AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಂದೆಯನ್ನು ಅಪಘಾತದಲ್ಲಿ ಕಳೆದುಕೊಂಡವನು ನಾನು, ಆ ನೋವು ಗೊತ್ತಿದೆ’; ಸುದ್ದಿಗೋಷ್ಠಿಯಲ್ಲಿ ಭಾವುಕರಾದ ನಾಗಭೂಷಣ್

‘ನಾನು ಓಡಿ ಹೋಗಿಲ್ಲ. ನನಗೆ ಆ ನೋವು ಗೊತ್ತಿದೆ. ನಾನು ಚಿಕ್ಕ ವಯಸ್ಸಿನಲ್ಲಿದ್ದಾಗ ನನ್ನ ತಂದೆಯನ್ನು ಅಪಘಾತದಲ್ಲಿ ಕಳೆದುಕೊಂಡಿದ್ದೆ. ಅಪಘಾತ ಮಾಡಿದವರು ಯಾರು ಎಂದು ಈಗಲೂ ಗೊತ್ತಿಲ್ಲ’ ಎಂದಿದ್ದಾರೆ ನಾಗಭೂಷಣ್.

‘ತಂದೆಯನ್ನು ಅಪಘಾತದಲ್ಲಿ ಕಳೆದುಕೊಂಡವನು ನಾನು, ಆ ನೋವು ಗೊತ್ತಿದೆ’; ಸುದ್ದಿಗೋಷ್ಠಿಯಲ್ಲಿ ಭಾವುಕರಾದ ನಾಗಭೂಷಣ್
ನಾಗಭೂಷಣ್
ಮಂಗಳ ರಾಜಗೋಪಾಲ್​
| Edited By: |

Updated on: Oct 09, 2023 | 1:23 PM

Share

ಕೆಲ ದಿನಗಳ ಹಿಂದೆ ನಟ ನಾಗಭೂಷಣ್ (Nagabhushan) ಅವರ ಕಾರು ಅಪಘಾತಕ್ಕೆ ಒಳಗಾಗಿತ್ತು. ಈ ವೇಳೆ ಮಹಿಳೆ ಮೃತಪಟ್ಟು, ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದರು. ನಾಗಭೂಷಣ್ ಕಾರು ಕೂಡ ಸಾಕಷ್ಟು ಜಖಂಗೊಂಡಿತ್ತು. ಇತ್ತೀಚೆಗೆ ಅವರ ಕಾರಿನ ಪರಿಶೀಲನೆ ಕೂಡ ಮಾಡಲಾಗಿದೆ. ಈಗ ನಾಗಭೂಷಣ್ ಅವರು ಈ ಘಟನೆ ಬಗ್ಗೆ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

‘ಅಪಘಾತಕ್ಕೆ ಒಳಗಾದ ನಂತರ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿದೆ. ಪೊಲೀಸರಿಗೆ ನಾನೇ ಮಾಹಿತಿ ನೀಡಿದ್ದೆ. ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟರು. ಪೊಲೀಸರು ನನ್ನನ್ನು ಕರೆದುಕೊಂಡು ಹೋಗಿ ಪ್ರಕ್ರಿಯೆ ಮುಗಿಸಿದರು. ಅವರ ಬಳಿಯವರು ಬಂದ ಬಳಿಕ ನಾನು ಆಲ್ಕೋಹಾಲ್ ಕುಡಿದಿದ್ದೆನೋ ಅಥವಾ ಇಲ್ಲವೋ ಎಂಬುದನ್ನು ಪರೀಕ್ಷಿಸಿದರು. ಬ್ಲಡ್​ ಟೆಸ್ಟ್ ಕೂಡ ಮಾಡಲಾಯಿತು. ಅಲ್ಲಿಯೂ ಕುಡಿದಿಲ್ಲ ಎಂದು ವರದಿ ಬಂತು’ ಎಂದಿದ್ದಾರೆ ನಾಗಭೂಷಣ್.

‘ನಾನು ಓಡಿ ಹೋಗಿಲ್ಲ. ನನಗೆ ಆ ನೋವು ಗೊತ್ತಿದೆ. ನಾನು ಚಿಕ್ಕ ವಯಸ್ಸಿನಲ್ಲಿದ್ದಾಗ ನನ್ನ ತಂದೆಯನ್ನು ಅಪಘಾತದಲ್ಲಿ ಕಳೆದುಕೊಂಡಿದ್ದೆ. ಅಪಘಾತ ಮಾಡಿದವರು ಯಾರು ಎಂದು ಈಗಲೂ ಗೊತ್ತಿಲ್ಲ. ಇಲ್ಲಿ ಅಟ್​ಲೀಸ್ಟ್​ ನನಗೆ ಅವಕಾಶ ಇದೆ. ಅವರ ನೋವಲ್ಲಿ ನಾನು ಭಾಗಿ ಆಗುತ್ತಿದ್ದೇನೆ. ಎಲ್ಲರೂ ನಗಿಸೋಕೆ ನನಗೆ ಇಷ್ಟ. ಬೇರೆಯವರಿಗೆ ದುಃಖ ಕೊಡೋಕೆ ನನಗೆ ಇಷ್ಟವಿಲ್ಲ’ ಎಂದಿದ್ದಾರೆ ನಾಗಭೂಷಣ್.

ಇದನ್ನೂ ಓದಿ: ನಟ ನಾಗಭೂಷಣ್​ಗೆ ಹೆಚ್ಚಿದ ಸಂಕಷ್ಟ; ಮತ್ತೊಂದು ಕೇಸ್ ದಾಖಲು ಸಾಧ್ಯತೆ

‘ಅಪಘಾತವಾದ ನಂತರ ದಯವಿಟ್ಟು ಓಡೋಗಬೇಡಿ. ನೀವು ಜೀವ ಉಳಿಸಬೇಕು. ನನಗೆ ಯಾರ ದೂರವಾಣಿ ಕರೆಯನ್ನು ಸ್ವೀಕರಿಸೋಕೆ ಸಾಧ್ಯವಾಗಿಲ್ಲ. ಅವರ ಮನೆಯವರನ್ನು ಭೇಟಿ ಮಾಡೋಕೆ ಆಗಿಲ್ಲ. ನಾನು ಏನೆಂದು ಹೋಗಿ ಭೇಟಿ ಮಾಡಬೇಕೋ ಗೊತ್ತಿಲ್ಲ. ದಯವಿಟ್ಟು ನನಗೆ ಸಮಯ ಕೊಡಿ. ನಾನು ಎಲ್ಲಿಯೂ ಓಡಿ ಹೋಗಲ್ಲ. ಇದು ಹಿಟ್ ಆ್ಯಂಡ್ ರನ್ ಕೇಸಲ್ಲ. ಅಪಘಾತ  ಆಕಸ್ಮಿಕ ’ ಎಂದರು ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​