AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮುರಿಯುವ ಕೆಲಸ: ಉರಿಗೌಡ-ನಂಜೇಗೌಡ ವಿವಾದ ಬಗ್ಗೆ ನಟ ಕಿಶೋರ್ ಎಚ್ಚರಿಕೆ

ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಉರಿಗೌಡ-ನಂಜೇಗೌಡ ವಿವಾದದ ಬಗ್ಗೆ ನಟ ಕಿಶೋರ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಮನೆ ಮುರಿಯುವ ಕೆಲಸ: ಉರಿಗೌಡ-ನಂಜೇಗೌಡ ವಿವಾದ ಬಗ್ಗೆ ನಟ ಕಿಶೋರ್ ಎಚ್ಚರಿಕೆ
ನಟ ಕಿಶೋರ್
Follow us
ಮಂಜುನಾಥ ಸಿ.
|

Updated on: Mar 23, 2023 | 4:00 PM

ರಾಜ್ಯ ರಾಜಕಾರಣದಲ್ಲಿ ಉರಿಗೌಡ-ನಂಜೇಗೌಡ (Urigowda-Nanjegowda) ಪಾತ್ರಗಳು ವಿವಾದ ಎಬ್ಬಿಸಿವೆ. ಟಿಪ್ಪುವನ್ನು (Tipu) ಉರಿಗೌಡ-ನಂಜೇಗೌಡ ಕೊಂದರು ಎಂದು ಬಿಜೆಪಿ ನರೇಟಿವ್ ಬಿತ್ತಲು ಯತ್ನಿಸುತ್ತಿದ್ದು, ಜೆಡಿಎಸ್, ಕಾಂಗ್ರೆಸ್ ಸೇರಿದಂತೆ ಕೆಲವು ಇತಿಹಾಸಕಾರರು ಇದನ್ನು ತೀವ್ರವಾಗಿ ವಿರೋಧಿಸಿದ್ದಾರೆ. ಇದರ ನಡುವೆ ಉರಿಗೌಡ-ನಂಜೇಗೌಡ ಪಾತ್ರಗಳನ್ನು ಪ್ರಧಾನವಾಗಿರಿಸಿ ನಿರ್ಮಾಪಕ, ಸಚಿವ ಮುನಿರತ್ನ ಸಿನಿಮಾ ಮಾಡುವುದಾಗಿ ಘೋಷಿಸಿದ ಬಳಿಕವಂತೂ ವಿವಾದ ಇನ್ನಷ್ಟು ಬುಗಿಲೆದ್ದಿತ್ತು. ಹಲವರು ಈ ಬಗ್ಗೆ ಪ್ರತಿಕ್ರಿಯೆಗಳನ್ನು ನೀಡಿದ್ದರು. ಅಂತೆಯೇ ನಟ ಕಿಶೋರ್ (Actor Kishore) ಸಹ ಪ್ರಸಕ್ತ ವಿವಾದದ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

”ಯಾವುದೋ ಕಾಲದ ರಾಜರ ಹೆಸರಲ್ಲಿ ಇಂದಿನ ರಾಜಕೀಯ ಇದು ಇಂದಿನ ಪ್ರಜಾಪ್ರಭುತ್ವ. ನಂಜೇಗೌಡ ಉರಿಗೌಡರ ಸೃಷ್ಟಿ ಒಂದು ಕಲ್ಲಿಗೆ ಎರಡು ಹಕ್ಕಿ ಹೊಡೆಯೋ ಯತ್ನವೇ? ಇತ್ತ ಟಿಪ್ಪುವನ್ನು ಕೊಂದವರೆೆಂದು ಹೇಳಿ ಮುಸ್ಲಿಮರನ್ನೂ, ಒಕ್ಕಲಿಗರನ್ನೂ ಒಬ್ಬರ ಮೇಲೊಬ್ಬರನ್ನು ಎತ್ತಿಕಟ್ಟುತ್ತಲೇ ಒಕ್ಕಲಿಗರು ಬ್ರಿಟೀಷರ ಪರವಾಗಿದ್ದರೆಂದು ಹೇಳಿ ಮುಂದೊಂದು ದಿನ ಒಕ್ಕಲಿಗರಿಗೂ ದೇಶದ್ರೋಹಿ ಪಟ್ಟಕಟ್ಟುವ ಹುನ್ನಾರವೇ?” ಎಂದು ಕಿಶೋರ್ ಪ್ರಶ್ನೆ ಮಾಡಿದ್ದಾರೆ.

ಮುಂದುವರೆದು, ”ಮೊದಲು ಹಿಂದೂ ಮುಸ್ಲಿಂ ಅಂದರು ಮನೆಯ ಸದಸ್ಯರನ್ನು ಎತ್ತಿಕಟ್ಟಿದರು, ಗಾಂಧಿಯೆಂದರು, ಗಾಂಧಿ ಕೊಂದರು, ರೈತರನ್ನು ಭಯೋತ್ಪಾದಕರೆಂದರು, ಉರಿ ಹೊತ್ತಿಸಿದರು ನಂಜು ಕಾರಿದರು ಒಕ್ಕಲಿಗರೆಂದರು ಟಿಪ್ಪುವೆಂದರು ಬಿಹಾರಿಗಳೆಂದರು ತಮಿಳರೆಂದರು, ಧರ್ಮವೆಂದರು, ಜಾತಿಯೆಂದರು, ದಲಿತರೆಂದರು ಭಾಷೆಯೆಂದರು ದೇಶವೆಂದರು, ಇತಿಹಾಸ ತಿರುಚಿದರು, ಸುಳ್ಳು ಸುದ್ದಿ ಹರಡಿದರು. ಕೇವಲ ಅಧಿಕಾರದಾಸೆಯಿಂದ ಸರ್ವಜನಾಂಗದ ಶಾಂತಿಯ ತೋಟವನ್ನು ಕದಡಿ, ವಸುದೇವ ಕುಟುಂಬಕಂನ ಹೆಮ್ಮೆಯ ಕುಟುಂಬವನ್ನು ಮುರಿಯಲು ಬರುತ್ತಿದ್ದಾರೆ ಮಾಡಿದ ಕೆಲಸದ ಮೇಲೆ ಮತ ಯಾಚಿಸಲು ಯೋಗ್ಯತೆಯಿಲ್ಲದ ಧರ್ಮಾಂಧ ಮನೆಹಾಳರು. ಚುನಾವಣೆಯ ಕಾಲವಿದು ಎಚ್ಚರ” ಎಂದು ಯಾವುದೇ ಸಂಘಟನೆ, ಪಕ್ಷದ ಹೆಸರು ಹೇಳದೆ ಎಚ್ಚರಿಕೆ ನೀಡಿದ್ದಾರೆ ನಟ ಕಿಶೋರ್.

ಬಹುಭಾಷಾ ನಟ ಕಿಶೋರ್, ಮೊದಲಿನಿಂದಲೂ ರಾಜಕೀಯ, ಸಾಮಾಜಿಕ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ನಿರ್ಭೀತಿಯಿಂದ ಹಂಚಿಕೊಳ್ಳುತ್ತಲೇ ಬಂದಿದ್ದಾರೆ. ಕೆಲವು ದಿನಗಳ ಹಿಂದೆ ಲೋಕಸಭೆಯಲ್ಲಿ ಪ್ರತಿಪಕ್ಷಗಳ ಮೈಕ್​ಗಳನ್ನು 19 ನಿಮಿಷಗಳ ಕಾಲ ಮ್ಯೂಟ್ ಮಾಡಿದ್ದ ಘಟನೆ ಕುರಿತಾಗಿಯೂ ಪೋಸ್ಟ್ ಹಂಚಿಕೊಂಡಿದ್ದ ಕಿಶೋರ್, ”ಮೂಕ ಸಂಸತ್ತು, ಮೂಕ ಪ್ರಜಾಪ್ರಭುತ್ವ, ಮೂಕ ನ್ಯಾಯಾಂಗ, ಮೂಕ ಆಡಳಿತಶಾಹಿ, ಮೂಕ ಮಾಧ್ಯಮಗಳು,, ಮೂಕ ರಾಷ್ಟ್ರ, ಮೂಕ ಪ್ರಜೆಗಳು, ಆದರೆ, ನಮ್ಮ ಚುನಾಯಿತ ಪ್ರತಿನಿಧಿಗಳಿಗೇ ಅದರ ಬಗ್ಗೆ ದನಿಯೆತ್ತಲು ಅವಕಾಶವಿಲ್ಲದಿದ್ದರೂ ಇಂದಿಗೂ ನಮ್ಮ ದೇಶ ಎದುರಿಸುತ್ತಿರುವ ಎಲ್ಲಾ ನೈಜ ಸಮಸ್ಯೆಗಳನ್ನು ಕಣ್ಣಾರೆ ನೋಡಬಲ್ಲಷ್ಟು ಶಕ್ತಿ ನಮಗಿದೆ ಎನ್ನುವ ಭರವಸೆ ಇನ್ನೂ ಇದೆ,. ಇದೆಲ್ಲಾ ಏಕೆ ನಡೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಬಲ್ಲ, ಯೋಚಿಸಬಲ್ಲ ಶಕ್ತಿ ನಮಗಿದೆ ಎನ್ನುವ ಭರವಸೆ ಇನ್ನೂ ಇದೆ” ಎಂದಿದ್ದರು.

ಕೆಲವು ದಿನಗಳ ಹಿಂದೆ ನೀಡಿದ್ದ ಸಂದರ್ಶನವೊಂದರಲ್ಲಿ ಕಮರ್ಶಿಯಲ್ ಸಿನಿಮಾಗಳ ಬಗ್ಗೆ ಮಾತನಾಡುತ್ತಾ ಕಿಶೋರ್ ಅವರು, ಕೆಜಿಎಫ್ ಅನ್ನು ಬ್ರೈನ್​ಲೆಸ್ ಸಿನಿಮಾ ಎಂದಿದ್ದಾರೆ ಎಂಬುದು ವಿವಾದವಾಗಿತ್ತು. ಅದಕ್ಕೆ ಸ್ಪಷ್ಟನೆ ನೀಡಿದ್ದ ಕಿಶೋರ್, ಬ್ರೈನ್​ಲೆಸ್ ಸಿನಿಮಾ ಎಂಬುದು ನಾನು ಬಳಸಿದ ಪದವಲ್ಲ ಎಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ