AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಧರ್ಮದಲ್ಲೇ 5 ಮದುವೆ ಮಾಡಿಕೊಳ್ಳಿ; ಹಿಂದೂ ಹುಡುಗಿ ನಿಮಗೆ ಯಾಕೆ’: ಪ್ರಥಮ್​ ಆಕ್ರೋಶ

ನಟ ಪ್ರಥಮ್​ ಅವರು ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿ ನೇಹಾ ಹಿರೇಮಠ್​ ಅವರ ಮನೆಗೆ ಭೇಟಿ ನೀಡಿದ್ದಾರೆ. ಪಾಗಲ್​ ಪ್ರೇಮಿಯಿಂದ ಕೊಲೆಯಾದ ಯುವತಿಯ ತಂದೆ-ತಾಯಿಗೆ ಅವರು ಸಾಂತ್ವನ ಹೇಳಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಪ್ರಥಮ್​ ಅವರು ತೀವ್ರ ಆಕ್ರೋಶ ವ್ಯಕ್ತಡಿಸಿದ್ದಾರೆ. ಅಂತರ್​ ಧರ್ಮೀಯ ವಿವಾಹಕ್ಕೆ ಕಠಿಣ ಕಾನೂನು ಬೇಕು ಎಂದು ಅವರು ಹೇಳಿದ್ದಾರೆ.

‘ನಿಮ್ಮ ಧರ್ಮದಲ್ಲೇ 5 ಮದುವೆ ಮಾಡಿಕೊಳ್ಳಿ; ಹಿಂದೂ ಹುಡುಗಿ ನಿಮಗೆ ಯಾಕೆ’: ಪ್ರಥಮ್​ ಆಕ್ರೋಶ
ಪ್ರಥಮ್​, ನೇಹಾ ಹಿರೇಮಠ್​
ಮದನ್​ ಕುಮಾರ್​
|

Updated on: Apr 21, 2024 | 3:36 PM

Share

ಹುಬ್ಬಳಿಯ ಯುವತಿ ನೇಹಾ ಹಿರೇಮಠ್ (Neha Hiremath) ನಿಧನಕ್ಕೆ ಅನೇಕರು ಪ್ರತಿಕ್ರಿಯಿಸುತ್ತಿದ್ದಾರೆ. ಕನ್ನಡ ಚಿತ್ರರಂಗದ ನಟ ಪ್ರಥಮ್​ ಅವರು ನೇಹಾ ತಂದೆ-ತಾಯಿಯನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಕಲಾವಿದರು ಎಲೆಕ್ಷನ್​ ಪ್ರಚಾರಕ್ಕೆ ಬರುತ್ತಾರೆ. ಇಂಥ ಘಟನೆ ಆದಾಗ ಯಾರೂ ಬರಲ್ಲ. ಅಂಥ ಕಲಾವಿದರನ್ನು ತಲೆ ಮೇಲೆ ಇಟ್ಟುಕೊಂಡು ಮೆರೆಸಬೇಡಿ. ನೇಹಾ ಹಿರೇಮಠ್​ ನಿಧನದಿಂದ (Neha Hiremath Death) ಚಿತ್ರರಂಗದ ಎಲ್ಲರಿಗೂ ನೋವಾಗಿದೆ. ಪ್ರಹ್ಲಾದ್​ ಜೋಶಿ ಅವರೇ ನೀವು 10 ವರ್ಷದಿಂದ ಅಧಿಕಾರದಲ್ಲಿ ಇದ್ದೀರಿ. ಅಂತರ್​ ಧರ್ಮೀಯ ವಿವಾಹದ ಬಗ್ಗೆ ಕಠಿಣ ನಿಯಮ ತೆಗೆದುಕೊಂಡು ಬನ್ನಿ’ ಎಂದು ಪ್ರಥಮ್​ (Pratham) ಹೇಳಿದ್ದಾರೆ.

‘ಹಿಂದೂ ಧರ್ಮದ ಹುಡುಗಿಯರನ್ನು ಬೇರೆ ಧರ್ಮದವರು ಮದುವೆ ಆಗಲೇಬಾರದು. ಯಾಕೆ ಆಗಬೇಕು? ಹಿಂದೂ ಹುಡುಗಿಯರ ಜೊತೆ ನೀವು ಲವ್​ ಯಾಕೆ ಮಾಡುತ್ತೀರಿ? ಅದರಿಂದಲೇ ತಾನೆ ಇಷ್ಟೆಲ್ಲ ಕ್ರೌರ್ಯ ಆಗುತ್ತಿರುವುದು. ನಿಮ್ಮ ಪಾಡಿಗೆ, ನಿಮ್ಮ ಸಮುದಾಯದವರನ್ನೇ ಮದುವೆ ಆಗಿ. ಹಿಂದೂ ಹುಡುಗಿಯರ ಜೊತೆ ನಿಮಗೆ ಏನು ಕೆಲಸ? ನಿಮ್ಮ ಸಮುದಾಯದಲ್ಲೇ ಬೇಕಾದರೆ ಒಂದಲ್ಲ ಎರಡಲ್ಲ 5 ಮದುವೆ ಮಾಡಿಕೊಳ್ಳಿ. ನಿಮ್ಮನ್ನು ಯಾರು ಕೇಳ್ತಾರೆ? ಇನ್ನೊಮ್ಮೆ ಹಿಂದೂಗಳ ತಂಟೆಗೆ ಬರಬೇಡಿ’ ಎಂದು ನಟ ಪ್ರಥಮ್​ ಹೇಳಿದ್ದಾರೆ.

ಇದನ್ನೂ ಓದಿ: ‘ನೇಹಾ ಹಿರೇಮಠ್ ಹತ್ಯೆ ಅತ್ಯಂತ ಹೀನ ಕೃತ್ಯ’: ಧ್ರುವ ಸರ್ಜಾ ಆಕ್ರೋಶ

‘ನನಗೆ ತುಂಬ ನೋವಾಯಿತು. ಅದಕ್ಕಾಗಿಯೇ ಬೆಂಗಳೂರಿನಿಂದ ಇಲ್ಲಿಗೆ ಬಂದಿದ್ದೇನೆ. ಕಡೆಗಣಿಸಿದರೆ ಪ್ರಾಣ ತೆಗೆದುಬಿಡೋದಾ? ನನ್ನ ಮಗ ಅಂಥವನಲ್ಲ ಎಂದು ಅವರ ತಾಯಿ ಹೇಳ್ತಾರೆ. ವೀರಪ್ಪ ನಾಯಕ ಸಿನಿಮಾದ ಕಥೆ ರೀತಿ ಹೇಳಿಕೆ ನೀಡ್ತಾರೆ. 20 ವರ್ಷದ ಹಿಂದೆ ಇವರು ಸಿಕ್ಕಿದ್ದಿದ್ರೆ ನಿರ್ದೇಶಕರು ಶ್ರುತಿ ಬದಲಿಗೆ ಇವರನ್ನೇ ಆಯ್ಕೆ ಮಾಡುತ್ತಿದ್ದರು’ ಎಂದಿದ್ದಾರೆ ಪ್ರಥಮ್​.

ಇದನ್ನೂ ಓದಿ: ನೇಹಾ ಹಿರೇಮಠ್ ಸಾವಿಗೆ ನ್ಯಾಯ ಕೇಳಿದ ಸೆಲೆಬ್ರಿಟಿಗಳು; ಏನಂದ್ರು ದರ್ಶನ್​?

‘ಈಗ ಯಾರೋ ಬಂದು ಸಮಾಧಾನ ಹೇಳಿದರು. ಸಮಾಧಾನ ಹೇಳುವುದೇ ಹೌದಾದರೆ ಅವರ ಸಮುದಾಯದ ಯಾರೂ ಕೂಡ ಈ ಕೇಸ್​ ತೆಗೆದುಕೊಳ್ಳಬಾರದು ಅಂತ ಹೇಳಿ. ಮುಖಂಡರು ಹೇಳಿಕೆಗಳನ್ನು ಕೊಡುವಾಗ ನೋವು ಮಾಡಬೇಡಿ. ಇದರ ಜೊತೆ ಪಾಲಕರಿಗೆ ಒಂದು ಕಿವಿಮಾತು. ನಿಮ್ಮ ಮಕ್ಕಳು ಯಾರ ಜೊತೆ ಇರುತ್ತಾರೆ, ಎಲ್ಲಿಗೆ ಹೋಗುತ್ತಾರೆ ಎಂಬುದನ್ನು ಗಮನಿಸಿ. ಅವನು 9 ಸಲ ಚುಚ್ಚಿದ್ದಾನೆ ಎಂದರೆ ಅವನ ಮನಸ್ಥಿತಿ ಎಷ್ಟು ವಿಕೃತ ಆಗಿದೆ ನೋಡಿ. ಈ ವಿಚಾರದಲ್ಲಿ ರಾಜಕೀಯ ಬೇಡ. ಸಿನಿಮಾದ ಪ್ರಚಾರಕ್ಕೆ ಈ ಊರಿಗೆ ಬರಬೇಕು ಎಂದುಕೊಂಡಿದ್ದೆ. ಆದರೆ ಈಗ ಸಾವಿನ ಮನೆಗೆ ಬರುವಂತೆ ಆಗಿದೆ’ ಎಂದು ಪ್ರಥಮ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!