‘ಬಡ್ಡೀಸ್’ ಸಿನಿಮಾ ಪ್ರಚಾರ ವಾಹನಕ್ಕೆ ಅಪಘಾತ; ‘ದೃಷ್ಟಿ ಜಾಸ್ತಿನೆ ಆಗಿರಬೇಕು’ ಎಂದ ನಟ ಕಿರಣ್ ರಾಜ್

| Updated By: ರಾಜೇಶ್ ದುಗ್ಗುಮನೆ

Updated on: Jun 18, 2022 | 4:24 PM

ಇಂದಿನ ಶೆಡ್ಯೂಲ್ ಪ್ರಕಾರ ದಾವಣಗೆರೆ ಸಮೀಪದ ಕೆಲ ಕಾಲೇಜುಗಳಿಗೆ ‘ಬಡ್ಡೀಸ್’ ತಂಡ ತೆರಳಬೇಕಿತ್ತು. ಆದರೆ, ಪ್ರಚಾರ ಕಾರ್ಯದಲ್ಲಿ ಬಳಕೆ ಆಗುತ್ತಿದ್ದ ಟ್ರಕ್ ಮೇಲೆ ವಿದ್ಯುತ್ ಕಂಬ ಬಿದ್ದಿದೆ. ಹೀಗಾಗಿ, ಇಂದಿನ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ.

‘ಬಡ್ಡೀಸ್’ ಸಿನಿಮಾ ಪ್ರಚಾರ ವಾಹನಕ್ಕೆ ಅಪಘಾತ; ‘ದೃಷ್ಟಿ ಜಾಸ್ತಿನೆ ಆಗಿರಬೇಕು’ ಎಂದ ನಟ ಕಿರಣ್ ರಾಜ್
ಕಿರಣ್ ರಾಜ್
Follow us on

ಕಿರಣ್ ರಾಜ್ (Kiran Raj)​ ಹೆಸರು ಕಿರುತೆರೆ ಲೋಕದಲ್ಲಿ ತುಂಬಾನೇ ಫೇಮಸ್. ಅವರು ಈಗ ಹಿರಿತೆರೆಯಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ. ಅವರು ಸಂಪೂರ್ಣ ಹೀರೋ ಆಗಿ ನಟಿಸುತ್ತಿರುವ ಮೊದಲ ಸಿನಿಮಾ ‘ಬಡ್ಡೀಸ್​’ (Buddies Movie) ಜೂನ್ 24ರಂದು ತೆರೆಗೆ ಬರುತ್ತಿದೆ. ಈ ಸಿನಿಮಾದ ಪ್ರಮೋಷನಲ್​ ಕಾರ್ಯದಲ್ಲಿ ಕಿರಣ್ ರಾಜ್ ಬ್ಯುಸಿ ಆಗಿದ್ದಾರೆ. ಉತ್ತರ ಕರ್ನಾಟಕದ ಭಾಗದಲ್ಲಿ ಚಿತ್ರದ ಪ್ರಚಾರ ಕಾರ್ಯ ನಡೆಯುತ್ತಿದೆ. ಇಂದು (ಜೂನ್ 18) ಪ್ರಚಾರಕ್ಕೆ ತೆರಳುವ ಸಂದರ್ಭದಲ್ಲಿ ಅವಘಡ ಒಂದು ಸಂಭವಿಸಿದೆ. ಈ ಬಗ್ಗೆ ಕಿರಣ್ ರಾಜ್ ಮಾಹಿತಿ ನೀಡಿದ್ದಾರೆ.

ಶೆಡ್ಯೂಲ್ ಪ್ರಕಾರ ದಾವಣಗೆರೆ ಸಮೀಪದ ಕೆಲ ಕಾಲೇಜುಗಳಿಗೆ ‘ಬಡ್ಡೀಸ್’ ತಂಡ ತೆರಳಬೇಕಿತ್ತು. ಆದರೆ, ಪ್ರಚಾರ ಕಾರ್ಯದಲ್ಲಿ ಬಳಕೆ ಆಗುತ್ತಿದ್ದ ಟ್ರಕ್ ಮೇಲೆ ವಿದ್ಯುತ್ ಕಂಬ ಬಿದ್ದಿದೆ. ಹೀಗಾಗಿ, ಇಂದಿನ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ. ಫ್ಯಾನ್ಸ್​ಗೆ ನಿರಾಸೆ ಮಾಡಿದ್ದಕ್ಕಾಗಿ ಅವರ ಬಳಿ ಕಿರಣ್ ರಾಜ್ ಕ್ಷಮೆ ಕೇಳಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿ ಘಟನೆ ಬಗ್ಗೆ ವಿವರಿಸಿದ್ದಾರೆ.

ಇದನ್ನೂ ಓದಿ
ಮತ್ತೊಂದು ಚಿತ್ರ ಒಪ್ಪಿಕೊಂಡ ನಟ ಕಿರಣ್ ರಾಜ್; ‘ಭರ್ಜರಿ ಗಂಡು’ ನಿರ್ದೇಶಕನ ಜತೆ ಹೊಸ ಸಿನಿಮಾ
‘ನಾನು ಎಷ್ಟು ಟೇಕ್​ ತೆಗೆದುಕೊಳ್ತೀನಿ ಅಂತ ಬೆಟ್​ ಕಟ್ಟುತ್ತಿದ್ದರು’; ಅವಮಾನದ ಹಾದಿ ನೆನೆದ ಕಿರಣ್​ ರಾಜ್
‘ಕನ್ನಡತಿ’ ಧಾರಾವಾಹಿಗಿಂತಲೂ ಮುಂಚೆ ನಟ ಕಿರಣ್​ ರಾಜ್​ ಈ ಸಿನಿಮಾ ಒಪ್ಪಿಕೊಂಡಿದ್ದು ಯಾಕೆ?
‘ಕನ್ನಡತಿ’ ಹೀರೋ ಕಿರಣ್​ ರಾಜ್​ ದುಡಿಮೆಯ ಶೇ.40ರಷ್ಟು ಹಣ ಬಡವರಿಗೆ ಮೀಸಲು

‘ಹಾಯ್ ಎಲ್ಲರಿಗೂ ನಮಸ್ಕಾರ. ಈ ದಿನ ಇಷ್ಟು ಕಾಲೇಜ್​​ಗಳಿಗೆ ಹೋಗುವುದಿತ್ತು. ಬಹುಶಃ ದೃಷ್ಟಿ ಜಾಸ್ತಿನೆ ಆಗಿರಬೇಕು ಅನ್ಸುತ್ತೆ. ಹಾಗಾಗಿ ಈ ತರಹ ಅನಿರೀಕ್ಷಿತ ಘಟನೆ ಸಂಭವಿಸಿದೆ. ಹೀಗಾಗಿ ಕೊನೆಯ ಕ್ಷಣದಲ್ಲಿ ನಮ್ಮ ಪ್ಲ್ಯಾನ್​ ಚೇಂಜ್ ಮಾಡಬೇಕಾಯಿತು. ದೇವರ ದಯೆಯಿಂದ ಟೀಮ್ ಅವರಿಗೆ ಯಾವುದೆ ಹಾನಿಯಾಗಿಲ್ಲ. ಎಲ್ಲರೂ ಆರಾಮಾಗಿ ಇದ್ದಾರೆ. ಸಿನಿಮಾ ಬಿಡುಗಡೆಯ ನಂತರ ಥಿಯೇಟರ್​ ವಿಸಿಟ್​​ಗೆ ಬಂದಾಗ ತಮ್ಮೆಲ್ಲರನ್ನೂ ಖಂಡಿತ ಮಿಸ್ ಮಾಡದೆ ಭೇಟಿ ಮಾಡುತ್ತೇವೆ. ದಯಮಾಡಿ ಕ್ಷಮೆ ಇರಲಿ. ನಿಮ್ಮ ಪ್ರೀತಿ ವಿಶ್ವಾಸ ಸದಾ ನಮ್ಮ ಮೇಲಿರಲಿ. ಮಿಸ್ ಮಾಡದೆ ಸಿನಿಮಾ ನೋಡಿ ಹರಸಿ ಹಾರೈಸಿ. ಲವ್ ಯೂ’ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕಿರಣ್ ರಾಜ್ ಚಾರ್ಲಿ ಶ್ವಾನ ದತ್ತು ಪಡೆದಿದ್ದು ಕೂಡ ಸಿನಿಮೀಯ ರೀತಿಯಲ್ಲೇ; ಹೊರಬಿತ್ತು ಅಚ್ಚರಿಯ ವಿಚಾರ

ಈ ಪೋಸ್ಟ್​ಗೆ ಅಭಿಮಾನಿಗಳು ಬೆಂಬಲ ಸೂಚಿಸಿದ್ದಾರೆ. ಕೆಲವರು ಕಿರಣ್ ರಾಜ್ ಅವರ ಬಳಿ ಆರೋಗ್ಯವಾಗಿರಿ ಎಂದು ಹೇಳಿದರೆ ಇನ್ನೂ ಕೆಲವರು ನಿಮ್ಮ ಸಿನಿಮಾಗೆ ನಮ್ಮ ಬೆಂಬಲ ಇದೆ ಎಂದು ಹೇಳಿದ್ದಾರೆ.

‘ಬಡ್ಡೀಸ್​’ ಚಿತ್ರಕ್ಕೆ ಗುರು ತೇಜ್​ ಶೆಟ್ಟಿ ನಿರ್ದೇಶನ ಮಾಡಿದ್ದು, ಭಾರತಿ ಶೆಟ್ಟಿ ನಿರ್ಮಾಣ ಮಾಡಿದ್ದಾರೆ. ಕಿರಣ್​ ರಾಜ್​ಗೆ ಜೋಡಿಯಾಗಿ ಸಿರಿ ಪ್ರಹ್ಲಾದ್​​ ನಟಿಸಿದ್ದಾರೆ. ‘ಬಡ್ಡೀಸ್​’ ಚಿತ್ರಕ್ಕೆ ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ನಿಭಾ ಶೆಟ್ಟಿ ಛಾಯಾಗ್ರಹಣ ಮಾಡಿದ್ದಾರೆ. ಗೋಪಾಲ ದೇಶಪಾಂಡೆ, ಅರವಿಂದ್​ ಬೋಳಾರ್​, ಗಿರೀಶ್​ ಜಟ್ಟಿ, ಉದಯ್​ ಸೂರ್ಯ, ರೋಹನ್​ ಸಾಯಿ ಮುಂತಾದವರು ಕೂಡ ನಟಿಸಿದ್ದಾರೆ. ಕಿರಣ್ ರಾಜ್ ಕರಿಯರ್​​ನಲ್ಲಿ ಈ ಸಿನಿಮಾ ತುಂಬಾನೇ ಮಹತ್ವ ಪಡೆದುಕೊಂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:00 pm, Sat, 18 June 22