್ತಿದೆ.

ಇದನ್ನೂ ಓದಿ:

ದರ್ಶನ್​ ವಿವಾದ: ಫ್ಯಾನ್ಸ್​ ಇಟ್ಟ ಬೇಡಿಕೆಗೆ ಒಂದೇ ಮಾತಲ್ಲಿ ಉತ್ತರಿಸಿದ ಜಗ್ಗೇಶ್​

‘ನಾನು ಚಪ್ಪಲ್ಲಿಯಲ್ಲಿ ಹೊಡೆದೆ ಅಂತ ಜಗ್ಗೇಶ್​ ರಾಯರ ಮೇಲೆ ಆಣೆ ಮಾಡಿ ಹೇಳಲಿ’; ವಿಜಯಲಕ್ಷ್ಮಿ ಸವಾಲು

Published On - 4:24 pm, Fri, 23 July 21

ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ