AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾರ್​​​ನಲ್ಲಿ ಕಿರಿಕ್; ನಟ ನಿರಂಜನ್​ ಮೇಲೆ ಬಿಯರ್ ಬಾಟಲ್​​ನಿಂದ ಹಲ್ಲೆ

ನಟ ನಿರಂಜನ್ ಮೇಲೆ ಬೆಂಗಳೂರಿನ ಬಾರ್‌ನಲ್ಲಿ ಅಪರಿಚಿತರಿಂದ ಬಿಯರ್ ಬಾಟಲಿಯಿಂದ ಹಲ್ಲೆ ನಡೆದಿದೆ. ಮಾರ್ಚ್ 28ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 'ಒಡೆಯ' ಸಿನಿಮಾದ ಮೂಲಕ ಖ್ಯಾತಿ ಗಳಿಸಿದ್ದ ನಿರಂಜನ್, ನಟ ಎಂದು ಗೊತ್ತಾಗುತ್ತಿದ್ದಂತೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ.

ಬಾರ್​​​ನಲ್ಲಿ ಕಿರಿಕ್; ನಟ ನಿರಂಜನ್​ ಮೇಲೆ ಬಿಯರ್ ಬಾಟಲ್​​ನಿಂದ ಹಲ್ಲೆ
ನಿರಂಜನ್
ರಾಚಪ್ಪಾಜಿ ನಾಯ್ಕ್
| Edited By: |

Updated on: Apr 06, 2026 | 10:53 AM

Share

ಕನ್ನಡ ಚಿತ್ರರಂಗದಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿರುವ ನಟ ನಿರಂಜನ್ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ. ಬೆಂಗಳೂರಿನ ಬಾರ್ ಒಂದರಲ್ಲಿ ನಡೆದ ಕಿರಿಕ್​ ಮಿತಿ ಮೀರಿದ್ದು, ಬಿಯರ್ ಬಾಟಲಿಯಿಂದ ನಟನ ಮೇಲೆ ಹಲ್ಲೆ ಮಾಡಲಾಗಿದೆ. ಘಟನೆ ಸಂಬಂಧ ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಮಾರ್ಚ್ 28ರಂದು ನಡೆದಿರುವ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ದರ್ಶನ್ ಅಭಿನಯದ ‘ಒಡೆಯ’ (2019) ಸಿನಿಮಾದಲ್ಲಿ ನಿರಂಜನ್ ನಟಿಸಿದ್ದರು. ಈ ಸಿನಿಮಾದಲ್ಲಿ ದರ್ಶನ್ ಸಹೋದರನ ಪಾತ್ರದಲ್ಲಿ ಅವರು ಕಾಣಿಸಿಕೊಂಡರು. ಈ ಪಾತ್ರ ಅವರ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್ ನೀಡಿತು. ಈಗ ಅವರು ವಿವಾದದ ಮೂಲಕ ಸುದ್ದಿ ಆಗಿದ್ದಾರೆ.

ಕೆಲಸದ ನಿಮಿತ್ತ ನಟ ಯಶಸ್ ಸೂರ್ಯ ನಿವಾಸಕ್ಕೆ ನಿರಂಜನ್ ತೆರಳಿದ್ದರು. ಭೇಟಿ ಬಳಿಕ ಮಂತ್ರಿ ಅಲೈಯನ್ಸ್ ಬಳಿಯ ಬಾರ್​ಗೆ ನಿರಂಜನ್ ಬಂದಿದ್ದರು. ನೀರು‌ ಕುಡಿಯಲೆಂದು ಬಾರ್​ಗೆ ಬಂದಿದ್ದಾಗಿ ನಿರಂಜನ್ ಹೇಳಿಕೊಂಡಿದ್ದಾರೆ. ಈ ವೇಳೆ ಬಾರ್​ ಅಲ್ಲಿ ಇದ್ದ ವ್ಯಕ್ತಿಯೋರ್ವ ನಿರಂಜನ್​ ತಳ್ಳಿದ್ದಕ್ಕೆ ಗಲಾಟೆ ಶುರುವಾಗಿದೆ.

ಇದನ್ನೂ ಓದಿ: ಇದು ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ನಿರ್ದೇಶಕರ ಸ್ಪಷ್ಟನೆ

ಈ ವೇಳೆ ನಿರಂಜನ್ ನಟ ಎಂಬ ವಿಷಯ ಅಪರಿಚಿತ ವ್ಯಕ್ತಿಗೆ ಗೊತ್ತಾಗಿದೆ. ‘ನೀನು ನಟನಾದರೆ ನನಗೇನು’ ಎಂದು ಅಪರಿಚಿತ ವ್ಯಕ್ತಿ ಬೈದಿದ್ದ. ಈ ವಿಷಯದ ಬಗ್ಗೆ ಬಾರ್ ಮಾಲೀಕರ ಜೊತೆ ಮಾತನಾಡುವಾಗ ಬಂದ ನಾಲ್ವರು ನಿರಂಜನ್​ ಜೊತೆ ಮತ್ತೆ ಕಿರಿಕ್ ಮಾಡಿಕೊಂಡಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಬಿಯರ್​ ಬಾಟಲಿಯಿಂದ ನಟನ ತಲೆಗೆ ಹೊಡೆದು ಹಲ್ಲೆ ಮಾಡಿದ್ದಾರೆ. ಘಟನೆ ಸಂಬಂಧ ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. 2017ರ ‘ಜಲ್ಸಾ’ (2017) ಚಿತ್ರದ ಮೂಲಕ ನಿರಂಜನ್ ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ಕೆಲ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ‘ಒಡೆಯ’ ಚಿತ್ರದ ಪಾತ್ರಕ್ಕೆ ಮೆಚ್ಚುಗೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ