AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಧ್ಯಮಗಳ ಎದುರು ನಟ ಪ್ರಥಮ್ ಈ ರೀತಿ ಕಾಣಿಸಿಕೊಂಡಿದ್ದು ಯಾಕೆ?

‘ನೋ ಕೊಕೇನ್’ ಸಿನಿಮಾದಲ್ಲಿ ಪ್ರಥಮ್ ಅವರು ನಟಿಸುತ್ತಿದ್ದಾರೆ. ಈವರೆಗೂ 25 ದಿನಗಳ ಶೂಟಿಂಗ್ ಮಾಡಲಾಗಿದೆ. ಆರನಾ ಮೂಳೇರ್, ಮಿಮಿಕ್ರಿ ಗೋಪಿ, ರವಿಕಾಳೆ, ಶೋಭರಾಜ್, ಜಗದೀಶ್‌ ಕೊಪ್ಪ, ಸಿದ್ಲಿಂಗು ಶ್ರೀಧರ್ ಮುಂತಾದವರು ನಟಿಸುತ್ತಿದ್ದಾರೆ. ಡಿ.ಆರ್. ಕಲ್ಕಿ ಅಭಿಷೇಕ್ ಅವರು ಸಂಗೀತ ಸಂಯೋಜಿಸುತ್ತಿದ್ದಾರೆ. ಸಾಮ್ರಾಟ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ.

ಮಾಧ್ಯಮಗಳ ಎದುರು ನಟ ಪ್ರಥಮ್ ಈ ರೀತಿ ಕಾಣಿಸಿಕೊಂಡಿದ್ದು ಯಾಕೆ?
Actor Pratham
ಮದನ್​ ಕುಮಾರ್​
|

Updated on: Jul 18, 2025 | 8:35 PM

Share

ನಟ ಪ್ರಥಮ್ (Actor Pratham) ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಅವರು ಮಾಧ್ಯಮಗಳ ಎದುರು ಬಂದರು. ಆಗ ಅವರ ಮೈಯೆಲ್ಲ ರಕ್ತಸಿಕ್ತವಾಗಿತ್ತು. ಅದಕ್ಕೆ ಕಾರಣ ಇದೆ. ಅಂದಹಾಗೆ, ಪ್ರಥಮ್ ಅವರು ಈ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದು ಶೂಟಿಂಗ್ ನಡುವೆ! ಹೌದು, ಇದು ‘ನೋ ಕೊಕೇನ್’ (No Cocaine) ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ಪ್ರಥಮ್ ಅವರು ಕಾಣಿಸಿಕೊಂಡ ರೀತಿ. ಬಳಿಕ ಚಿತ್ರತಂಡದವರು ಸಿನಿಮಾದ ದೃಶ್ಯದ ಬಗ್ಗೆ ಮಾಹಿತಿ ನೀಡಿದರು. ಈ ಸಿನಿಮಾಗೆ ಹಿರಿಯ ಸಾಹಸ ಸಂಯೋಜಕ ಕೌರವ ವೆಂಕಟೇಶ್ ಅವರು ನಿರ್ದೇಶನ ಮಾಡುತ್ತಿದ್ದಾರೆ.

ಕೌರವ ವೆಂಕಟೇಶ್ ಅವರು ನಿರ್ದೇಶನ ಮಾಡುತ್ತಿರುವ ಮೊದಲ ಸಿನಿಮಾ ಇದು. ಬನ್ನೇರುಘಟ್ಟ ರಸ್ತೆಯಲ್ಲಿರುವ ವೈಟ್ ಹೌಸ್ ಬಿಲ್ಡಿಂಗ್​ನಲ್ಲಿ ಸಿನಿಮಾದ ಶೂಟಿಂಗ್ ವೇಳೆ ‘ನೋ ಕೊಕೇನ್’ ಚಿತ್ರತಂಡದವರು ಸುದ್ದಿಗೋಷ್ಠಿ ನಡೆಸಿದರು. ‘ದಿ ಡೆಫಿನಿಷನ್ ಆಫ್ ಪೇಟ್ರಿಯಾಟಿಸಮ್’ ಎಂಬ ಅಡಿಬರಹ ಈ ಚಿತ್ರಕ್ಕೆ. ಅಯೋಧ್ಯರಾಮ್ ಪ್ರೊಡಕ್ಷನ್ಸ್ ಮೂಲಕ ಪುನೀತ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಸುದ್ದಿಗೋಷ್ಠಿ ನಡೆದ ದಿನ ‘ನೋ ಕೊಕೇನ್’ ಚಿತ್ರದ ಶೂಟಿಂಗ್​ನಲ್ಲಿ ಶೋಭರಾಜ್, ಜಗದೀಶ್‌ ಕೊಪ್ಪ, ಸಿದ್ಲಿಂಗು ಶ್ರೀಧರ್, ತೆಲುಗು ಚಿತ್ರರಂಗದ ಖ್ಯಾತ ನಟ ಸೂರ್ಯ ಭಗವಾನ್ ದಾಸ್, ಪ್ರಥಮ್ ಮುಂತಾದವರು ಭಾಗಿಯಾಗಿದ್ದರು. ಮೈ ತುಂಬಾ ರಕ್ತದ ಕಲೆ ಅಂಟಿಸಿಕೊಂಡ ಗೆಟಪ್​ನಲ್ಲಿ ಪ್ರಥಮ್ ಅವರು ಕಾಣಿಸಿಕೊಂಡರು. ‘ಇಂದು ನಡೆಯತ್ತಿರುವ ಸನ್ನಿವೇಶವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತಿಕ್ಕಾಟದ ಪ್ರಸಂಗ’ ಎಂದು ಹೇಳಿದರು.

ಇದನ್ನೂ ಓದಿ
Image
ಡಿ ಬಾಸ್ ಎಂದು ಕೂಗಿದವರಿಗೆ ಖಡಕ್ ತಿರುಗೇಟು ನೀಡಿದ ಪ್ರಥಮ್
Image
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
Image
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
Image
‘ರೇಣುಕಾಸ್ವಾಮಿ ಕುಟುಂಬದ ಬಗ್ಗೆ ಹೇಳಿಕೆ ನೀಡುವಾಗ ಯೋಚನೆ ಮಾಡಿ’: ಪ್ರಥಮ್
No Cocaine Movie Team

No Cocaine Movie Team

‘ಟಾಲಿವುಡ್‌ನ ಸೂರ್ಯಭಗವಾನ್ ದಾಸ್ ಅವರು ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ ಆಗಮಿಸಿದ್ದಾರೆ. ಇಷ್ಟು ವರ್ಷದ ಅನುಭವಗಳನ್ನು ಸೇರಿಸಿ ದೊಡ್ಡ ಮಟ್ಟದ ರಿಸ್ಕ್ ತೆಗೆದುಕೊಳ್ಳುತ್ತಿದ್ದೇನೆ’ ಎಂದಿದ್ದಾರೆ ಪ್ರಥಮ್. ಈ ಸಿನಿಮಾದಲ್ಲಿ ಕೇಂದ್ರ ರಕ್ಷಣಾ ಸಚಿವರಾಗಿ ಸಿದ್ಲಿಂಗು ಶ್ರೀಧರ್ ನಟಿಸಿದ್ದಾರೆ. ‘ಒಬ್ಬ ಪೊಲೀಸ್ ಆಯುಕ್ತ ಎಷ್ಟು ಒಳ್ಳೆಯವನು ಎಂಬುದನ್ನು ಇದರಲ್ಲಿ ತೋರಿಸಲಾಗಿದೆ. ಪ್ರಥಮ್ ಇದ್ದರೆ ಶೂಟಿಂಗ್ ಸುಲಭ’ ಎಂದು ಶೋಭರಾಜ್ ಹೇಳಿದರು.

ಇದನ್ನೂ ಓದಿ: ‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್

ಆ ದಿನದ ಶೂಟಿಂಗ್ ದೃಶ್ಯದ ಬಗ್ಗೆ ನಿರ್ದೇಶಕರು ವಿವರ ನೀಡಿದರು. ‘ಗೃಹ ಸಚಿವ ಹಾಗೂ ಪೊಲೀಸ್ ಆಯುಕ್ತರೊಂದಿಗೆ ಕೊಕೇನ್ ಬಗ್ಗೆ ಗಂಭೀರ ಚರ್ಚೆ ನಡೆಸುತ್ತಿರುವಾಗ ನಾಯಕನ ಆಗಮನವಾಗುತ್ತದೆ. ಸೆಕ್ಯೂರಿಟಿಯವರನ್ನು ಭೇದಿಸಿ ಆತ ಬಂದಿದ್ದರಿಂದ ಅವನ ಮೇಲೆ ಅನುಮಾನ ಬಂದು ಗುಂಡು ಹಾರಿಸಲಾಗುತ್ತದೆ. ಇದು ಇಂಟರ್​ವಲ್ ದೃಶ್ಯ’ ಎಂದು ನಿರ್ದೇಶಕರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು