AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jai Jagadeesh: ವ್ಯಕ್ತಿ ಮೇಲೆ ಹಲ್ಲೆ ಆರೋಪ: ಪೊಲೀಸ್​ ಠಾಣೆಗೆ ಬಂದ ನಟ ಜೈ ಜಗದೀಶ್​; ಇಲ್ಲಿದೆ ಘಟನೆಯ ವಿವರ

Jai Jagadeesh Assault Case: ನಟ ಜೈ ಜಗದೀಶ್​ ಅವರು ಬೆಳ್ಳೂರು ಠಾಣೆಗೆ ಆಗಮಿಸಿದ್ದಾರೆ. ತಮ್ಮ ವಿರುದ್ಧ ಮಾಡಲಾಗಿರುವ ಹಲ್ಲೆ ಆರೋಪದ ಸಂಬಂಧ ಅವರು ವಿಚಾರಣೆ ಎದುರಿಸಿದ್ದಾರೆ.

Jai Jagadeesh: ವ್ಯಕ್ತಿ ಮೇಲೆ ಹಲ್ಲೆ ಆರೋಪ: ಪೊಲೀಸ್​ ಠಾಣೆಗೆ ಬಂದ ನಟ ಜೈ ಜಗದೀಶ್​; ಇಲ್ಲಿದೆ ಘಟನೆಯ ವಿವರ
TV9 Web
| Edited By: |

Updated on:Jun 12, 2022 | 12:58 PM

Share

ಹಿರಿಯ ನಟ ಜೈ ಜಗದೀಶ್​ (Jai Jagadeesh) ಅವರ ವಿರುದ್ಧ ಹಲ್ಲೆ ಆರೋಪ ಎದುರಾಗಿದೆ. ಜೂನ್​ 5ರಂದು ಅವರು ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಪೊಲೀಸರು ಸೂಚಿಸಿದ್ದರು. ಅದರ ಅನ್ವಯ ಇಂದು (ಜೂನ್​ 12) ಜೈ ಜಗದೀಶ್​ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಪೊಲೀಸ್​ ಠಾಣೆಗ ಬಂದ ಅವರು ಅಂದಿನ ಘಟನೆಯ ವಿವರ ನೀಡಿದ್ದಾರೆ. ಬೆಳ್ಳೂರು ಕ್ರಾಸ್ ಟೋಲ್ ಬಳಿ ಜೈ ಜಗದೀಶ್​ ಗಲಾಟೆ ಮಾಡಿಕೊಂಡಿದ್ದರು. ತಮ್ಮ ಕಾರಿನ ಮೇಲೆ ಬಾಟಲ್ ಎಸೆದಿದ್ದಾರೆಂದು ವ್ಯಕ್ತಿಯೊಬ್ಬರ ಜೊತೆ ಅವರು ಜಗಳವಾಡಿದ್ದರು. ಟೋಲ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್​ನ ಕಿಟಕಿಯಿಂದ ತಂಪು ಪಾನೀಯ ಬಾಟಲ್ ಎಸೆಯಲಾಗಿತ್ತು. ಈ ವೇಳೆ ಬಸ್ ಇಳಿದು ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಜೈ ಜಗದೀಶ್​ ಅವರು ಹಲ್ಲೆ (Assault) ಮಾಡಿದರು ಎಂಬ ಆರೋಪ ಎದುರಾಗಿದೆ.

ನನ್ನದೇನೂ ತಪ್ಪಿಲ್ಲ ಎಂದ ನಟ:

‘ಬಾಟಲಿಯನ್ನ ಕಾರಿನ ಮೇಲೆ ಎಸೆದಿದ್ದ ವ್ಯಕ್ತಿಯನ್ನು ಪ್ರಶ್ನಿಸಿದೆ. ಈ ವೇಳೆ ಆತ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಈ ಹಿನ್ನೆಲೆಯಲ್ಲಿ ಟೋಲ್ ಬಳಿ ಗಲಾಟೆಯಾಗಿತ್ತು. ಇದರಲ್ಲಿ ನನ್ನದೇನೂ ತಪ್ಪಿಲ್ಲ. ನಾನು ಹಲ್ಲೆ ಮಾಡಿಲ್ಲ’ ಎಂದು ಜೈ ಜಗದೀಶ್ ಸ್ಪಷ್ಟನೆ ನೀಡಿದ್ದಾರೆ.

‘ನಡೆದಿರುವುದು ಸಣ್ಣ ಘಟನೆ. ಅದಕ್ಕೆ ರೆಕ್ಕೆ-ಪುಕ್ಕ ಕಟ್ಟಲಾಗಿದೆ. ಈ ಘಟನೆಯ ಹಿಂದೆ ಯಾರೆಲ್ಲ ಇದ್ದಾರೋ ಗೊತ್ತಿಲ್ಲ. ಬಾಟಲಿ ಆ ಕಡೆ ಎಸೆಯಪ್ಪ ಅಂತ ಹೇಳಿದ್ದಕ್ಕೆ ಆತ ಕೆಟ್ಟ ಮಾತುಗಳಿಂದ ನಿಂದಿಸಿದ. 10 ವರ್ಷದ ಹಿಂದೆ ಆಗಿದ್ರೆ ಈ ಮಾತು ಹೇಳಿದಾಗ ಹಕ್ಕೊಂಡು ಜಡಿದಿರುತ್ತಿದ್ದೆ. ಆದ್ರೆ ಈಗ ನಾನು ಹಾಗಿಲ್ಲ. ನನಗೂ ವಯಸ್ಸಾಗಿದೆ. ನಾನೇನು ಮಾತನಾಡಲಿ? ಸೀನಿಯರ್​ ಆರ್ಟಿಸ್ಟ್ ಅಂತ ಜನರು ಮರ್ಯಾದೆ ಕೊಡ್ತಾರೆ. ಅದನ್ನು ಉಳಿಸಿಕೊಳ್ಳುವ ಸಲುವಾಗಿ ಏನೂ ಮಾತನಾಡದೇ ನಾನು ಆಚೆ ಬಂದೆ’ ಎಂದು ಜೈ ಜಗದೀಶ್ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:32 pm, Sun, 12 June 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ