AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಂದೆಯನ್ನು ಅಪಘಾತದಲ್ಲಿ ಕಳೆದುಕೊಂಡವನು ನಾನು, ಆ ನೋವು ಗೊತ್ತಿದೆ’; ಸುದ್ದಿಗೋಷ್ಠಿಯಲ್ಲಿ ಭಾವುಕರಾದ ನಾಗಭೂಷಣ್

‘ನಾನು ಓಡಿ ಹೋಗಿಲ್ಲ. ನನಗೆ ಆ ನೋವು ಗೊತ್ತಿದೆ. ನಾನು ಚಿಕ್ಕ ವಯಸ್ಸಿನಲ್ಲಿದ್ದಾಗ ನನ್ನ ತಂದೆಯನ್ನು ಅಪಘಾತದಲ್ಲಿ ಕಳೆದುಕೊಂಡಿದ್ದೆ. ಅಪಘಾತ ಮಾಡಿದವರು ಯಾರು ಎಂದು ಈಗಲೂ ಗೊತ್ತಿಲ್ಲ’ ಎಂದಿದ್ದಾರೆ ನಾಗಭೂಷಣ್.

‘ತಂದೆಯನ್ನು ಅಪಘಾತದಲ್ಲಿ ಕಳೆದುಕೊಂಡವನು ನಾನು, ಆ ನೋವು ಗೊತ್ತಿದೆ’; ಸುದ್ದಿಗೋಷ್ಠಿಯಲ್ಲಿ ಭಾವುಕರಾದ ನಾಗಭೂಷಣ್
ನಾಗಭೂಷಣ್
ಮಂಗಳ ರಾಜಗೋಪಾಲ್​
| Edited By: |

Updated on: Oct 09, 2023 | 1:23 PM

Share

ಕೆಲ ದಿನಗಳ ಹಿಂದೆ ನಟ ನಾಗಭೂಷಣ್ (Nagabhushan) ಅವರ ಕಾರು ಅಪಘಾತಕ್ಕೆ ಒಳಗಾಗಿತ್ತು. ಈ ವೇಳೆ ಮಹಿಳೆ ಮೃತಪಟ್ಟು, ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದರು. ನಾಗಭೂಷಣ್ ಕಾರು ಕೂಡ ಸಾಕಷ್ಟು ಜಖಂಗೊಂಡಿತ್ತು. ಇತ್ತೀಚೆಗೆ ಅವರ ಕಾರಿನ ಪರಿಶೀಲನೆ ಕೂಡ ಮಾಡಲಾಗಿದೆ. ಈಗ ನಾಗಭೂಷಣ್ ಅವರು ಈ ಘಟನೆ ಬಗ್ಗೆ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

‘ಅಪಘಾತಕ್ಕೆ ಒಳಗಾದ ನಂತರ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿದೆ. ಪೊಲೀಸರಿಗೆ ನಾನೇ ಮಾಹಿತಿ ನೀಡಿದ್ದೆ. ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟರು. ಪೊಲೀಸರು ನನ್ನನ್ನು ಕರೆದುಕೊಂಡು ಹೋಗಿ ಪ್ರಕ್ರಿಯೆ ಮುಗಿಸಿದರು. ಅವರ ಬಳಿಯವರು ಬಂದ ಬಳಿಕ ನಾನು ಆಲ್ಕೋಹಾಲ್ ಕುಡಿದಿದ್ದೆನೋ ಅಥವಾ ಇಲ್ಲವೋ ಎಂಬುದನ್ನು ಪರೀಕ್ಷಿಸಿದರು. ಬ್ಲಡ್​ ಟೆಸ್ಟ್ ಕೂಡ ಮಾಡಲಾಯಿತು. ಅಲ್ಲಿಯೂ ಕುಡಿದಿಲ್ಲ ಎಂದು ವರದಿ ಬಂತು’ ಎಂದಿದ್ದಾರೆ ನಾಗಭೂಷಣ್.

‘ನಾನು ಓಡಿ ಹೋಗಿಲ್ಲ. ನನಗೆ ಆ ನೋವು ಗೊತ್ತಿದೆ. ನಾನು ಚಿಕ್ಕ ವಯಸ್ಸಿನಲ್ಲಿದ್ದಾಗ ನನ್ನ ತಂದೆಯನ್ನು ಅಪಘಾತದಲ್ಲಿ ಕಳೆದುಕೊಂಡಿದ್ದೆ. ಅಪಘಾತ ಮಾಡಿದವರು ಯಾರು ಎಂದು ಈಗಲೂ ಗೊತ್ತಿಲ್ಲ. ಇಲ್ಲಿ ಅಟ್​ಲೀಸ್ಟ್​ ನನಗೆ ಅವಕಾಶ ಇದೆ. ಅವರ ನೋವಲ್ಲಿ ನಾನು ಭಾಗಿ ಆಗುತ್ತಿದ್ದೇನೆ. ಎಲ್ಲರೂ ನಗಿಸೋಕೆ ನನಗೆ ಇಷ್ಟ. ಬೇರೆಯವರಿಗೆ ದುಃಖ ಕೊಡೋಕೆ ನನಗೆ ಇಷ್ಟವಿಲ್ಲ’ ಎಂದಿದ್ದಾರೆ ನಾಗಭೂಷಣ್.

ಇದನ್ನೂ ಓದಿ: ನಟ ನಾಗಭೂಷಣ್​ಗೆ ಹೆಚ್ಚಿದ ಸಂಕಷ್ಟ; ಮತ್ತೊಂದು ಕೇಸ್ ದಾಖಲು ಸಾಧ್ಯತೆ

‘ಅಪಘಾತವಾದ ನಂತರ ದಯವಿಟ್ಟು ಓಡೋಗಬೇಡಿ. ನೀವು ಜೀವ ಉಳಿಸಬೇಕು. ನನಗೆ ಯಾರ ದೂರವಾಣಿ ಕರೆಯನ್ನು ಸ್ವೀಕರಿಸೋಕೆ ಸಾಧ್ಯವಾಗಿಲ್ಲ. ಅವರ ಮನೆಯವರನ್ನು ಭೇಟಿ ಮಾಡೋಕೆ ಆಗಿಲ್ಲ. ನಾನು ಏನೆಂದು ಹೋಗಿ ಭೇಟಿ ಮಾಡಬೇಕೋ ಗೊತ್ತಿಲ್ಲ. ದಯವಿಟ್ಟು ನನಗೆ ಸಮಯ ಕೊಡಿ. ನಾನು ಎಲ್ಲಿಯೂ ಓಡಿ ಹೋಗಲ್ಲ. ಇದು ಹಿಟ್ ಆ್ಯಂಡ್ ರನ್ ಕೇಸಲ್ಲ. ಅಪಘಾತ  ಆಕಸ್ಮಿಕ ’ ಎಂದರು ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ