AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಸಿನಿಮಾದಲ್ಲಿ 50 ಪಾತ್ರ ಮಾಡಲಿರುವ ಕಮಲ್‌ ರಾಜ್; 3 ಸಿನಿಮಾ ಘೋಷಣೆ

ನಟ, ನಿರ್ಮಾಪಕ ಕಮಲ್ ರಾಜ್ ಅವರು ಮೂರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಒಂದೇ ಸಿನಿಮಾದಲ್ಲಿ ಅವರು 50 ಪಾತ್ರಗಳನ್ನು ಮಾಡುವುದಾಗಿ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಲು ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಲಾಯಿತು. ಪ್ರಿಯಾಂಕಾ ಉಪೇಂದ್ರ, ನಾಗೇಂದ್ರ ಪ್ರಸಾದ್, ಸಾಯಿಪ್ರಕಾಶ್ ಮುಂತಾದವರು ಅತಿಥಿಗಳಾಗಿ ಆಗಮಿಸಿದ್ದರು.

ಒಂದೇ ಸಿನಿಮಾದಲ್ಲಿ 50 ಪಾತ್ರ ಮಾಡಲಿರುವ ಕಮಲ್‌ ರಾಜ್; 3 ಸಿನಿಮಾ ಘೋಷಣೆ
Kamal Raj
ಮದನ್​ ಕುಮಾರ್​
|

Updated on: Aug 06, 2025 | 10:29 PM

Share

ಕಮಲ್‌ ರಾಜ್ ನಟಿಸುತ್ತಿರುವ 3 ಹೊಸ ಸಿನಿಮಾಗಳ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಇತ್ತೀಚೆಗೆ ಅವರು ‘ದ ಸೂಟ್’ ಸಿನಿಮಾದಲ್ಲಿ ಅಭಿನಯಿಸಿದ್ದರು. ಈಗ ಒಟ್ಟಿಗೇ 3 ಸಿನಿಮಾಗಳನ್ನು ಆರಂಭಿಸಿದ್ದಾರೆ. ‘ಮೊಹಬ್ಬತ್ ಜಿಂದಾಬಾದ್’, ‘ಟಾಸ್ಕ್’, ‘ನಾಳೆ ನಮ್ಮ ಭರವಸೆ’ (Nale Namma Bharavase) ಎಂಬುದು ಆ 3 ಹೊಸ ಸಿನಿಮಾಗಳ ಶೀರ್ಷಿಕೆ. ಈ ಸಿನಿಮಾಗಳಲ್ಲಿ ನಟಿಸುವುದರ ಜೊತೆಗೆ ಕಮಲ್‌ ರಾಜ್ (Kamal Raj) ಅವರು ‘ಕಮಲ್ ಫಿಲ್ಮ್ಸ್’ ಬ್ಯಾನರ್ ಮೂಲಕ ನಿರ್ಮಾಣ ಕೂಡ ಮಾಡುತ್ತಿದ್ದಾರೆ. ಇದರಲ್ಲಿ ‘ಮೊಹಬ್ಬತ್ ಜಿಂದಾಬಾದ್’ ಹಿಂದಿ ಸಿನಿಮಾ ಎಂಬುದು ವಿಶೇಷ.

ಮೂರು ಸಿನಿಮಾಗಳ ಶೀರ್ಷಿಕೆ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ವಿ. ನಾಗೇಂದ್ರಪ್ರಸಾದ್, ಸಾಯಿಪ್ರಕಾಶ್, ರವಿ ಶ್ರೀವತ್ಸ, ಉಮೇಶ್ ಬಣಕಾರ್, ಪ್ರಿಯಾಂಕಾ ಉಪೇಂದ್ರ ಮುಂತಾದವರು ಭಾಗಿಯಾಗಿದ್ದರು. ‘ನಾಳೆ ನಮ್ಮ ಭರವಸೆ’ ಸಿನಿಮಾವನ್ನು 10 ನಿರ್ದೇಶಕರು ಒಟ್ಟಿಗೆ ನಿರ್ದೇಶನ ಮಾಡಲಿದ್ದಾರೆ. ಇದೇ ಸಿನಿಮಾದಲ್ಲಿ ಕಮಲ್‌ ರಾಜ್ ಅವರು ಬರೋಬ್ಬರಿ 50 ಪಾತ್ರಗಳನ್ನು ಮಾಡಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕಮಲ್‌ ರಾಜ್ ಮಾತನಾಡಿದರು. ‘ಈ ಮೊದಲು ನಾನು ದಿ ಸೂಟ್ ಸಿನಿಮಾದಲ್ಲಿ ಅಭಿನಯಿಸಿದ್ದೆ. ‘ನಾಳೆ ನಮ್ಮ ಭರವಸೆ’ ಸಿನಿಮಾದಲ್ಲಿ 50 ಪಾತ್ರಗಳನ್ನು ಮಾಡುತ್ತಿದ್ದೇನೆ. 75 ದೃಶ್ಯಗಳಿರುವ ಈ ಸಿನಿಮಾವನ್ನು ಹತ್ತು ಡೈರೆಕ್ಟರ್​ಗಳು ನಿರ್ದೇಶಿಸಲಿದ್ದಾರೆ. ‘ಮೊಹಬ್ಬತ್ ಜಿಂದಾಬಾದ್’ ಸಿನಿಮಾದಲ್ಲಿ 14 ಹಾಡುಗಳಿವೆ. ಬಾಲಿವುಡ್​ನ ಹಲವಾರು ಕಲಾವಿದರು ನಟಿಸುತ್ತಿದ್ದಾರೆ. ಕನ್ನಡ, ಹಿಂದಿ ಸೇರಿದಂತೆ ಹಲವು ಭಾಷೆಯಲ್ಲಿ ಈ ಚಿತ್ರ ತಯಾರಾಗಲಿದೆ’ ಎಂದು ಅವರು ಹೇಳಿದರು.

‘ಈಗಾಗಲೇ 3 ಸಿನಿಮಾಗಳ ಚಿತ್ರೀಕರಣ ನಡೆಯುತ್ತಿದೆ. ಡಿಸೆಂಬರ್ ವೇಳೆಗೆ ರಿಲೀಸ್ ಮಾಡುವ ಪ್ಲ್ಯಾನ್ ಇದೆ. ಈ ಸಿನಿಮಾಗಳಲ್ಲಿ ನಾನು ಲವರ್‌ಬಾಯ್, ಡಿಟೆಕ್ಟಿವ್ ಮುಂತಾದ ಪಾತ್ರಗಳನ್ನು ಮಾಡುತ್ತಿದ್ದೇನೆ. ನಾನು 40ಕ್ಕೂ ಅಧಿಕ ಸಿನಿಮಾಗಳಿಗೆ ಬಂಡವಾಳ ಹೂಡಿದ್ದು, ಅವುಗಳಲ್ಲಿ ಒಂದು ಸಿನಿಮಾ ರಿಲೀಸ್ ಆಗಿದೆ. ಹಾಗಾಗಿ ಚಿತ್ರರಂಗದ ಬಗ್ಗೆ ಸ್ವಲ್ಪ ತಿಳಿದುಕೊಂಡಿದ್ದೇನೆ’ ಎಂದು ಕಮಲ್ ರಾಜ್ ಹೇಳಿದ್ದಾರೆ.

ಇದನ್ನೂ ಓದಿ: ಮಾಲಾಶ್ರೀ ಪುತ್ರಿ ಆರಾಧನಾಗೆ ‘ನೆಕ್ಸ್ಟ್ ಲೆವೆಲ್’ ಅವಕಾಶ; ಉಪೇಂದ್ರ ಜೊತೆ ಸಿನಿಮಾ

‘ಟಾಸ್ಕ್’ ಸಿನಿಮಾವನ್ನು ಐವರು ನಿರ್ದೇಶನ ಮಾಡಲಿದ್ದಾರೆ. ಆ ಪೈಕಿ ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಅವರು ಒಂದು ಕಥೆಗೆ ನಿರ್ದೇಶನ ಮಾಡಲಿದ್ದಾರೆ. ಪ್ರಿಯಾಂಕಾ ಉಪೇಂದ್ರ ಮಾತನಾಡಿ, ‘ಕಮಲ್ ಅವರು ನನಗೆ ಒಂದು ಸಮಾರಂಭದಲ್ಲಿ ಪರಿಚಯ ಆದರು. 200 ಮಿನಿ ಥಿಯೇಟರ್ ಮಾಡುವ ಪ್ಲಾನ್ ಅವರಿಗೆ ಇದೆ. ಅವುಗಳಲ್ಲಿ ಬಹುತೇಕ ಕನ್ನಡ ಸಿನಿಮಾ ಪ್ರದರ್ಶಿಸುವ ಯೋಜನೆ ಕೇಳಿ ನನಗೆ ಬಹಳ ಖುಷಿ ಆಯಿತು’ ಎಂದರು. ಕಮಲ್ ರಾಜ್ ಅವರಿಗೆ ಇರುವ ಸಿನಿಮಾ ಪ್ರೀತಿಯನ್ನು ಉಮೇಶ್ ಬಣಕಾರ್, ನಾಗೇಂದ್ರ ಪ್ರಸಾದ್, ರವಿ ಶ್ರೀವತ್ಸ ಅವರು ಕೊಂಡಾಗಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು