AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಕಿಶೋರ್​ ಹೊಸ ಸಿನಿಮಾ ‘ಆಪರೇಷನ್ ಕೊಂಬುಡಿಕ್ಕಿ’; ತೆರೆಹಿಂದೆ ನುರಿತ ತಂತ್ರಜ್ಞರು

ಎಂಥ ಪಾತ್ರ ಕೊಟ್ಟರೂ ಅದಕ್ಕೆ ನ್ಯಾಯ ಒದಗಿಸಬಲ್ಲ ಕಲಾವಿದ ಕಿಶೋರ್​ ಅವರು ಈಗ ‘ಆಪರೇಷನ್ ಕೊಂಬುಡಿಕ್ಕಿ’ ಸಿನಿಮಾದಲ್ಲಿ ಹೀರೋ ಆಗಿ ನಟಿಸುತ್ತಿದ್ದಾರೆ. ಎಸ್​. ಮಹೇಂದರ್​ ನಿರ್ದೇಶನದ ಈ ಚಿತ್ರವನ್ನು ಅನುಪ್ ಹನುಮಂತೇಗೌಡ ನಿರ್ಮಿಸುತ್ತಿದ್ದಾರೆ. ‘ಸಿಲ್ವರ್‌ ಸ್ಕ್ರೀನ್‌ ಸ್ಟುಡಿಯೋಸ್’ ಮೂಲಕ ಅದ್ದೂರಿಯಾಗಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ನಟ ಕಿಶೋರ್​ ಹೊಸ ಸಿನಿಮಾ ‘ಆಪರೇಷನ್ ಕೊಂಬುಡಿಕ್ಕಿ’; ತೆರೆಹಿಂದೆ ನುರಿತ ತಂತ್ರಜ್ಞರು
ಕಿಶೋರ್​, ಎಸ್​. ಮಹೇಂದರ್​, ಅನುಪ್​
ಮದನ್​ ಕುಮಾರ್​
|

Updated on: Aug 07, 2024 | 10:01 PM

Share

ಖ್ಯಾತ ನಟ ಕಿಶೋರ್​ ಅವರು ಈಗಾಗಲೇ ಅನೇಕ ಬಗೆಯ ಪಾತ್ರಗಳನ್ನು ಮಾಡಿ ಜನಮನ ಗೆದ್ದಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆಯಲ್ಲೂ ಅವರು ಹೆಸರುವಾಸಿ ಆಗಿದ್ದಾರೆ. ಈಗ ಕನ್ನಡದಲ್ಲಿ ಅವರೊಂದು ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಆಪರೇಷನ್ ಕೊಂಬುಡಿಕ್ಕಿ’ ಎಂಬುದು ಈ ಸಿನಿಮಾದ ಶೀರ್ಷಿಕೆ. ಇಂಥ ಡಿಫರೆಂಟ್​ ಟೈಟಲ್​ ಇಟ್ಟುಕೊಂಡಿರುವ ಕಾರಣದಿಂದ ಸಿನಿಮಾ ಬಗ್ಗೆ ಜನರಿಗೆ ಸಹಜವಾಗಿಯೇ ಕೌತುಕ ನಿರ್ಮಾಣ ಆಗಿದೆ. ಈ ಚಿತ್ರದ ತೆರೆ ಹಿಂದೆ ಖ್ಯಾತನಾಮರು ಕೆಲಸ ಮಾಡುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ಒಂದಷ್ಟು ಮಾಹಿತಿ..

ನಿರ್ಮಾಪಕ ಅನುಪ್ ಹನುಮಂತೇಗೌಡ ಅವರು ‘ಆಪರೇಷನ್ ಕೊಂಬುಡಿಕ್ಕಿ’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಈ ಮೊದಲು ಸೂಪರ್ ಹಿಟ್ ‘ಶಿವಾಜಿ ಸುರತ್ಕಲ್’ ಸರಣಿಯ ಎರಡು ಚಿತ್ರಗಳನ್ನು ನಿರ್ಮಾಣ ಮಾಡಿ ಯಶಸ್ಸು ಗಳಿಸಿದ್ದ ಅನುಪ್​ ಅವರಿಗೆ ಇದು ಮೂರನೇ ಸಿನಿಮಾ. ಮತ್ತೊಂದು ಗೆಲುವು ಪಡೆಯುವ ಭರವಸೆಯೊಂದಿಗೆ ಅವರು ಈ ಸಿನಿಮಾದ ಕೆಲಸಗಳನ್ನು ಆರಂಭಿಸಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ಕಿರಿಯ ಹಾಗೂ ಯಶಸ್ವಿ ನಿರ್ಮಾಪಕ ಎನಿಸಿಕೊಂಡ ಅವರು ‘ಸಿಲ್ವರ್‌ ಸ್ಕ್ರೀನ್‌ ಸ್ಟುಡಿಯೋಸ್’ ಸಂಸ್ಥೆಯನ್ನು ಆರಂಭಿಸಿ, ಅದರ ಮೂಲಕ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ.

ಇದನ್ನೂ ಓದಿ: ಗೆಳೆಯ ಡ್ಯಾನಿಯಲ್​ಗೆ ವಿದಾಯ ಹೇಳಿದ ನಟ ಕಿಶೋರ್

‘ಆಪರೇಷನ್ ಕೊಂಬುಡಿಕ್ಕಿ’ ಸಿನಿಮಾಗೆ ಹಿರಿಯ ನಿರ್ದೇಶಕ ಎಸ್. ಮಹೇಂದರ್ ಅವರು ಆ್ಯಕ್ಷನ್​-ಕಟ್​ ಹೇಳಲಿದ್ದಾರೆ. ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡ ಅವರು ಈಗ ಹೊಸ ಕಥೆಯೊಂದಿಗೆ ಜನರನ್ನು ರಂಜಿಸಲು ತಯಾರಿ ಮಾಡಿಕೊಂಡಿದ್ದಾರೆ. ಕಿಶೋರ್ ಹೀರೋ ಆಗಿ ನಟಿಸುತ್ತಿರುವುದರಿಂದ ನಿರೀಕ್ಷೆ ಹೆಚ್ಚಾಗಿದೆ. ಕಿಶೋರ್​ ಅವರಿಗೆ ಪರಭಾಷೆಯಲ್ಲೂ ಅಭಿಮಾನಿಗಳು ಇದ್ದಾರೆ.

ಇದನ್ನೂ ಓದಿ: ಯುವತಿಯರ ಬೆತ್ತಲೆ ಮೆರವಣಿಗೆ ಪ್ರಕರಣ: ಬೇಟಿ ಬಚಾವೋ ನಾಟಕಕ್ಕೆ ಧಿಕ್ಕಾರ ಕೂಗಿದ ನಟ ಕಿಶೋರ್

‘ಕೆ.ಜಿ.ಎಫ್‌: ಚಾಪ್ಟರ್​ 2’, ‘ಸಲಾರ್‌’ ಸಿನಿಮಾಗಳ ಖ್ಯಾತಿಯ ರವಿ ಬಸ್ರೂರು ಅವರು ‘ಆಪರೇಷನ್ ಕೊಂಬುಡಿಕ್ಕಿ’ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ‘ಹೆಬ್ಬುಲಿ’, ‘ಕ್ರಾಂತಿ’ ಸಿನಿಮಾಗಳ ಖ್ಯಾತಿಯ ಛಾಯಾಗ್ರಾಹಕ ಕರುಣಾಕರ್‌ ಅವರು ಈ ಸಿನಿಮಾಗೆ ಕ್ಯಾಮೆರಾ ಕೆಲಸ ಮಾಡಲಿದ್ದಾರೆ. ದೀಪು ಎಸ್. ಕುಮಾರ್‌ ಅವರು ಸಂಕಲನ ಮಾಡಲಿದ್ದಾರೆ. ಇವರೆಲ್ಲರ ಸಂಗಮದಲ್ಲಿ ‘ಆಪರೇಷನ್ ಕೊಂಬುಡಿಕ್ಕಿ’ ಮೂಡಿಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ