AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧರಣಿ’ ಚಿತ್ರದ ಮೂಲಕ ಕೋಳಿ ಕಾಳಗದ ಕಥೆ ಹೇಳ ಹೊರಟ ನಟ ಮನೋಜ್

ಈ ಮೊದಲು ‘ಟಕ್ಕರ್​’ ಹೆಸರಿನ ಸಿನಿಮಾ ಮಾಡಿದ್ದರು ಮನೋಜ್. ಅವರಿಗೆ ಈ ಚಿತ್ರದಿಂದ ಜನಪ್ರಿಯತೆ ಸಿಕ್ಕಿತು. ಈಗ ಅವರು ‘ಧರಣಿ’ ಸಿನಿಮಾ ಮೂಲಕ ಬೇರೆಯದೇ ಕಥೆ ಹೇಳಲು ಹೊರಟಿದ್ದಾರೆ.

‘ಧರಣಿ’ ಚಿತ್ರದ ಮೂಲಕ ಕೋಳಿ ಕಾಳಗದ ಕಥೆ ಹೇಳ ಹೊರಟ ನಟ ಮನೋಜ್
ಧರಣಿ ಸಿನಿಮಾದ ಪೋಸ್ಟರ್
TV9 Web
| Edited By: |

Updated on: Jan 17, 2023 | 2:22 PM

Share

ಸಣ್ಣ ಸಣ್ಣ ವಿಚಾರಗಳನ್ನೇ ಇಟ್ಟುಕೊಂಡು ಸಿನಿಮಾ ಮಾಡಿ ಗೆದ್ದವರು ಅನೇಕರಿದ್ದಾರೆ. ಈಗ ಕೋಳಿ ಕಾಳಗದ ಮೇಲೆ ಸಿನಿಮಾ ಬರುತ್ತಿದೆ. ಆ ಚಿತ್ರಕ್ಕೆ ‘ಧರಣಿ’ (Dharani Movie) ಹೆಸರಿನ ಶೀರ್ಷಿಕೆ ಇಡಲಾಗಿದೆ. ‘ಟಕ್ಕರ್’ ಖ್ಯಾತಿಯ ಮನೋಜ್ (Actor Manoj) ಅವರು ಈ ಚಿತ್ರದಲ್ಲಿ ಹೀರೋ ಆಗಿ ನಟಿಸುತ್ತಿದ್ದು, ಸಿನಿಮಾದ ಫಸ್ಟ್ ಪೋಸ್ಟರ್ ರಿಲೀಸ್ ಆಗಿದೆ. ಈ ಪೋಸ್ಟರ್​ ಸಾಕಷ್ಟು ಗಮನ ಸೆಳೆಯುತ್ತಿದೆ.

ಈ ಮೊದಲು ‘ಟಕ್ಕರ್​’ ಹೆಸರಿನ ಸಿನಿಮಾ ಮಾಡಿದ್ದರು ಮನೋಜ್. ಅವರಿಗೆ ಈ ಚಿತ್ರದಿಂದ ಜನಪ್ರಿಯತೆ ಸಿಕ್ಕಿತು. ಈಗ ಅವರು ‘ಧರಣಿ’ ಸಿನಿಮಾ ಮೂಲಕ ಬೇರೆಯದೇ ಕಥೆ ಹೇಳಲು ಹೊರಟಿದ್ದಾರೆ. ಅವರು ಭಿನ್ನ ಲುಕ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಕಮರ್ಷಿಯಲ್ ಅಂಶಗಳೂ ಕೂಡ ಸಾಕಷ್ಟು ಇರಲಿವೆಯಂತೆ.

ಮನೋಜ್ ಅವರ ಜನ್ಮದಿನದ ಅಂಗವಾಗಿ ‘ಧರಣಿ’ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ. ಮನೋಜ್​ ಭಯದಲ್ಲಿ ಕುಳಿತಿದ್ದಾರೆ. ಅವರ ಪಕ್ಕದಲ್ಲಿ ಇರುವ ಕೋಳಿ ಗಮನ ಸೆಳೆದಿದೆ. ಮೊದಲ ಪೋಸ್ಟರ್ ಮೂಲಕವೇ ಸಿನಿಮಾ ಬಗ್ಗೆ ನಿರೀಕ್ಷೆ ಹುಟ್ಟಿದೆ. ಈ ಚಿತ್ರಕ್ಕೆ ನಿರ್ದೇಶಕ ಸುಧೀರ್ ಶಾನುಭೋಗ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಅವರು ಸಿನಿಮಾ ನಿರ್ದೇಶನ ಮಾಡಿ ಅನುಭವ ಪಡೆದಿದ್ದಾರೆ.

ಇದನ್ನೂ ಓದಿ:  ಪ್ರಶಾಂತ್​ ನೀಲ್​-ಪ್ರಭಾಸ್​ ಮತ್ತೊಂದು ಸಿನಿಮಾ? ‘ರವಣಂ’ ಟೈಟಲ್ ಫಿಕ್ಸ್

ವಿನಯ್ ರಾಜ್​ಕುಮಾರ್ ನಟನೆಯ ‘ಅನಂತು ವರ್ಸಸ್ ನುಸ್ರತ್’ ಚಿತ್ರ ಸದ್ದು ಮಾಡಿತ್ತು. ಈ ಚಿತ್ರಕ್ಕೆ ಸುಧೀರ್ ಅವರೇ ನಿರ್ದೇಶನ ಮಾಡಿದ್ದರು. ‘ಮಾರೀಚ’ ಚಿತ್ರವನ್ನು ಸುಧೀರ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಇನ್ನಷ್ಟೇ ರಿಲೀಸ್ ಆಗಬೇಕಿದೆ. ‘ಅಳಿದು ಉಳಿದವರು’ ಸಿನಿಮಾಗೆ ಸುಧೀರ್ ಕಥೆ ಬರೆದಿದ್ದರು. ಜಿ.ಕೆ. ಉಮೇಶ್ ಹಾಗೂ ಕೆ. ಗಣೇಶ್ ಐತಾಳ್​ ಅವರು ಈ ಚಿತ್ರವನ್ನು ‘ಯಂಗ್ ಥಿಂಕರ್ಸ್ ಫಿಲ್ಮ್ಸ್​​’ ಬ್ಯಾನರ್​ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಶಶಾಂಕ್ ಶೇಷಗಿರಿ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅರುಣ್ ಸುರೇಶ್ ಅವರು ಕ್ಯಾಮೆರಾ ಹಿಡಿದ್ದಾರೆ. ಅರುಣೋದಯ ಅವರು ಚಿತ್ರಕ್ಕೆ ಕಥೆ ಬರೆದಿದ್ದಾರೆ. ಡಾ.ವಿ.ನಾಗೇಂದ್ರ ಪ್ರಸಾದ್ ಹಾಗೂ ಶಿವ ಕುಮಾರ್ ಮಾವಲಿ ಅವರು ಚಿತ್ರದ ಹಾಡಿಗೆ ಸಾಹಿತ್ಯ ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ