AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaggesh: ಜಗ್ಗೇಶ್ ಕತ್ತಲ್ಲೂ ಇದೆ ಹುಲಿ ಉಗುರಿನ ಲಾಕೆಟ್; ಅವರೇ ಒಪ್ಪಿಕೊಂಡಿದ್ರು..

ನಟ ದರ್ಶನ್ ಹುಲಿ ಉಗುರು ಧರಿಸಿದ್ದಾರೆ. ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕುಳಿತಿದ್ದಾರೆ ಎನ್ನಲಾಗಿದೆ. ಇವರುಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಈಗ ಜಗ್ಗೇಶ್ ಅವರ ವಿರುದ್ಧವೂ ಅಪಸ್ವರ ಎದ್ದಿದೆ. ಅರಣ್ಯ ಇಲಾಖೆ ನೋಟಿಸ್ ನೀಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

Jaggesh: ಜಗ್ಗೇಶ್ ಕತ್ತಲ್ಲೂ ಇದೆ ಹುಲಿ ಉಗುರಿನ ಲಾಕೆಟ್; ಅವರೇ ಒಪ್ಪಿಕೊಂಡಿದ್ರು..
ಜಗ್ಗೇಶ್
TV9 Web
| Edited By: |

Updated on:Oct 26, 2023 | 12:37 PM

Share

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ (Varthur Santosh) ಅವರು ಹುಲಿ ಉಗುರು ಹೊಂದಿರುವ ಆರೋಪದ ಮೇಲೆ ಬಂಧನಕ್ಕೆ ಒಳಗಾದರು. ಇದಾದ ಬಳಿಕ ಎಲ್ಲೆಲ್ಲೂ ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅನೇಕ ಹೀರೋಗಳು ಕತ್ತಲ್ಲಿ ಹುಲಿ ಉಗುರು ಧರಿಸಿರುವ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಳ್ಳಲಾಗುತ್ತಿದೆ. ಈಗ ಜಗ್ಗೇಶ್ ಕತ್ತಲ್ಲೂ ಹುಲಿ ಉಗುರು ಇದೆಯಂತೆ. ಸ್ವತಃ ಅವರೇ ಈ ವಿಚಾರವನ್ನು ಒಪ್ಪಿಕೊಂಡಿದ್ದರು.

ಖಾಸಗಿ ಸುದ್ದಿ ಸಂಸ್ಥೆ ಒಂದಕ್ಕೆ ಜಗ್ಗೆಶ್ ಅವರು ಸಂದರ್ಶನ ನಿಡಿದ್ದರು. ಈ ವೇಳೆ ಅವರು ಈ ಮಾಹಿತಿ ಹಂಚಿಕೊಂಡಿದ್ದರು. ‘ನನಗೆ 20 ವರ್ಷ ತುಂಬಿದಾಗ ಅಮ್ಮ ಈ ಲಾಕೆಟ್ ನೀಡಿದ್ದರು. ಮಗ ಹುಲಿ ಇದ್ದಾಂಗೆ ಇರಬೇಕು ಎಂದು ಅಮ್ಮ ಈ ಲಾಕೆಟ್​ನ ಹಾಕಿದ್ದರು’ ಎಂದು ಸಂದರ್ಶನದಲ್ಲಿ ಜಗ್ಗೇಶ್ ಹೇಳಿದ್ದರು. ಸದ್ಯ ಈ ವಿಡಿಯೋ ವೈರಲ್ ಆಗಿದೆ. ಅನೇಕರು ಈ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬಂಧನದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್​ಗೆ ಮುಳುಬಾಗಿಲು ಬಳಿ 14-ಎಕರೆ ಫಾರ್ಮ್​ಹೌಸ್ ಇದೆ

ನಟ ದರ್ಶನ್ ಹುಲಿ ಉಗುರು ಧರಿಸಿದ್ದಾರೆ. ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕುಳಿತಿದ್ದಾರೆ ಎನ್ನಲಾಗಿದೆ. ಇವರುಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಈಗ ಜಗ್ಗೇಶ್ ಅವರ ವಿರುದ್ಧವೂ ಅಪಸ್ವರ ಎದ್ದಿದೆ. ಅರಣ್ಯ ಇಲಾಖೆ ನೋಟಿಸ್ ನೀಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಜಗ್ಗೇಶ್ ವಿರುದ್ಧ ಮಾಜಿ ಎಂಎಲ್​ಸಿ ಪಿಆರ್ ರಮೇಶ್ ಅವರು ದೂರು ನೀಡಿದ್ದಾರೆ. ಜಗ್ಗೇಶ್ ಹೇಳಿಕೆಯ ವೀಡಿಯೋವನ್ನು ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ರವಾನೆ ಮಾಡಲಾಗಿದೆ. ನಟ ಜಗ್ಗೇಶ್ ಅವರನ್ನು ಇಲಾಖೆ ಅಧಿಕಾರಿಗಳು ಪ್ರಶ್ನೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಹುಲಿ ಉಗುರು ಪ್ರಕರಣ: ವರ್ತೂರು ಸಂತೋಷ್​ಗೆ ಕೈದಿ ನಂಬರ್ ನೀಡಿದ ಜೈಲಿನ ಅಧಿಕಾರಿಗಳು

ವರ್ತೂರು ಸಂತೋಷ್ ಅವರು ಬಿಗ್ ಬಾಸ್​ ಮನೆಗೆ ತೆರಳಿದ್ದರು. ಅವರ ಕತ್ತಲ್ಲಿರುವ ಹುಲಿ ಉಗುರಿನ ಲಾಕೆಟ್ ಎಲ್ಲರ ಗಮನ ಸೆಳೆದಿತ್ತು. ಬಿಗ್ ಬಾಸ್​ನಿಂದ ಅವರನ್ನು ಹೊರಕ್ಕೆ ಕರೆಸಿ ಬಂಧಿಸುವ ಕೆಲಸವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮಾಡಿದ್ದರು. ಇದಾದ ಬಳಿಕ ಸೆಲೆಬ್ರಿಟಿಗಳು ಹುಲಿ ಉಗುರಿನ ಚೈನ್ ಧರಿಸಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:42 am, Wed, 25 October 23

Follow Us
Web contact
Web contact

TV9 Kannada

Read More
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ