AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಮನೆಯಲ್ಲಿ ನೆನಪಿನ ಪುಟ ತೆರೆದ ಜಗ್ಗೇಶ್; ಫೋಟೋ ಹಿಂದಿದೆ ಬದುಕಿನ ಕಥೆ

ನಟ ಜಗ್ಗೇಶ್ ಅವರು ಚಿತ್ರರಂಗದಲ್ಲಿ ಮಾಡಿದ ಸಾಧನೆ ಅಪಾರ. ಎಲ್ಲ ಬಗೆಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಸಾಮಾನ್ಯ ಕುಟುಂಬದಿಂದ ಬಂದ ಜಗ್ಗೇಶ್ ಅವರಿಗೆ ಚಿತ್ರರಂಗದಲ್ಲಿ ನೆಲೆ ಕಂಡುಕೊಳ್ಳಬೇಕು ಎಂಬ ಹಂಬಲ ಇತ್ತು. ಅದಕ್ಕೆ ಎದುರಾದ ಸವಾಲುಗಳು ಹಲವು. ಅವುಗಳ ಬಗ್ಗೆ ಜಗ್ಗೇಶ್ ಈಗ ಪೋಸ್ಟ್ ಮಾಡಿದ್ದಾರೆ.

ದೆಹಲಿಯ ಮನೆಯಲ್ಲಿ ನೆನಪಿನ ಪುಟ ತೆರೆದ ಜಗ್ಗೇಶ್; ಫೋಟೋ ಹಿಂದಿದೆ ಬದುಕಿನ ಕಥೆ
ಜಗ್ಗೇಶ್​ ಹಂಚಿಕೊಂಡ ಫೋಟೋ
ಮದನ್​ ಕುಮಾರ್​
|

Updated on:Dec 10, 2024 | 2:51 PM

Share

‘ನವರಸ ನಾಯಕ’ ಜಗ್ಗೇಶ್ ಅವರು ಸೋಶಿಯಲ್ ಮೀಡಿಯಾ ಬಳಕೆಯಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ. ತಮ್ಮ ಅಭಿಮಾನಿಗಳಿಗೆ ಈ ಮೂಲಕ ಅವರು ಅನೇಕ ವಿಚಾರಗಳನ್ನು ತಿಳಿಸುತ್ತಾರೆ. ಈಗ ಜಗ್ಗೇಶ್ ಅವರು ಒಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಆ ಮೂಲಕ ಅವರು ನೆನಪಿನ ಪುಟ ತೆರೆದಿದ್ದಾರೆ. ರಾಜಕೀಯದ ಕೆಲಸಗಳ ನಿಮಿತ್ತ ದೆಹಲಿಗೆ ತೆರಳಿರುವ ಜಗ್ಗೇಶ್​, ಅಲ್ಲಿನ ನಿವಾಸದಲ್ಲಿ ಕುಳಿತು ತಮ್ಮ ಹಳೆಯ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಅದಕ್ಕೆ ಪೂರಕವಾಗಿ ಈ ಫೋಟೋವನ್ನು ಹಂಚಿಕೊಂಡಿದ್ದಾರೆ. ಅವರ ಈ ಬರಹ ಅನೇಕರಿಗೆ ಸ್ಫೂರ್ತಿ ನೀಡುವಂತಿದೆ.

‘1987, ಆಗ 24 ವರ್ಷ ಪ್ರಾಯ. 18 ವರ್ಷದ ಮಡದಿ ಪರಿಮಳ, 6 ತಿಂಗಳ ಮಗು ಗುರುರಾಜ. 15×10 ಮನೆ. 500 ರೂಪಾಯಿ ಬಾಡಿಗೆ. ಮನೆಯ ಕರ್ಚು 250 ರೂಪಾಯಿ. ಧರಿಸಲು ಎರಡು ಜೀನ್ಸ್ ಪ್ಯಾಂಟ್, ನಾಲ್ಕು ಶರ್ಟ್. ಇಂಥ ಸ್ಥಿತಿಯಲ್ಲಿ ಗೆದ್ದೇ ಗೆಲ್ಲುತ್ತೇನೆ ಒಂದು ದಿನ ಎನ್ನುವ ಛಲ. ಮನಸ್ಸನ್ನು ರೇಸು ಕುದುರೆಯ ಹಾಗೆ ತಯಾರು ಮಾಡಿ, ಕೆಲಸಕ್ಕೆ ಬಾರದ ಯಾವ ಚಿಂತೆಯನ್ನೂ ಮಾಡದೇ, ಸ್ನಾನ-ಪೂಜೆ ಮುಗಿಸಿ, ಇದ್ದಿದ್ದನ್ನು ತಿಂದುಕೊಂಡು ಕೆಲಸ ಹುಡುಕಿ ಗಾಂಧಿನಗರ ಅಲೆಯುವ ಕಾಯಕ.’

‘ಅಂದಿನ ಕೆಲವು ನಿರ್ದೇಶಕರು ಹಾಗೂ ನಿರ್ಮಾಪಕರಿಗೆ ನನ್ನ ಮೇಲೆ ಕರುಣೆಯಿತ್ತು. ಅನ್ನ ಹಾಕಿ ಉತ್ಸಾಹ ತುಂಬಿದರು. ಅನೇಕರು ಅಪಮಾನ ಮಾಡಿ, ಸಿನಿಮಾ ಬಿಟ್ಟು ಕೂಲಿ ಮಾಡು ಎಂದು ಅಟ್ಟುತ್ತಿದ್ದರು! ಆಗ ನನಗೆ ಒಬ್ಬ ಗುರು ಸಿಕ್ಕರು. ಅವರೇ ಕಲಿಯುಗ ಕಲ್ಪತರು ರಾಯರು. ಅವರ ಹಾರೈಕೆಯಿಂದ ನಾನು ಹೇಗೆ ಬೆಳೆದೆ ಎಂಬ ಅರಿವು ಇಲ್ಲ.’

ಇದನ್ನೂ ಓದಿ: ರಾಯರು ಸನ್ಯಾಸ ಸ್ವೀಕರಿಸಿದ ಜಾಗ ತೋರಿಸಿದ ಜಗ್ಗೇಶ್

‘ಮನಸ್ಸಿನ ಬೇಡಿಕೆ ಹೇಗೆ ಈಡೇರಿತು ಅರಿವಿಲ್ಲ. ಅಂದಿನ 24 ವರ್ಷದವನು, ಇಂದು 62 ವರ್ಷವಾಗಿದೆ. ಶ್ರೀಕೃಷ್ಣ ಎಲ್ಲ ಮನುಕುಲಕ್ಕೆ ಒಂದು ಮಾತು ಕೊಟ್ಟಿದ್ದಾನೆ. ಶ್ರದ್ಧಾವಾನ್ ಲಭತೆ ಜ್ಞಾನಂ. ಅರ್ಥಾತ್ ಸುಂದರವಾಗಿ ಚಿಂತಿಸಿ ಬಾಳು, ಮಿಕ್ಕದ್ದು ನನಗೆ ಬಿಡು ಎಂಬುದು ಅರ್ಥ. ಜ್ಞಾನ ಕಲಿಸಿದ ಅಮ್ಮ, ಬದುಕು ಕಲಿಸಿದ ಅಪ್ಪ, ನನ್ನ ಸುಖ-ದುಃಖಕ್ಕೆ ಜೊತೆಗಾತಿಯಾದ ಪರಿಮಳಾ. ಅನ್ನ ನೀಡಿದ ಚಿತ್ರರಂಗಕ್ಕೆ ಶರಣು. ಮಿತ್ರರೇ, ಶುದ್ಧರಾಗಿ ಶ್ರಮಿಸಿ ಗೆದ್ದ ಮನುಷ್ಯರಾಗಿ. ನನ್ನ ಬದುಕಿನ ನೆನಪಿನ ಅಂಗಳ. ದೆಹಲಿಯ ಮನೆಯಲ್ಲಿ ಒಬ್ಬನೇ ಕುಳಿತಾಗ ನೋಡಿ ಮರೆತ. ಚಿತ್ರದಂತೆ ನೆನಪಾಯಿತು ನನ್ನ ಬದುಕು. ಶುಭ ಮಂಗಳವಾರ’ ಎಂದು ಜಗ್ಗೇಶ್ ಅವರು ಬರಹ ಪೂರ್ಣಗೊಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:50 pm, Tue, 10 December 24

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?