AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jai Jagadeesh: ವ್ಯಕ್ತಿ ಮೇಲೆ ಹಲ್ಲೆ ಆರೋಪ: ಪೊಲೀಸ್​ ಠಾಣೆಗೆ ಬಂದ ನಟ ಜೈ ಜಗದೀಶ್​; ಇಲ್ಲಿದೆ ಘಟನೆಯ ವಿವರ

Jai Jagadeesh Assault Case: ನಟ ಜೈ ಜಗದೀಶ್​ ಅವರು ಬೆಳ್ಳೂರು ಠಾಣೆಗೆ ಆಗಮಿಸಿದ್ದಾರೆ. ತಮ್ಮ ವಿರುದ್ಧ ಮಾಡಲಾಗಿರುವ ಹಲ್ಲೆ ಆರೋಪದ ಸಂಬಂಧ ಅವರು ವಿಚಾರಣೆ ಎದುರಿಸಿದ್ದಾರೆ.

Jai Jagadeesh: ವ್ಯಕ್ತಿ ಮೇಲೆ ಹಲ್ಲೆ ಆರೋಪ: ಪೊಲೀಸ್​ ಠಾಣೆಗೆ ಬಂದ ನಟ ಜೈ ಜಗದೀಶ್​; ಇಲ್ಲಿದೆ ಘಟನೆಯ ವಿವರ
TV9 Web
| Edited By: |

Updated on:Jun 12, 2022 | 12:58 PM

Share

ಹಿರಿಯ ನಟ ಜೈ ಜಗದೀಶ್​ (Jai Jagadeesh) ಅವರ ವಿರುದ್ಧ ಹಲ್ಲೆ ಆರೋಪ ಎದುರಾಗಿದೆ. ಜೂನ್​ 5ರಂದು ಅವರು ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಪೊಲೀಸರು ಸೂಚಿಸಿದ್ದರು. ಅದರ ಅನ್ವಯ ಇಂದು (ಜೂನ್​ 12) ಜೈ ಜಗದೀಶ್​ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಪೊಲೀಸ್​ ಠಾಣೆಗ ಬಂದ ಅವರು ಅಂದಿನ ಘಟನೆಯ ವಿವರ ನೀಡಿದ್ದಾರೆ. ಬೆಳ್ಳೂರು ಕ್ರಾಸ್ ಟೋಲ್ ಬಳಿ ಜೈ ಜಗದೀಶ್​ ಗಲಾಟೆ ಮಾಡಿಕೊಂಡಿದ್ದರು. ತಮ್ಮ ಕಾರಿನ ಮೇಲೆ ಬಾಟಲ್ ಎಸೆದಿದ್ದಾರೆಂದು ವ್ಯಕ್ತಿಯೊಬ್ಬರ ಜೊತೆ ಅವರು ಜಗಳವಾಡಿದ್ದರು. ಟೋಲ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್​ನ ಕಿಟಕಿಯಿಂದ ತಂಪು ಪಾನೀಯ ಬಾಟಲ್ ಎಸೆಯಲಾಗಿತ್ತು. ಈ ವೇಳೆ ಬಸ್ ಇಳಿದು ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಜೈ ಜಗದೀಶ್​ ಅವರು ಹಲ್ಲೆ (Assault) ಮಾಡಿದರು ಎಂಬ ಆರೋಪ ಎದುರಾಗಿದೆ.

ನನ್ನದೇನೂ ತಪ್ಪಿಲ್ಲ ಎಂದ ನಟ:

‘ಬಾಟಲಿಯನ್ನ ಕಾರಿನ ಮೇಲೆ ಎಸೆದಿದ್ದ ವ್ಯಕ್ತಿಯನ್ನು ಪ್ರಶ್ನಿಸಿದೆ. ಈ ವೇಳೆ ಆತ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಈ ಹಿನ್ನೆಲೆಯಲ್ಲಿ ಟೋಲ್ ಬಳಿ ಗಲಾಟೆಯಾಗಿತ್ತು. ಇದರಲ್ಲಿ ನನ್ನದೇನೂ ತಪ್ಪಿಲ್ಲ. ನಾನು ಹಲ್ಲೆ ಮಾಡಿಲ್ಲ’ ಎಂದು ಜೈ ಜಗದೀಶ್ ಸ್ಪಷ್ಟನೆ ನೀಡಿದ್ದಾರೆ.

‘ನಡೆದಿರುವುದು ಸಣ್ಣ ಘಟನೆ. ಅದಕ್ಕೆ ರೆಕ್ಕೆ-ಪುಕ್ಕ ಕಟ್ಟಲಾಗಿದೆ. ಈ ಘಟನೆಯ ಹಿಂದೆ ಯಾರೆಲ್ಲ ಇದ್ದಾರೋ ಗೊತ್ತಿಲ್ಲ. ಬಾಟಲಿ ಆ ಕಡೆ ಎಸೆಯಪ್ಪ ಅಂತ ಹೇಳಿದ್ದಕ್ಕೆ ಆತ ಕೆಟ್ಟ ಮಾತುಗಳಿಂದ ನಿಂದಿಸಿದ. 10 ವರ್ಷದ ಹಿಂದೆ ಆಗಿದ್ರೆ ಈ ಮಾತು ಹೇಳಿದಾಗ ಹಕ್ಕೊಂಡು ಜಡಿದಿರುತ್ತಿದ್ದೆ. ಆದ್ರೆ ಈಗ ನಾನು ಹಾಗಿಲ್ಲ. ನನಗೂ ವಯಸ್ಸಾಗಿದೆ. ನಾನೇನು ಮಾತನಾಡಲಿ? ಸೀನಿಯರ್​ ಆರ್ಟಿಸ್ಟ್ ಅಂತ ಜನರು ಮರ್ಯಾದೆ ಕೊಡ್ತಾರೆ. ಅದನ್ನು ಉಳಿಸಿಕೊಳ್ಳುವ ಸಲುವಾಗಿ ಏನೂ ಮಾತನಾಡದೇ ನಾನು ಆಚೆ ಬಂದೆ’ ಎಂದು ಜೈ ಜಗದೀಶ್ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:32 pm, Sun, 12 June 22

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ