AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaggesh: ಜಗ್ಗೇಶ್​ 10ನೇ ಕ್ಲಾಸ್​ ಅಂಕಪಟ್ಟಿ ವೈರಲ್​; ಅಪ್ಪನಿಂದ ಬಿದ್ದಿತ್ತು ಬೂಟಿನ ಏಟು

ಜಗ್ಗೇಶ್​ ಅವರು ಶಾಲೆಯಲ್ಲಿ ಅಷ್ಟೇನೂ ಚುರುಕಿನ ವಿದ್ಯಾರ್ಥಿ ಆಗಿರಲಿಲ್ಲ. ಬಡತನದ ಕುಟುಂಬದಲ್ಲಿ ಬೆಳೆದ ಅವರು 10ನೇ ತರಗತಿ ಪರೀಕ್ಷೆಯಲ್ಲಿ 600ಕ್ಕೆ 342 ಅಂಕ ಪಡೆದುಕೊಂಡಿದ್ದರು.

Jaggesh: ಜಗ್ಗೇಶ್​ 10ನೇ ಕ್ಲಾಸ್​ ಅಂಕಪಟ್ಟಿ ವೈರಲ್​; ಅಪ್ಪನಿಂದ ಬಿದ್ದಿತ್ತು ಬೂಟಿನ ಏಟು
ಜಗ್ಗೇಶ್​ 10ನೇ ಕ್ಲಾಸ್​ ಅಂಕಪಟ್ಟಿ ವೈರಲ್​; ಅಪ್ಪನಿಂದ ಬಿದ್ದಿತ್ತು ಬೂಟಿನ ಏಟು
TV9 Web
| Edited By: |

Updated on:Aug 06, 2021 | 4:26 PM

Share

ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ ಆಗಿರುವ ಸೆಲೆಬ್ರಿಟಿಗಳಲ್ಲಿ ನಟ ಜಗ್ಗೇಶ್​ (Jaggesh) ಕೂಡ ಪ್ರಮುಖರು. ಸಿನಿಮಾ ಮಾತ್ರವಲ್ಲದೆ ಹಲವು ವಿಚಾರಗಳನ್ನು ಹಂಚಿಕೊಳ್ಳುವ ಅವರು ಸದಾ ಕಾಲ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರುತ್ತಾರೆ. ಕೊರೊನಾ ಎರಡನೇ ಹಾವಳಿ ಬಳಿಕ ಒಂದಷ್ಟು ದಿನಗಳ ಕಾಲ ಟ್ವಿಟರ್​ನಿಂದ (Jaggesh Twitter) ದೂರ ಉಳಿದುಕೊಂಡಿದ್ದ ಜಗ್ಗೇಶ್​ ಈಗ ಮತ್ತೆ ಸಕ್ರಿಯರಾಗಿದ್ದಾರೆ. ವಿಶೇಷವೆಂದರೆ ಈ ಬಾರಿ ಅವರು ತಮ್ಮ ಎಸ್​ಎಸ್​ಎಲ್​ಸಿ (SSLC) ಅಂಕಪಟ್ಟಿಯನ್ನು ಹಂಚಿಕೊಂಡಿದ್ದಾರೆ.

ವಿದ್ಯಾಭ್ಯಾಸ ಏನೇ ಇರಲಿ, ಚಿತ್ರರಂಗದಲ್ಲಿ ಉತ್ತುಂಗಕ್ಕೆ ಬೆಳೆದವರು ಜಗ್ಗೇಶ್​. ಅವರು ಶಾಲೆಯಲ್ಲಿ ಅಷ್ಟೇನೂ ಚುರುಕಿನ ವಿದ್ಯಾರ್ಥಿ ಆಗಿರಲಿಲ್ಲ. ಬಡತನದ ಕುಟುಂಬದಲ್ಲಿ ಬೆಳೆದ ಅವರು 10ನೇ ತರಗತಿ ಪರೀಕ್ಷೆಯಲ್ಲಿ 600ಕ್ಕೆ 342 ಅಂಕ ಪಡೆದುಕೊಂಡಿದ್ದರು. ಕನ್ನಡದಲ್ಲಿ 150ಕ್ಕೆ ಅವರು 101 ಅಂಕ ಪಡೆದಿದ್ದರು. ಇಂಗ್ಲಿಷ್​ನಲ್ಲಿ 100ಕ್ಕೆ 54, ಹಿಂದಿಯಲ್ಲಿ 50ಕ್ಕೆ 20, ಗಣಿತದಲ್ಲಿ 100ಕ್ಕೆ 57, ವಿಜ್ಞಾನದಲ್ಲಿ 100ಕ್ಕೆ 52 ಹಾಗೂ ಸಮಾಜ ವಿಜ್ಞಾನದಲ್ಲಿ 100ಕ್ಕೆ 58 ಮಾರ್ಕ್ಸ್​ ಪಡೆದು ಜಗ್ಗೇಶ್​ ಪಾಸ್​ ಆಗಿದ್ದರು.

ಆ ದಿನಗಳನ್ನು ಟ್ವಿಟರ್​​ ಮೂಲಕ ಜಗ್ಗೇಶ್​ ನೆನಪಿಸಿಕೊಂಡಿದ್ದಾರೆ. ಕಡಿಮೆ ಅಂಕ ಪಡೆದ ಅವರಿಗೆ ಅಂದು ಅವಮಾನ ಆಗಿತ್ತು. ಅದರಿಂದ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಆಲೋಚನೆಯನ್ನೂ ಮಾಡಿದ್ದರು. ಈ ಬಗ್ಗೆ ತಮ್ಮದೇ ಧಾಟಿಯಲ್ಲಿ ಅವರು ಟ್ವೀಟ್​ ಮಾಡಿದ್ದಾರೆ. ‘ಇಂದಿನ ಜಗ್ಗೇಶ ಶಾಲೆಯ ಈಶ್ವರ. ಭಾಷಾಭಿಮಾನ ಬಾಲ್ಯದಿಂದ ಬಂದಾಗ ಮಾತ್ರ ಅವನು ಸಾಯುವವರೆಗೆ ಕನ್ನಡ ಹೃದಯಬಡಿತದ ಜೊತೆಯಲ್ಲೇ ಉಳಿಯುತ್ತದೆ’ ಎಂದು ಅವರು ಬರಹ ಆರಂಭಿಸಿದ್ದಾರೆ.

‘ಈ ಅಂಕಕ್ಕೆ ಅಪ್ಪ ನಡುರೋಡಲ್ಲಿ ಬೂಟಿನಲ್ಲಿ ಹೊಡೆದಿದ್ದರು. ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದೆ. ಒಂದುವೇಳೆ ಹೋಗಿದ್ದರೆ ಇಂದು ಜಗ್ಗೇಶ ಸತ್ತವರಲ್ಲಿ ಒಬ್ಬ. ಮಕ್ಕಳನ್ನು ತಂದೆ ತಾಯಿ ಹುರಿದುಂಬಿಸಿ. ಸಾಧಕ ಹುಟ್ಟುತ್ತಾನೆ’ ಎಂದು ಜಗ್ಗೇಶ್​ ಟ್ವೀಟ್​ ಮಾಡಿದ್ದಾರೆ.

ಸದ್ಯ ಈ ಮಾರ್ಕ್ಸ್​ ಕಾರ್ಡ್​ ಫೋಟೋ ವೈರಲ್​ ಆಗುತ್ತಿದೆ.

ಇದನ್ನೂ ಓದಿ:

ದರ್ಶನ್​ ವಿವಾದ: ಫ್ಯಾನ್ಸ್​ ಇಟ್ಟ ಬೇಡಿಕೆಗೆ ಒಂದೇ ಮಾತಲ್ಲಿ ಉತ್ತರಿಸಿದ ಜಗ್ಗೇಶ್​

‘ನಾನು ಚಪ್ಪಲ್ಲಿಯಲ್ಲಿ ಹೊಡೆದೆ ಅಂತ ಜಗ್ಗೇಶ್​ ರಾಯರ ಮೇಲೆ ಆಣೆ ಮಾಡಿ ಹೇಳಲಿ’; ವಿಜಯಲಕ್ಷ್ಮಿ ಸವಾಲು

Published On - 4:24 pm, Fri, 23 July 21

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ