AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹರಕೆ ಕುರಿಗೆ ಹಾರ ಹಾಕಿ ಮೆರವಣಿಗೆ ಮಾಡ್ತಾರೆ’; ಸರ್ಕಾರದ ಗ್ಯಾರಂಟಿಗಳ ಬಗ್ಗೆ ಜಗ್ಗೇಶ್ ಲೇವಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಲ್ಲರಿಗೂ 200 ಯುನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಮಾಡಿದೆ. ಇದನ್ನು ಜಗ್ಗೇಶ್ ಅವರು ಟೀಕೆ ಮಾಡಿದ್ದಾರೆ. ಈ ಯೋಜನೆಗಳಿಂದ ಜನರಿಗೇ ನಷ್ಟ ಎಂಬ ಅರ್ಥದಲ್ಲಿ ಅವರು ಮಾತನಾಡಿದ್ದಾರೆ.  

‘ಹರಕೆ ಕುರಿಗೆ ಹಾರ ಹಾಕಿ ಮೆರವಣಿಗೆ ಮಾಡ್ತಾರೆ’; ಸರ್ಕಾರದ ಗ್ಯಾರಂಟಿಗಳ ಬಗ್ಗೆ ಜಗ್ಗೇಶ್ ಲೇವಡಿ
ಜಗ್ಗೇಶ್ ನಟನೆಯ ಸಿನಿಮಾದ ಫೋಟೋ
ರಾಜೇಶ್ ದುಗ್ಗುಮನೆ
|

Updated on: Apr 04, 2024 | 11:43 AM

Share

ನಟ ಜಗ್ಗೇಶ್ (Jaggesh) ಅವರು ಸಿನಿಮಾ ರಂಗ ಹಾಗೂ ರಾಜಕೀಯ ಬದುಕು ಎರಡನ್ನೂ ಸಮದೂಗಿಸಿಕೊಂಡು ಹೋಗುತ್ತಿದ್ದಾರೆ. ಅವರು ಸಿನಿಮಾ ಕಾರ್ಯಕ್ರಮಗಳಲ್ಲಿ ಭಾಗಿ ಆಗುತ್ತಾರೆ. ಇದರ ಜೊತೆಗೆ ರಾಜಕೀಯ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ. ಈಗ ಲೋಕಸಭೆ ಚುನಾವಣೆ ಸಮೀಪಿಸಿದೆ. ಈ ಸಂದರ್ಭದಲ್ಲಿ ಅವರು ಬಿಜೆಪಿ ಪರ ಪ್ರಚಾರ ನಡೆಸುತ್ತಿದ್ದಾರೆ. ರಾಜ್ಯಸಭಾ ಸದಸ್ಯರಾಗಿರುವ ಜಗ್ಗೇಶ್ ಅವರು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದಾರೆ.

ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉಚಿತ ಬಸ್, ಎಲ್ಲರಿಗೂ ಉಚಿತ ವಿದ್ಯುತ್ ಸೇರಿ ಐದು ಗ್ಯಾರಂಟಿ ಯೋಜನೆಗಳನ್ನು ನೀಡುವುದಾಗಿ ಕಾಂಗ್ರೆಸ್ ಹೇಳಿತ್ತು. ಅಧಿಕಾರಕ್ಕೆ ಬಂದ ಬಳಿಕ ಅವರು ನುಡಿದಂತೆ ನಡೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಲ್ಲರಿಗೂ 200 ಯುನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಮಾಡಿದೆ. ಇದನ್ನು ಜಗ್ಗೇಶ್ ಅವರು ಟೀಕೆ ಮಾಡಿದ್ದಾರೆ. ಈ ಯೋಜನೆಗಳಿಂದ ಜನರಿಗೇ ನಷ್ಟ ಎಂಬ ಅರ್ಥದಲ್ಲಿ ಅವರು ಮಾತನಾಡಿದ್ದಾರೆ.

‘ಕುರಿ ಬಲಿ ಕೊಡುವ ಮೊದಲು ಮೆರವಣಿಗೆ ಮಾಡುತ್ತಾರೆ. ಹರಕೆ ಕುರಿಗೆ ಹಾರ ಹಾಕಿ ಮೆರವಣಿಗೆ ಮಾಡಲಾಗುತ್ತದೆ. ಈ ಹಾರಗಳೇ ಗ್ಯಾರಂಟಿಗಳು. ಮತದಾರರನ್ನು ಬಲಿ ಹಾಕಲು ಗ್ಯಾರಂಟಿ ನೀಡಲಾಗಿದೆ. ಎಷ್ಟೇ ಫ್ರೀ ಸ್ಕೀಂ ಕೊಟ್ಟರೂ ಮೋದಿ ಗ್ಯಾರಂಟಿ ಶಾಶ್ವತ. ಫ್ರೀ ಬೀಸ್ ಇಸ್ಕೊಂಡ್ರೆ ಸ್ವಾಭಿಮಾನ ಮಾರಿಕೊಂಡಂತೆ’ ಎಂದು ಜಗ್ಗೇಶ್ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಜಗ್ಗೇಶ್-ಪರಿಮಳಾ ದಾಂಪತ್ಯಕ್ಕೆ 40 ವರ್ಷ; ಹೇಗಿತ್ತು ನೋಡಿ ಆ ವಿಶೇಷ ದಿನ

ಸಿನಿಮಾ ವಿಚಾರಕ್ಕೆ ಬರೋದಾದರೆ ಇತ್ತೀಚೆಗೆ ಜಗ್ಗೇಶ್ ನಟನೆಯ ‘ರಂಗನಾಯಕ’ ಸಿನಿಮಾ ರಿಲೀಸ್ ಆಯಿತು. ಈ ಸಿನಿಮಾ ಅಂದುಕೊಂಡ ರೀತಿಯಲ್ಲಿ ಮೂಡಿ ಬಂದಿಲ್ಲ. ಜಗ್ಗೇಶ್ ತಮ್ಮ ಜನ್ಮದಿನದಂದು ಈ ಸಿನಿಮಾ ಸೋಲಿನ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದರು. ‘ಇದು ನನ್ನ ಸೋಲಲ್ಲ. ನಿರ್ದೇಶಕರ ತಪ್ಪಿನಿಂದ ಆದ ಸೋಲು’ ಎಂದು ಆರೋಪಿಸಿದ್ದರು. ಈ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಆದರೆ, ಅವರು ಎಲ್ಲಿಯೂ ಸಿನಿಮಾ ಹೆಸರು ಉಲ್ಲೇಖಿಸಿರಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ