AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಕಿಶೋರ್​ ಹೊಸ ಸಿನಿಮಾ ‘ಆಪರೇಷನ್ ಕೊಂಬುಡಿಕ್ಕಿ’; ತೆರೆಹಿಂದೆ ನುರಿತ ತಂತ್ರಜ್ಞರು

ಎಂಥ ಪಾತ್ರ ಕೊಟ್ಟರೂ ಅದಕ್ಕೆ ನ್ಯಾಯ ಒದಗಿಸಬಲ್ಲ ಕಲಾವಿದ ಕಿಶೋರ್​ ಅವರು ಈಗ ‘ಆಪರೇಷನ್ ಕೊಂಬುಡಿಕ್ಕಿ’ ಸಿನಿಮಾದಲ್ಲಿ ಹೀರೋ ಆಗಿ ನಟಿಸುತ್ತಿದ್ದಾರೆ. ಎಸ್​. ಮಹೇಂದರ್​ ನಿರ್ದೇಶನದ ಈ ಚಿತ್ರವನ್ನು ಅನುಪ್ ಹನುಮಂತೇಗೌಡ ನಿರ್ಮಿಸುತ್ತಿದ್ದಾರೆ. ‘ಸಿಲ್ವರ್‌ ಸ್ಕ್ರೀನ್‌ ಸ್ಟುಡಿಯೋಸ್’ ಮೂಲಕ ಅದ್ದೂರಿಯಾಗಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ನಟ ಕಿಶೋರ್​ ಹೊಸ ಸಿನಿಮಾ ‘ಆಪರೇಷನ್ ಕೊಂಬುಡಿಕ್ಕಿ’; ತೆರೆಹಿಂದೆ ನುರಿತ ತಂತ್ರಜ್ಞರು
ಕಿಶೋರ್​, ಎಸ್​. ಮಹೇಂದರ್​, ಅನುಪ್​
ಮದನ್​ ಕುಮಾರ್​
|

Updated on: Aug 07, 2024 | 10:01 PM

Share

ಖ್ಯಾತ ನಟ ಕಿಶೋರ್​ ಅವರು ಈಗಾಗಲೇ ಅನೇಕ ಬಗೆಯ ಪಾತ್ರಗಳನ್ನು ಮಾಡಿ ಜನಮನ ಗೆದ್ದಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆಯಲ್ಲೂ ಅವರು ಹೆಸರುವಾಸಿ ಆಗಿದ್ದಾರೆ. ಈಗ ಕನ್ನಡದಲ್ಲಿ ಅವರೊಂದು ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಆಪರೇಷನ್ ಕೊಂಬುಡಿಕ್ಕಿ’ ಎಂಬುದು ಈ ಸಿನಿಮಾದ ಶೀರ್ಷಿಕೆ. ಇಂಥ ಡಿಫರೆಂಟ್​ ಟೈಟಲ್​ ಇಟ್ಟುಕೊಂಡಿರುವ ಕಾರಣದಿಂದ ಸಿನಿಮಾ ಬಗ್ಗೆ ಜನರಿಗೆ ಸಹಜವಾಗಿಯೇ ಕೌತುಕ ನಿರ್ಮಾಣ ಆಗಿದೆ. ಈ ಚಿತ್ರದ ತೆರೆ ಹಿಂದೆ ಖ್ಯಾತನಾಮರು ಕೆಲಸ ಮಾಡುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ಒಂದಷ್ಟು ಮಾಹಿತಿ..

ನಿರ್ಮಾಪಕ ಅನುಪ್ ಹನುಮಂತೇಗೌಡ ಅವರು ‘ಆಪರೇಷನ್ ಕೊಂಬುಡಿಕ್ಕಿ’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಈ ಮೊದಲು ಸೂಪರ್ ಹಿಟ್ ‘ಶಿವಾಜಿ ಸುರತ್ಕಲ್’ ಸರಣಿಯ ಎರಡು ಚಿತ್ರಗಳನ್ನು ನಿರ್ಮಾಣ ಮಾಡಿ ಯಶಸ್ಸು ಗಳಿಸಿದ್ದ ಅನುಪ್​ ಅವರಿಗೆ ಇದು ಮೂರನೇ ಸಿನಿಮಾ. ಮತ್ತೊಂದು ಗೆಲುವು ಪಡೆಯುವ ಭರವಸೆಯೊಂದಿಗೆ ಅವರು ಈ ಸಿನಿಮಾದ ಕೆಲಸಗಳನ್ನು ಆರಂಭಿಸಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ಕಿರಿಯ ಹಾಗೂ ಯಶಸ್ವಿ ನಿರ್ಮಾಪಕ ಎನಿಸಿಕೊಂಡ ಅವರು ‘ಸಿಲ್ವರ್‌ ಸ್ಕ್ರೀನ್‌ ಸ್ಟುಡಿಯೋಸ್’ ಸಂಸ್ಥೆಯನ್ನು ಆರಂಭಿಸಿ, ಅದರ ಮೂಲಕ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ.

ಇದನ್ನೂ ಓದಿ: ಗೆಳೆಯ ಡ್ಯಾನಿಯಲ್​ಗೆ ವಿದಾಯ ಹೇಳಿದ ನಟ ಕಿಶೋರ್

‘ಆಪರೇಷನ್ ಕೊಂಬುಡಿಕ್ಕಿ’ ಸಿನಿಮಾಗೆ ಹಿರಿಯ ನಿರ್ದೇಶಕ ಎಸ್. ಮಹೇಂದರ್ ಅವರು ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡ ಅವರು ಈಗ ಹೊಸ ಕಥೆಯೊಂದಿಗೆ ಜನರನ್ನು ರಂಜಿಸಲು ತಯಾರಿ ಮಾಡಿಕೊಂಡಿದ್ದಾರೆ. ಕಿಶೋರ್ ಹೀರೋ ಆಗಿ ನಟಿಸುತ್ತಿರುವುದರಿಂದ ನಿರೀಕ್ಷೆ ಹೆಚ್ಚಾಗಿದೆ. ಕಿಶೋರ್​ ಅವರಿಗೆ ಪರಭಾಷೆಯಲ್ಲೂ ಅಭಿಮಾನಿಗಳು ಇದ್ದಾರೆ.

ಇದನ್ನೂ ಓದಿ: ಯುವತಿಯರ ಬೆತ್ತಲೆ ಮೆರವಣಿಗೆ ಪ್ರಕರಣ: ಬೇಟಿ ಬಚಾವೋ ನಾಟಕಕ್ಕೆ ಧಿಕ್ಕಾರ ಕೂಗಿದ ನಟ ಕಿಶೋರ್

‘ಕೆ.ಜಿ.ಎಫ್‌: ಚಾಪ್ಟರ್​ 2’, ‘ಸಲಾರ್‌’ ಸಿನಿಮಾಗಳ ಖ್ಯಾತಿಯ ರವಿ ಬಸ್ರೂರು ಅವರು ‘ಆಪರೇಷನ್ ಕೊಂಬುಡಿಕ್ಕಿ’ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ‘ಹೆಬ್ಬುಲಿ’, ‘ಕ್ರಾಂತಿ’ ಸಿನಿಮಾಗಳ ಖ್ಯಾತಿಯ ಛಾಯಾಗ್ರಾಹಕ ಕರುಣಾಕರ್‌ ಅವರು ಈ ಸಿನಿಮಾಗೆ ಕ್ಯಾಮೆರಾ ಕೆಲಸ ಮಾಡಲಿದ್ದಾರೆ. ದೀಪು ಎಸ್. ಕುಮಾರ್‌ ಅವರು ಸಂಕಲನ ಮಾಡಲಿದ್ದಾರೆ. ಇವರೆಲ್ಲರ ಸಂಗಮದಲ್ಲಿ ‘ಆಪರೇಷನ್ ಕೊಂಬುಡಿಕ್ಕಿ’ ಮೂಡಿಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!