AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾರ್​​​ನಲ್ಲಿ ಕಿರಿಕ್; ನಟ ನಿರಂಜನ್​ ಮೇಲೆ ಬಿಯರ್ ಬಾಟಲ್​​ನಿಂದ ಹಲ್ಲೆ

ನಟ ನಿರಂಜನ್ ಮೇಲೆ ಬೆಂಗಳೂರಿನ ಬಾರ್‌ನಲ್ಲಿ ಅಪರಿಚಿತರಿಂದ ಬಿಯರ್ ಬಾಟಲಿಯಿಂದ ಹಲ್ಲೆ ನಡೆದಿದೆ. ಮಾರ್ಚ್ 28ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 'ಒಡೆಯ' ಸಿನಿಮಾದ ಮೂಲಕ ಖ್ಯಾತಿ ಗಳಿಸಿದ್ದ ನಿರಂಜನ್, ನಟ ಎಂದು ಗೊತ್ತಾಗುತ್ತಿದ್ದಂತೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ.

ಬಾರ್​​​ನಲ್ಲಿ ಕಿರಿಕ್; ನಟ ನಿರಂಜನ್​ ಮೇಲೆ ಬಿಯರ್ ಬಾಟಲ್​​ನಿಂದ ಹಲ್ಲೆ
ನಿರಂಜನ್
ರಾಚಪ್ಪಾಜಿ ನಾಯ್ಕ್
| Edited By: |

Updated on: Apr 06, 2026 | 10:53 AM

Share

ಕನ್ನಡ ಚಿತ್ರರಂಗದಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿರುವ ನಟ ನಿರಂಜನ್ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ. ಬೆಂಗಳೂರಿನ ಬಾರ್ ಒಂದರಲ್ಲಿ ನಡೆದ ಕಿರಿಕ್​ ಮಿತಿ ಮೀರಿದ್ದು, ಬಿಯರ್ ಬಾಟಲಿಯಿಂದ ನಟನ ಮೇಲೆ ಹಲ್ಲೆ ಮಾಡಲಾಗಿದೆ. ಘಟನೆ ಸಂಬಂಧ ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಮಾರ್ಚ್ 28ರಂದು ನಡೆದಿರುವ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ದರ್ಶನ್ ಅಭಿನಯದ ‘ಒಡೆಯ’ (2019) ಸಿನಿಮಾದಲ್ಲಿ ನಿರಂಜನ್ ನಟಿಸಿದ್ದರು. ಈ ಸಿನಿಮಾದಲ್ಲಿ ದರ್ಶನ್ ಸಹೋದರನ ಪಾತ್ರದಲ್ಲಿ ಅವರು ಕಾಣಿಸಿಕೊಂಡರು. ಈ ಪಾತ್ರ ಅವರ ವೃತ್ತಿ ಜೀವನಕ್ಕೆ ಸಾಕಷ್ಟು ಮೈಲೇಜ್ ನೀಡಿತು. ಈಗ ಅವರು ವಿವಾದದ ಮೂಲಕ ಸುದ್ದಿ ಆಗಿದ್ದಾರೆ.

ಕೆಲಸದ ನಿಮಿತ್ತ ನಟ ಯಶಸ್ ಸೂರ್ಯ ನಿವಾಸಕ್ಕೆ ನಿರಂಜನ್ ತೆರಳಿದ್ದರು. ಭೇಟಿ ಬಳಿಕ ಮಂತ್ರಿ ಅಲೈಯನ್ಸ್ ಬಳಿಯ ಬಾರ್​ಗೆ ನಿರಂಜನ್ ಬಂದಿದ್ದರು. ನೀರು‌ ಕುಡಿಯಲೆಂದು ಬಾರ್​ಗೆ ಬಂದಿದ್ದಾಗಿ ನಿರಂಜನ್ ಹೇಳಿಕೊಂಡಿದ್ದಾರೆ. ಈ ವೇಳೆ ಬಾರ್​ ಅಲ್ಲಿ ಇದ್ದ ವ್ಯಕ್ತಿಯೋರ್ವ ನಿರಂಜನ್​ ತಳ್ಳಿದ್ದಕ್ಕೆ ಗಲಾಟೆ ಶುರುವಾಗಿದೆ.

ಇದನ್ನೂ ಓದಿ: ಇದು ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ನಿರ್ದೇಶಕರ ಸ್ಪಷ್ಟನೆ

ಈ ವೇಳೆ ನಿರಂಜನ್ ನಟ ಎಂಬ ವಿಷಯ ಅಪರಿಚಿತ ವ್ಯಕ್ತಿಗೆ ಗೊತ್ತಾಗಿದೆ. ‘ನೀನು ನಟನಾದರೆ ನನಗೇನು’ ಎಂದು ಅಪರಿಚಿತ ವ್ಯಕ್ತಿ ಬೈದಿದ್ದ. ಈ ವಿಷಯದ ಬಗ್ಗೆ ಬಾರ್ ಮಾಲೀಕರ ಜೊತೆ ಮಾತನಾಡುವಾಗ ಬಂದ ನಾಲ್ವರು ನಿರಂಜನ್​ ಜೊತೆ ಮತ್ತೆ ಕಿರಿಕ್ ಮಾಡಿಕೊಂಡಿದ್ದಾರೆ. ಈ ವೇಳೆ ದುಷ್ಕರ್ಮಿಗಳು ಬಿಯರ್​ ಬಾಟಲಿಯಿಂದ ನಟನ ತಲೆಗೆ ಹೊಡೆದು ಹಲ್ಲೆ ಮಾಡಿದ್ದಾರೆ. ಘಟನೆ ಸಂಬಂಧ ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. 2017ರ ‘ಜಲ್ಸಾ’ (2017) ಚಿತ್ರದ ಮೂಲಕ ನಿರಂಜನ್ ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ಕೆಲ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ‘ಒಡೆಯ’ ಚಿತ್ರದ ಪಾತ್ರಕ್ಕೆ ಮೆಚ್ಚುಗೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us