AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದರ್ಶನ್​ ಸಲುವಾಗಿ ಪೂಜೆ ಅಂದಿದ್ರೆ ನಾನು ಬರುತ್ತಿರಲಿಲ್ಲ’: ಜಗ್ಗೇಶ್ ನೇರ ಮಾತು

ಕಲಾವಿದರ ಸಂಘದ ಕಟ್ಟಡದಲ್ಲಿ ಹಲವು ಬಗೆಯ ಪೂಜೆ ಮಾಡಲಾಗಿದೆ. ಇದರಲ್ಲಿ ಅನೇಕ ಕಲಾವಿದರು ಭಾಗಿ ಆಗಿದ್ದಾರೆ. ನಟ ಜಗ್ಗೇಶ್​ ಕೂಡ ಆಗಮಿಸಿ ಈ ಪೂಜೆಯ ಬಗ್ಗೆ ಮಾತನಾಡಿದ್ದಾರೆ. ಇಂದು (ಆ.14) ನಡೆದ ಪೂಜೆ ದರ್ಶನ್​ ಸಲುವಾಗಿ ಮಾಡಿದ್ದು ಎಂಬ ಗುಮಾನಿ ಕೂಡ ಇದೆ. ಆ ಕುರಿತಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಜಗ್ಗೇಶ್​ ಅವರು ನೇರವಾಗಿ ಉತ್ತರ ನೀಡಿದ್ದಾರೆ.

‘ದರ್ಶನ್​ ಸಲುವಾಗಿ ಪೂಜೆ ಅಂದಿದ್ರೆ ನಾನು ಬರುತ್ತಿರಲಿಲ್ಲ’: ಜಗ್ಗೇಶ್ ನೇರ ಮಾತು
ಜಗ್ಗೇಶ್​, ದರ್ಶನ್​
ಮದನ್​ ಕುಮಾರ್​
|

Updated on: Aug 14, 2024 | 2:36 PM

Share

ಕನ್ನಡ ಚಿತ್ರರಂಗದ ಬಹುತೇಕ ಕಲಾವಿದರು ಸೇರಿಕೊಂಡು ಇಂದು (ಆಗಸ್ಟ್​ 14) ಚಾಮರಾಜಪೇಟೆಯಲ್ಲಿ ಇರುವ ಕಲಾವಿದರ ಸಂಘದ ಕಟ್ಟಡದಲ್ಲಿ ಪೂಜೆ, ಹೋಮ ಮುಂತಾದ್ದನ್ನು ಮಾಡಿದ್ದಾರೆ. ನವರಸ ನಾಯಕ ಜಗ್ಗೇಶ್​ ಅವರು ಈ ಪೂಜೆಯಲ್ಲಿ ಭಾಗಿಯಾಗಿ ಪ್ರಾರ್ಥನೆ ಮಾಡಿಕೊಂಡಿದ್ದಾರೆ. ಇದೇ ವೇಳೆ ನಟ ದರ್ಶನ್​ ಅವರು ಕೊಲೆ ಆರೋಪದಲ್ಲಿ ಜೈಲು ಸೇರಿರುವುದು ಕನ್ನಡ ಚಿತ್ರರಂಗದ ಪಾಲಿಗೆ ಬೇಸರದ ಸಂಗತಿ. ಅವರಿಗೆ ಕಾನೂನಿನ ಕಂಟಕ ಎದುರಾಗಿದೆ. ಆ ಸಲುವಾಗಿಯೇ ಕಲಾವಿದರ ಸಂಘದಲ್ಲಿ ಪೂಜೆ, ಹೋಮ ಮಾಡಲಾಗಿದೆ ಎಂಬ ಅನುಮಾನ ಕೆಲವರಿಗೆ ಇದೆ. ಆ ಪ್ರಶ್ನೆಗೆ ನಟ ಜಗ್ಗೇಶ್​ ಅವರು ಉತ್ತರಿಸಿದ್ದಾರೆ.

‘ನನಗೆ ಕೂಡ ಆರಂಭದಲ್ಲಿ ಅದೇ ರೀತಿಯ ಮಾಹಿತಿ ಬಂತು. ದರ್ಶನ್​ಗಾಗಿ ಪೂಜೆ ಆಗಿದ್ದರೆ ನಾನು ಕೂಡ ಬರುತ್ತಿರಲಿಲ್ಲ. ಅದು ಬೇರೆ ಆಯಾಮ ಪಡೆದುಕೊಳ್ಳುತ್ತಿತ್ತು. ಆದರೆ ಇದು ಅದಲ್ಲ. ಕಲಾವಿದರ ಒಳಿತಿಗಾಗಿ ಈ ಪೂಜೆ ನಡೆದಿದೆ. ಕೆಲವರಿಗೆ ಮಾಹಿತಿ ಕೊರತೆ ಆಗಿರಬಹುದು. ಹಾಗಾಗಿ ಅಪಾರ್ಥ ಮಾಡಿಕೊಂಡಿದ್ದಾರೆ. ಅನೇಕರು ಬೇರೆ ವಲಯಗಳಿಂದ ನನಗೆ ಫೋನ್​ ಮಾಡಿ ಕೇಳಿದರು. ನನಗೂ ಅನುಮಾನ ಬಂತು. ವಿಚಾರಿಸಿದಾಗ ಆ ಥರ ಅಲ್ಲ ಎಂಬುದು ಗೊತ್ತಾದಮೇಲೆ ನಾನು ಕೂಡ ಬಂದೆ’ ಎಂದು ಜಗ್ಗೇಶ್​ ಹೇಳಿದ್ದಾರೆ.

‘ನಾಗದೇವರು ಸಲಹೆ ನೀಡಿದೆ. ತಂದೆ-ತಾಯಿ ಮುಂದಿನ ಪೀಳಿಗೆಗೆ ಬುದ್ಧಿ ಹೇಳುವ ರೀತಿ ಒಗ್ಗಟ್ಟಾಗಿ ಹೋಗಿ ಎಂದಿದೆ. ನಾನು ಆಧ್ಯಾತ್ಮಿಕವಾಗಿ ಇರುವವನು. ಹಾಗಾಗಿ ನಿರ್ಮಾಪಕರ ಸಂಘಕ್ಕೆ ಸಲಹೆ ನೀಡಿದ್ದೆ. ಕೆಲವರಿಗೆ ದೇವರು ಅಂದ್ರೆ ಆಗಲ್ಲ. ಅಂಥವರಿಗೆ ನಾವು ಏನೂ ಮಾಡೋಕೆ ಆಗಲ್ಲ. ದೇವರನ್ನು ನಂಬುವವರ ಮತ್ತು ನಂಬದವರ ಬೆಳವಣಿಗೆ ಹೇಗಿದೆ ಅಂತ ನೀವೇ ನೋಡಿ’ ಎಂದಿದ್ದಾರೆ ಜಗ್ಗೇಶ್​.

ಇದನ್ನೂ ಓದಿ: ಕನ್ನಡ ಚಿತ್ರರಂಗದ ಪರಿಸ್ಥಿತಿ, ಹಿರಿಯ ನಟ ಜಗ್ಗೇಶ್ ಕಣ್ಣೀರು

‘ನಾನು ಮತ್ತು ರಾಕ್​ಲೈನ್​ ಅವರು ದೂರವಾಣಿಯಲ್ಲಿ ಮಾತನಾಡುವ ಈ ಪೂಜೆಯ ವಿಚಾರ ಬಂತು. ಮುಂದಿನ ಪೀಳಿಗೆ ಸಲುವಾಗಿ ನಾವು ಬಿಟ್ಟುಕೊಡಬೇಕು. ಇದಕ್ಕೆ ಚಾಲನೆ ಸಿಕ್ಕಿದೆ. ಕಲಾವಿದರಿಗೆ ಇದು ಮಾತೃಸಂಸ್ಥೆ ಆಗಬೇಕು. ಬೇರೆ ರಾಜ್ಯಗಳಲ್ಲಿ ಇದೆ. ಎಲ್ಲ ಕಲಾವಿದರ ಸದಸ್ಯತ್ವ ನೋಂದಣಿ ಮಾಡಿಸುವ ಕೆಲಸ ಆಗಬೇಕು. ಆಗ ಹಬ್ಬದ ವಾತಾವರಣ ಸೃಷ್ಟಿ ಆಗಲಿ’ ಎಂದು ಜಗ್ಗೇಶ್​ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು