AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ಮೇಲೆ ಹಲ್ಲೆ ಪ್ರಕರಣ: ಕೊವಿಡ್​ನಿಂದ ಗುಣವಾಗಿ ಬಂದ ನಟ ಕೋಮಲ್​ ಹೇಳಿದ್ದೇನು?

Assault on Doctors: ವ್ಯಕ್ತಿ ಸಾಯಲಿ ಎಂದು ಯಾರೂ ಚಿಕಿತ್ಸೆ ಕೊಡುವುದಿಲ್ಲ. ಅವರಿಗೆ ತಿಳಿದ ರೀತಿಯಲ್ಲಿ ಚಿಕಿತ್ಸೆ ನೀಡಿರುತ್ತಾರೆ. ದಯವಿಟ್ಟು ಎಲ್ಲರೂ ಡಾಕ್ಟರ್​ಗಳಿಗೆ ಬೆಂಬಲ ನೀಡಿ ಎಂದು ನಟ ಕೋಮಲ್​ ಕುಮಾರ್​ ಹೇಳಿದ್ದಾರೆ.

ವೈದ್ಯರ ಮೇಲೆ ಹಲ್ಲೆ ಪ್ರಕರಣ: ಕೊವಿಡ್​ನಿಂದ ಗುಣವಾಗಿ ಬಂದ ನಟ ಕೋಮಲ್​ ಹೇಳಿದ್ದೇನು?
ಕೋಮಲ್ ಕುಮಾರ್​
ಮದನ್​ ಕುಮಾರ್​
|

Updated on: Jun 19, 2021 | 9:43 AM

Share

ಕೊವಿಡ್​ ಎರಡನೇ ಅಲೆಗೆ ಅನೇಕರು ಪ್ರಾಣ ಕಳೆದುಕೊಂಡರು. ಲಕ್ಷಾಂತರ ಜನರ ಜೀವ ಉಳಿಸಲು ವೈದ್ಯರು ಹಗಲು-ರಾತ್ರಿ ಕಷ್ಟಪಟ್ಟಿದ್ದಾರೆ. ಇಂಥ ಕಷ್ಟದ ಪರಿಸ್ಥಿತಿಯಲ್ಲೂ ವೈದ್ಯರ ಮೇಲೆ ಹಲ್ಲೆ ಮಾಡಿದ ಘಟನೆಗಳು ನಡೆದಿರುವುದು ವಿಷಾದನೀಯ. ಈ ಬಗ್ಗೆ ಕನ್ನಡದ ಖ್ಯಾತ ನಟ ಕೋಮಲ್​ ಕುಮಾರ್​ ಮಾತನಾಡಿದ್ದಾರೆ. ಅವರು ಕೂಡ ಕೊರೊನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಗುಣಮುಖರಾಗಿ ಬಂದಿರುವ ಕೋಮಲ್ ಈಗ​ ವೈದ್ಯರ ಬಗ್ಗೆ ಮಾತನಾಡಿದ್ದಾರೆ.

‘ಎಲ್ಲರಿಗೂ ನಮಸ್ಕಾರ. ನಾನು ಇಂದು ಮಾತನಾಡಲು ದೊಡ್ಡ ಕಾರಣ ಇದೆ. ಈ ಕೊವಿಡ್​ ಎಂಬ ಜಾಗತಿಕ ಸಾಂಕ್ರಮಿಕದ ಸಮಯದಲ್ಲಿ ನಾವೆಲ್ಲರೂ ವೈದ್ಯರಿಗೆ ಬೆಂಬಲ ನೀಡಬೇಕು. ಅವರು ಸಮಾಜದಲ್ಲಿ ಮುಂದೆ ನಿಂತು ಸೇವೆ ಮಾಡುತ್ತಿದ್ದಾರೆ. ತಮ್ಮ ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದಾರೆ. ಹಣೆಬರಹ ಸರಿ ಇಲ್ಲದಿದ್ದಾಗ ಕೆಲವರು ಸಾಯುತ್ತಾರೆ. ಅದಕ್ಕೆ ಡಾಕ್ಟರ್​ ಕಾರಣ ಅಲ್ಲ. ಇವತ್ತು ವೈದ್ಯರ ಮೇಲೆ ಹಲ್ಲೆ ಮಾಡುವುದು ಸರಿಯಲ್ಲ’ ಎಂದು ಕೋಮಲ್​ ಹೇಳಿದ್ದಾರೆ.

‘ವೈದ್ಯರನ್ನು ದೇವರಿಗೆ ಹೋಲಿಸುತ್ತಾರೆ. ಆಪ್ತರು ಸತ್ತಿದ್ದಾರೆ ಎಂದಾಗ ಎಲ್ಲರಿಗೂ ನೋವು ಇರುತ್ತದೆ. ವ್ಯಕ್ತಿ ಸಾಯಲಿ ಎಂದು ಯಾರೂ ಚಿಕಿತ್ಸೆ ಕೊಡುವುದಿಲ್ಲ. ಅವರಿಗೆ ತಿಳಿದ ರೀತಿಯಲ್ಲಿ ಚಿಕಿತ್ಸೆ ನೀಡಿರುತ್ತಾರೆ. ದಯವಿಟ್ಟು ಎಲ್ಲರೂ ಡಾಕ್ಟರ್​ಗಳಿಗೆ ಬೆಂಬಲ ನೀಡಿ. ತಾಳ್ಮೆ ಇಟ್ಟುಕೊಳ್ಳಿ, ಅವರಿಗೆ ಗೌರವ ನೀಡಿ. ನನ್ನ ಅನಿಸಿಕೆ ಹೇಳಿದ್ದೇನೆ. ಏನಾದರೂ ತಪ್ಪಿದ್ದರೆ ಕ್ಷಮಿಸಿ’ ಎಂದಿದ್ದಾರೆ ಕೋಮಲ್​.

‘ನಾನು ಯಾವಾಗಲೂ ವೈದ್ಯರಿಗೆ ಬೆಂಬಲ ನೀಡುತ್ತಾನೆ. ಯಾಕೆಂದರೆ ಅವರೇ ನಮ್ಮ ಜೀವ ಉಳಿಸುವ ನಿಜವಾದ ದೇವರು. ಉದಾಹರಣೆಗೆ, ನನಗೂ ಕೊರೊನಾ ಬಂದಿತ್ತು. ನನ್ನನ್ನು ಕಾಪಾಡಿದ್ದೇ ವೈದ್ಯರು. ಅವರ ಪರವಾಗಿ ಕಳಕಳಿಯಿಂದ ಪ್ರಾರ್ಥನೆ ಮಾಡುತ್ತೇನೆ. ದಯವಿಟ್ಟು ಹಲ್ಲೆ ಮಾಡಬೇಡಿ. ಹಲ್ಲೆ ಮಾಡುವುದು ಶಿಕ್ಷಾರ್ಹ ಅಪರಾಧ’ ಎಂದು ಕೋಮಲ್​ ಹೇಳಿದ್ದಾರೆ.

ಕೋಮಲ್​ ಅವರಿಗೆ ಕೊರೊನಾ ಪಾಸಿಟಿವ್​ ಆದಾಗ ಅವರ ಸಹೋದರ, ನಟ ಜಗ್ಗೇಶ್​ ಬಹಳ ಕಷ್ಟಪಟ್ಟಿದ್ದರು. ಯಾರಿಗೂ ಗೊತ್ತಾಗದ ರೀತಿಯಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದರು. ಕೋಮಲ್​ ಚೇರಿಸಿಕೊಂಡ ನಂತರವೇ ಈ ವಿಷಯವನ್ನು ಅವರು ಜಗತ್ತಿಗೆ ತಿಳಿಸಿದ್ದರು. ಆ ಸಂದರ್ಭದಲ್ಲಿ ತಾವು ಅನುಭವಿಸಿದ ನೋವು ಏನೆಂಬುದರ ಬಗ್ಗೆ ಜಗ್ಗೇಶ್​ ಟ್ವೀಟ್​ ಮಾಡಿದ್ದರು.

ಇದನ್ನೂ ಓದಿ:

ನಟ ಕೋಮಲ್​ಗೆ ಕೊರೊನಾ; ರಹಸ್ಯವಾಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ ಜಗ್ಗೇಶ್​​

ರಿಯಲ್​ ಹೀರೋ ಆದ ಜಗ್ಗೇಶ್​; 20 ದಿನಗಳಿಂದ ಕೊರೊನಾ ರೋಗಿಗಳ ಸೇವೆಯಲ್ಲಿ ನಟ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು