AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧರಣಿ’ ಚಿತ್ರದ ಮೂಲಕ ಕೋಳಿ ಕಾಳಗದ ಕಥೆ ಹೇಳ ಹೊರಟ ನಟ ಮನೋಜ್

ಈ ಮೊದಲು ‘ಟಕ್ಕರ್​’ ಹೆಸರಿನ ಸಿನಿಮಾ ಮಾಡಿದ್ದರು ಮನೋಜ್. ಅವರಿಗೆ ಈ ಚಿತ್ರದಿಂದ ಜನಪ್ರಿಯತೆ ಸಿಕ್ಕಿತು. ಈಗ ಅವರು ‘ಧರಣಿ’ ಸಿನಿಮಾ ಮೂಲಕ ಬೇರೆಯದೇ ಕಥೆ ಹೇಳಲು ಹೊರಟಿದ್ದಾರೆ.

‘ಧರಣಿ’ ಚಿತ್ರದ ಮೂಲಕ ಕೋಳಿ ಕಾಳಗದ ಕಥೆ ಹೇಳ ಹೊರಟ ನಟ ಮನೋಜ್
ಧರಣಿ ಸಿನಿಮಾದ ಪೋಸ್ಟರ್
TV9 Web
| Edited By: |

Updated on: Jan 17, 2023 | 2:22 PM

Share

ಸಣ್ಣ ಸಣ್ಣ ವಿಚಾರಗಳನ್ನೇ ಇಟ್ಟುಕೊಂಡು ಸಿನಿಮಾ ಮಾಡಿ ಗೆದ್ದವರು ಅನೇಕರಿದ್ದಾರೆ. ಈಗ ಕೋಳಿ ಕಾಳಗದ ಮೇಲೆ ಸಿನಿಮಾ ಬರುತ್ತಿದೆ. ಆ ಚಿತ್ರಕ್ಕೆ ‘ಧರಣಿ’ (Dharani Movie) ಹೆಸರಿನ ಶೀರ್ಷಿಕೆ ಇಡಲಾಗಿದೆ. ‘ಟಕ್ಕರ್’ ಖ್ಯಾತಿಯ ಮನೋಜ್ (Actor Manoj) ಅವರು ಈ ಚಿತ್ರದಲ್ಲಿ ಹೀರೋ ಆಗಿ ನಟಿಸುತ್ತಿದ್ದು, ಸಿನಿಮಾದ ಫಸ್ಟ್ ಪೋಸ್ಟರ್ ರಿಲೀಸ್ ಆಗಿದೆ. ಈ ಪೋಸ್ಟರ್​ ಸಾಕಷ್ಟು ಗಮನ ಸೆಳೆಯುತ್ತಿದೆ.

ಈ ಮೊದಲು ‘ಟಕ್ಕರ್​’ ಹೆಸರಿನ ಸಿನಿಮಾ ಮಾಡಿದ್ದರು ಮನೋಜ್. ಅವರಿಗೆ ಈ ಚಿತ್ರದಿಂದ ಜನಪ್ರಿಯತೆ ಸಿಕ್ಕಿತು. ಈಗ ಅವರು ‘ಧರಣಿ’ ಸಿನಿಮಾ ಮೂಲಕ ಬೇರೆಯದೇ ಕಥೆ ಹೇಳಲು ಹೊರಟಿದ್ದಾರೆ. ಅವರು ಭಿನ್ನ ಲುಕ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಕಮರ್ಷಿಯಲ್ ಅಂಶಗಳೂ ಕೂಡ ಸಾಕಷ್ಟು ಇರಲಿವೆಯಂತೆ.

ಮನೋಜ್ ಅವರ ಜನ್ಮದಿನದ ಅಂಗವಾಗಿ ‘ಧರಣಿ’ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ. ಮನೋಜ್​ ಭಯದಲ್ಲಿ ಕುಳಿತಿದ್ದಾರೆ. ಅವರ ಪಕ್ಕದಲ್ಲಿ ಇರುವ ಕೋಳಿ ಗಮನ ಸೆಳೆದಿದೆ. ಮೊದಲ ಪೋಸ್ಟರ್ ಮೂಲಕವೇ ಸಿನಿಮಾ ಬಗ್ಗೆ ನಿರೀಕ್ಷೆ ಹುಟ್ಟಿದೆ. ಈ ಚಿತ್ರಕ್ಕೆ ನಿರ್ದೇಶಕ ಸುಧೀರ್ ಶಾನುಭೋಗ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಅವರು ಸಿನಿಮಾ ನಿರ್ದೇಶನ ಮಾಡಿ ಅನುಭವ ಪಡೆದಿದ್ದಾರೆ.

ಇದನ್ನೂ ಓದಿ:  ಪ್ರಶಾಂತ್​ ನೀಲ್​-ಪ್ರಭಾಸ್​ ಮತ್ತೊಂದು ಸಿನಿಮಾ? ‘ರವಣಂ’ ಟೈಟಲ್ ಫಿಕ್ಸ್

ವಿನಯ್ ರಾಜ್​ಕುಮಾರ್ ನಟನೆಯ ‘ಅನಂತು ವರ್ಸಸ್ ನುಸ್ರತ್’ ಚಿತ್ರ ಸದ್ದು ಮಾಡಿತ್ತು. ಈ ಚಿತ್ರಕ್ಕೆ ಸುಧೀರ್ ಅವರೇ ನಿರ್ದೇಶನ ಮಾಡಿದ್ದರು. ‘ಮಾರೀಚ’ ಚಿತ್ರವನ್ನು ಸುಧೀರ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಇನ್ನಷ್ಟೇ ರಿಲೀಸ್ ಆಗಬೇಕಿದೆ. ‘ಅಳಿದು ಉಳಿದವರು’ ಸಿನಿಮಾಗೆ ಸುಧೀರ್ ಕಥೆ ಬರೆದಿದ್ದರು. ಜಿ.ಕೆ. ಉಮೇಶ್ ಹಾಗೂ ಕೆ. ಗಣೇಶ್ ಐತಾಳ್​ ಅವರು ಈ ಚಿತ್ರವನ್ನು ‘ಯಂಗ್ ಥಿಂಕರ್ಸ್ ಫಿಲ್ಮ್ಸ್​​’ ಬ್ಯಾನರ್​ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಶಶಾಂಕ್ ಶೇಷಗಿರಿ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅರುಣ್ ಸುರೇಶ್ ಅವರು ಕ್ಯಾಮೆರಾ ಹಿಡಿದ್ದಾರೆ. ಅರುಣೋದಯ ಅವರು ಚಿತ್ರಕ್ಕೆ ಕಥೆ ಬರೆದಿದ್ದಾರೆ. ಡಾ.ವಿ.ನಾಗೇಂದ್ರ ಪ್ರಸಾದ್ ಹಾಗೂ ಶಿವ ಕುಮಾರ್ ಮಾವಲಿ ಅವರು ಚಿತ್ರದ ಹಾಡಿಗೆ ಸಾಹಿತ್ಯ ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ