AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಂದೆಯನ್ನು ಅಪಘಾತದಲ್ಲಿ ಕಳೆದುಕೊಂಡವನು ನಾನು, ಆ ನೋವು ಗೊತ್ತಿದೆ’; ಸುದ್ದಿಗೋಷ್ಠಿಯಲ್ಲಿ ಭಾವುಕರಾದ ನಾಗಭೂಷಣ್

‘ನಾನು ಓಡಿ ಹೋಗಿಲ್ಲ. ನನಗೆ ಆ ನೋವು ಗೊತ್ತಿದೆ. ನಾನು ಚಿಕ್ಕ ವಯಸ್ಸಿನಲ್ಲಿದ್ದಾಗ ನನ್ನ ತಂದೆಯನ್ನು ಅಪಘಾತದಲ್ಲಿ ಕಳೆದುಕೊಂಡಿದ್ದೆ. ಅಪಘಾತ ಮಾಡಿದವರು ಯಾರು ಎಂದು ಈಗಲೂ ಗೊತ್ತಿಲ್ಲ’ ಎಂದಿದ್ದಾರೆ ನಾಗಭೂಷಣ್.

‘ತಂದೆಯನ್ನು ಅಪಘಾತದಲ್ಲಿ ಕಳೆದುಕೊಂಡವನು ನಾನು, ಆ ನೋವು ಗೊತ್ತಿದೆ’; ಸುದ್ದಿಗೋಷ್ಠಿಯಲ್ಲಿ ಭಾವುಕರಾದ ನಾಗಭೂಷಣ್
ನಾಗಭೂಷಣ್
Mangala RR
| Edited By: |

Updated on: Oct 09, 2023 | 1:23 PM

Share

ಕೆಲ ದಿನಗಳ ಹಿಂದೆ ನಟ ನಾಗಭೂಷಣ್ (Nagabhushan) ಅವರ ಕಾರು ಅಪಘಾತಕ್ಕೆ ಒಳಗಾಗಿತ್ತು. ಈ ವೇಳೆ ಮಹಿಳೆ ಮೃತಪಟ್ಟು, ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದರು. ನಾಗಭೂಷಣ್ ಕಾರು ಕೂಡ ಸಾಕಷ್ಟು ಜಖಂಗೊಂಡಿತ್ತು. ಇತ್ತೀಚೆಗೆ ಅವರ ಕಾರಿನ ಪರಿಶೀಲನೆ ಕೂಡ ಮಾಡಲಾಗಿದೆ. ಈಗ ನಾಗಭೂಷಣ್ ಅವರು ಈ ಘಟನೆ ಬಗ್ಗೆ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

‘ಅಪಘಾತಕ್ಕೆ ಒಳಗಾದ ನಂತರ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿದೆ. ಪೊಲೀಸರಿಗೆ ನಾನೇ ಮಾಹಿತಿ ನೀಡಿದ್ದೆ. ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟರು. ಪೊಲೀಸರು ನನ್ನನ್ನು ಕರೆದುಕೊಂಡು ಹೋಗಿ ಪ್ರಕ್ರಿಯೆ ಮುಗಿಸಿದರು. ಅವರ ಬಳಿಯವರು ಬಂದ ಬಳಿಕ ನಾನು ಆಲ್ಕೋಹಾಲ್ ಕುಡಿದಿದ್ದೆನೋ ಅಥವಾ ಇಲ್ಲವೋ ಎಂಬುದನ್ನು ಪರೀಕ್ಷಿಸಿದರು. ಬ್ಲಡ್​ ಟೆಸ್ಟ್ ಕೂಡ ಮಾಡಲಾಯಿತು. ಅಲ್ಲಿಯೂ ಕುಡಿದಿಲ್ಲ ಎಂದು ವರದಿ ಬಂತು’ ಎಂದಿದ್ದಾರೆ ನಾಗಭೂಷಣ್.

‘ನಾನು ಓಡಿ ಹೋಗಿಲ್ಲ. ನನಗೆ ಆ ನೋವು ಗೊತ್ತಿದೆ. ನಾನು ಚಿಕ್ಕ ವಯಸ್ಸಿನಲ್ಲಿದ್ದಾಗ ನನ್ನ ತಂದೆಯನ್ನು ಅಪಘಾತದಲ್ಲಿ ಕಳೆದುಕೊಂಡಿದ್ದೆ. ಅಪಘಾತ ಮಾಡಿದವರು ಯಾರು ಎಂದು ಈಗಲೂ ಗೊತ್ತಿಲ್ಲ. ಇಲ್ಲಿ ಅಟ್​ಲೀಸ್ಟ್​ ನನಗೆ ಅವಕಾಶ ಇದೆ. ಅವರ ನೋವಲ್ಲಿ ನಾನು ಭಾಗಿ ಆಗುತ್ತಿದ್ದೇನೆ. ಎಲ್ಲರೂ ನಗಿಸೋಕೆ ನನಗೆ ಇಷ್ಟ. ಬೇರೆಯವರಿಗೆ ದುಃಖ ಕೊಡೋಕೆ ನನಗೆ ಇಷ್ಟವಿಲ್ಲ’ ಎಂದಿದ್ದಾರೆ ನಾಗಭೂಷಣ್.

ಇದನ್ನೂ ಓದಿ: ನಟ ನಾಗಭೂಷಣ್​ಗೆ ಹೆಚ್ಚಿದ ಸಂಕಷ್ಟ; ಮತ್ತೊಂದು ಕೇಸ್ ದಾಖಲು ಸಾಧ್ಯತೆ

‘ಅಪಘಾತವಾದ ನಂತರ ದಯವಿಟ್ಟು ಓಡೋಗಬೇಡಿ. ನೀವು ಜೀವ ಉಳಿಸಬೇಕು. ನನಗೆ ಯಾರ ದೂರವಾಣಿ ಕರೆಯನ್ನು ಸ್ವೀಕರಿಸೋಕೆ ಸಾಧ್ಯವಾಗಿಲ್ಲ. ಅವರ ಮನೆಯವರನ್ನು ಭೇಟಿ ಮಾಡೋಕೆ ಆಗಿಲ್ಲ. ನಾನು ಏನೆಂದು ಹೋಗಿ ಭೇಟಿ ಮಾಡಬೇಕೋ ಗೊತ್ತಿಲ್ಲ. ದಯವಿಟ್ಟು ನನಗೆ ಸಮಯ ಕೊಡಿ. ನಾನು ಎಲ್ಲಿಯೂ ಓಡಿ ಹೋಗಲ್ಲ. ಇದು ಹಿಟ್ ಆ್ಯಂಡ್ ರನ್ ಕೇಸಲ್ಲ. ಅಪಘಾತ  ಆಕಸ್ಮಿಕ ’ ಎಂದರು ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ