AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara Movie: ‘ಕಾಂತಾರ ಚಿತ್ರದ ಕ್ಲೈಮ್ಯಾಕ್ಸ್ ಅದ್ಭುತ’; ರಿಷಬ್ ಸಿನಿಮಾಗೆ ಪ್ರಭಾಸ್​ ಹೊಗಳಿಕೆ

‘ಕೆಜಿಎಫ್’, ‘ಕೆಜಿಎಫ್​ 2’, ‘ಯುವರತ್ನ’ ಮುಂತಾದ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ‘ಹೊಂಬಾಳೆ ಫಿಲ್ಮ್ಸ್​​’ನ ವಿಜಯ್ ಕಿರಗಂದೂರು ಅವರು ‘ಕಾಂತಾರ’ ಚಿತ್ರವನ್ನು ನಿರ್ಮಿಸಿದ್ದಾರೆ.

Kantara Movie: ‘ಕಾಂತಾರ ಚಿತ್ರದ ಕ್ಲೈಮ್ಯಾಕ್ಸ್ ಅದ್ಭುತ’; ರಿಷಬ್ ಸಿನಿಮಾಗೆ ಪ್ರಭಾಸ್​ ಹೊಗಳಿಕೆ
ರಿಷಬ್-ಪ್ರಭಾಸ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Oct 01, 2022 | 2:40 PM

ಟಾಲಿವುಡ್ (Tollywood News) ನಟ ಪ್ರಭಾಸ್ ಅವರು ಹಲವು ಸಿನಿಮಾಗಳಿಗೆ ಬೆಂಬಲ ಸೂಚಿಸಿದ ಉದಾಹರಣೆ ಇದೆ. ‘ಕೆಜಿಎಫ್ 2’ (KGF chapter 2) ಚಿತ್ರವನ್ನು ನೋಡಿ ಅವರು ಮೆಚ್ಚಿಕೊಂಡಿದ್ದರು. ಈಗ ರಿಷಬ್​ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಚಿತ್ರವನ್ನು ಪ್ರಭಾಸ್ ಹೊಗಳಿದ್ದಾರೆ. ‘ಕಾಂತಾರ’ ಚಿತ್ರದ ಕ್ಲೈಮ್ಯಾಕ್ಸ್ ಬಗ್ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರಭಾಸ್​​ಗೂ ಸಿನಿಮಾದ ಕ್ಲೈಮ್ಯಾಕ್ಸ್ ಹಿಡಿಸಿದೆ. ಈ ಬಗ್ಗೆ ಇನ್​​ಸ್ಟಾಗ್ರಾಮ್​​ನಲ್ಲಿ ಬರೆದುಕೊಂಡಿದ್ದಾರೆ. ಇದರಿಂದ ಸಿನಿಮಾಗೆ ಮತ್ತಷ್ಟು ಬೂಸ್ಟ್ ಸಿಕ್ಕಂತೆ ಆಗಿದೆ.

ರಿಷಬ್ ಶೆಟ್ಟಿ ನಟನೆ ಹಾಗೂ ನಿರ್ದೇಶನ ಎರಡರಲ್ಲೂ ಭೇಷ್ ಎನಿಸಿಕೊಂಡಿದ್ದಾರೆ. ಅವರ ನಿರ್ದೇಶನದ ‘ಕಿರಿಕ್ ಪಾರ್ಟಿ’, ‘ಸ.ಹಿ.ಪ್ರಾ. ಶಾಲೆ ಕಾಸರಗೋಡು’ ಚಿತ್ರಗಳು ಸೂಪರ್ ಹಿಟ್ ಆಗಿವೆ. ಈಗ ಆ ಸಾಲಿಗೆ ‘ಕಾಂತಾರ’ ಕೂಡ ಸೇರ್ಪಡೆ ಆಗಿದೆ. ಓರ್ವ ನಟನಾಗಿಯೂ ರಿಷಬ್ ಸಾಕಷ್ಟು ಇಷ್ಟವಾಗಿದ್ದಾರೆ. ಪ್ರಭಾಸ್​ಗೂ ಈ ಚಿತ್ರ ರುಚಿಸಿದೆ.

ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಪ್ರಭಾಸ್, ‘ಕಾಂತಾರ ಚಿತ್ರ ನೋಡಿ ಬಹಳ ಎಂಜಾಯ್ ಮಾಡಿದೆ. ಅದರಲ್ಲೂ ಕ್ಲೈಮ್ಯಾಕ್ಸ್ ಅದ್ಭುತವಾಗಿತ್ತು. ಇಂಥದ್ದೊಂದು ಚಿತ್ರವನ್ನು ಕಟ್ಟಿಕೊಟ್ಟ ಚಿತ್ರತಂಡಕ್ಕೆ ಶುಭವಾಗಲಿ ಮತ್ತು ಚಿತ್ರ ದೊಡ್ಡ ಯಶಸ್ಸು ಗಳಿಸಲಿ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
Kantara: ರಿಷಬ್​ ಶೆಟ್ಟಿ ಕಂಬಳದ ಕೋಣ ಓಡಿಸುವುದು ಕಲಿತಿದ್ದು ಹೇಗೆ? ಇಲ್ಲಿದೆ ಮೇಕಿಂಗ್​ ವಿಡಿಯೋ
Image
Kantara: ‘ಕಾಂತಾರ’ ಚಿತ್ರಕ್ಕೆ ಪುನೀತ್​ ಹೀರೋ ಆಗ್ಬೇಕಿತ್ತು; ಆ ಸ್ಥಾನಕ್ಕೆ ರಿಷಬ್ ಶೆಟ್ಟಿ ಬಂದಿದ್ದು ಹೇಗೆ? ಇಲ್ಲಿದೆ ಉತ್ತರ
Image
‘ಸಿಂಗಾರ ಸಿರಿಯೆ..’ ಹಾಡಿಗೆ ತಲೆದೂಗಿದ ಪ್ರೇಕ್ಷಕರು; ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಚಿತ್ರಕ್ಕೆ ಸಿಕ್ತು ಮೈಲೇಜ್
Image
Rishab Shetty: ರಿಷಬ್​ ಶೆಟ್ಟಿ-ಪ್ರಗತಿ ಫ್ಯಾಮಿಲಿಯ ಸುಂದರ ಫೋಟೋ ಗ್ಯಾಲರಿ; ರಣ್ವಿತ್​ ಕ್ಯೂಟ್​ ನಗುವಿಗೆ ಎಲ್ಲರೂ ಫಿದಾ

‘ಕೆಜಿಎಫ್’, ‘ಕೆಜಿಎಫ್​ 2’, ‘ಯುವರತ್ನ’ ಮುಂತಾದ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ‘ಹೊಂಬಾಳೆ ಫಿಲ್ಮ್ಸ್​​’ನ ವಿಜಯ್ ಕಿರಗಂದೂರು ಅವರು ‘ಕಾಂತಾರ’ ಚಿತ್ರವನ್ನು ನಿರ್ಮಿಸಿದ್ದಾರೆ. ಸಿನಿಮಾ ಅದ್ದೂರಿಯಾಗಿ ಮೂಡಿ ಬರಬೇಕು ಎಂಬ ಕಾರಣಕ್ಕೆ ಅವರು ಎಲ್ಲಿಯೂ ರಾಜಿ ಮಾಡಿಕೊಂಡಿಲ್ಲ. ಹೀಗಾಗಿ ಸಿನಿಮಾ ಅದ್ದೂರಿಯಾಗಿ ಮೂಡಿ ಬಂದಿದೆ. ಇದೇ ಬ್ಯಾನರ್​ನ ಅಡಿಯಲ್ಲಿ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಕೂಡ ನಿರ್ಮಾಣ ಆಗುತ್ತಿದೆ. ಈ ಕಾರಣಕ್ಕೆ ಪ್ರಭಾಸ್​​ಗೆ ವಿಶೇಷ ಶೋ ಏರ್ಪಡಿಸಲಾಗಿತ್ತು ಎನ್ನಲಾಗಿದೆ. ‘ಸಲಾರ್​’ಗೆ ಪ್ರಶಾಂತ್ ನೀಲ್ ಅವರು ನಿರ್ದೇಶನ ಮಾಡುತ್ತಿದ್ದಾರೆ.

ಪ್ರಭಾಸ್ ಮಾತ್ರವಲ್ಲದೆ ಕನ್ನಡದ ಅನೇಕರು ‘ಕಾಂತಾರ’ ಚಿತ್ರವನ್ನು ಹೊಗಳಿದ್ದಾರೆ. ನಟಿ ರಮ್ಯಾ, ರಕ್ಷಿತ್ ಶೆಟ್ಟಿ, ಸೇರಿದಂತೆ ಹಲವಾರು ಸೆಲೆಬ್ರಿಟಿಗಳು ಈ ಚಿತ್ರದ ಪ್ರೀಮಿಯರ್ ವೀಕ್ಷಿಸಿದ್ದು, ಮೆಚ್ಚುಗೆ ಸೂಚಿಸಿದ್ದಾರೆ. ಕರಾವಳಿ ಭಾಗದ ವಿಶಿಷ್ಟ ಆಚರಣೆ, ಸಂಸ್ಕೃತಿಗಳನ್ನು ಈ ಸಿನಿಮಾ ಒಳಗೊಂಡಿದೆ.  ಮನುಷ್ಯ ಹಾಗೂ ಪ್ರಕೃತಿಯ ನಡುವಿನ ಸಂಘರ್ಷದ ಕಥೆ ಕೂಡ ಈ ಸಿನಿಮಾದಲ್ಲಿದೆ.

ಇದನ್ನೂ ಓದಿ: ‘ಅಲ್ಟಿಮೇಟ್​, ಸೂಪರ್, ಬೆಂಕಿ ಫಿಲ್ಮ್​’; ‘ಕಾಂತಾರ’ ನೋಡಿದವರ ಫಸ್ಟ್ ರಿಯಾಕ್ಷನ್

ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.

Published On - 2:33 pm, Sat, 1 October 22

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ