AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪುದು ಸಡನ್ ಡೆತ್ -ಈ ಹಿಂದೆ ಯಾವುದೇ ಸಮಸ್ಯೆ ಇರಲಿಲ್ಲ: ಕೊನೆಯ ಕ್ಷಣ ವಿವರಿಸಿದ ಡಾ. ರಮಣ, ವಿಡಿಯೋ ನೋಡಿ

ಇಸಿಜಿ ಪರೀಕ್ಷೆಯಲ್ಲಿ ಸಮಸ್ಯೆ ಕಾಣಿಸಿತ್ತು. ಕೂಡಲೇ ಆಸ್ಪತ್ರೆಗೆ ಹೋಗುವಂತೆ ಪುನೀತ್‌ಗೆ ಸೂಚಿಸಿದ್ದೆ. ಐದೇ ನಿಮಿಷದಲ್ಲಿ ವಿಕ್ರಂ ಆಸ್ಪತ್ರೆಗೆ ಪುನೀತ್ ದಾಖಲಾಗಿದ್ರು. ನಟ ಪುನೀತ್‌ರದ್ದು ಸಡನ್ ಡೆತ್ ಎಂದು ಡಾಕ್ಟರ್ ರಮಣರಾವ್ ಹೇಳಿದ್ದಾರೆ.

ಅಪ್ಪುದು ಸಡನ್ ಡೆತ್ -ಈ ಹಿಂದೆ ಯಾವುದೇ ಸಮಸ್ಯೆ ಇರಲಿಲ್ಲ: ಕೊನೆಯ ಕ್ಷಣ ವಿವರಿಸಿದ ಡಾ. ರಮಣ, ವಿಡಿಯೋ ನೋಡಿ
ಬೆಂಗಳೂರು ಮೂಲದ ವೈದ್ಯ ಮತ್ತು ಹೃದ್ರೋಗ ತಜ್ಞ ಡಾ. ಬಿ. ರಮಣ ರಾವ್
TV9 Web
| Edited By: |

Updated on:Oct 30, 2021 | 3:58 PM

Share

ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಹೃದಯಾಘಾತದಿಂದ ಅಕ್ಟೋಬರ್ ​ 29 ರಂದು ನಿಧನರಾದರು. ಎರಡು ಗಂಟೆಗಳ ಕಾಲ ಜಿಮ್ನಲ್ಲಿ ವರ್ಕೌಟ್ ಮಾಡಿ ಎದೆ ನೋವಿನಿಂದ ಕ್ಲಿನಿಕ್‌ಗೆ ಬಂದಿದ್ದ ಪುನೀತ್ರನ್ನು ಫ್ಯಾಮಿಲಿ ಡಾಕ್ಟರ್ ರಮಣರಾವ್ ಚಿಕಿತ್ಸೆ ನೀಡಿದ್ದರು. ಈ ವೇಳೆ ಅವರ ಆರೋಗ್ಯ ಸ್ಥಿತಿ ಹೇಗಿತ್ತು ಎಂಬ ಬಗ್ಗೆ ಟಿವಿ9 ಜೊತೆ ಡಾಕ್ಟರ್ ರಮಣರಾವ್ ಮಾಹಿತಿ ನೀಡಿದ್ದಾರೆ.

ನಟ ಪುನೀತ್ ನನ್ನನ್ನು ಅಪ್ಪಾಜಿ ಎಂದು ಕರೆಯುತ್ತಿದ್ದರು. ನಿನ್ನೆ 11.15ಕ್ಕೆ ಪುನೀತ್ ನಮ್ಮ ಕ್ಲಿನಿಕ್‌ಗೆ ಬಂದಿದ್ದರು. ಕ್ಲಿನಿಕ್‌ಗೆ ಬರುತ್ತಿದ್ದಂತೆ ಒಳಗೆ ಕರೆದುಕೊಂಡು ಮಾತಾಡಿದೆ. ಪುನೀತ್ ರಾಜ್‌ಕುಮಾರ್ ಕ್ಲಿನಿಕ್‌ಗೆ ಬಂದಾಗ ಬೆವರುತ್ತಿದ್ದರು. ಕೇಳಿದ್ರೆ ಇಲ್ಲಾ ನಾನು ಜಿಮ್‌ನಿಂದ ಬರುತ್ತಿದ್ದೇನೆ ಎಂದರು. ಆದರೂ ಇರಲಿ ಎಂದು ನಾವು ಇಸಿಜಿ ಮಾಡಿಸಿದ್ದೆವು. ಇಸಿಜಿ ಪರೀಕ್ಷೆಯಲ್ಲಿ ಸಮಸ್ಯೆ ಕಾಣಿಸಿತ್ತು. ಕೂಡಲೇ ಆಸ್ಪತ್ರೆಗೆ ಹೋಗುವಂತೆ ಪುನೀತ್‌ಗೆ ಸೂಚಿಸಿದ್ದೆ. ಐದೇ ನಿಮಿಷದಲ್ಲಿ ವಿಕ್ರಂ ಆಸ್ಪತ್ರೆಗೆ ಪುನೀತ್ ದಾಖಲಾಗಿದ್ರು. ನಟ ಪುನೀತ್‌ರದ್ದು ಸಡನ್ ಡೆತ್ ಎಂದು ಡಾಕ್ಟರ್ ರಮಣರಾವ್ ಹೇಳಿದ್ದಾರೆ.

ನಟ ಪುನೀತ್‌ರದ್ದು ಸಡನ್ ಡೆತ್. ಇದಕ್ಕೂ ನಿರ್ದಿಷ್ಟ ಕಾರಣ ಏನೆಂದು ಗೊತ್ತಾಗುವುದಿಲ್ಲ. ಪುನೀತ್‌ರದ್ದು ಸಡನ್ ಡೆತ್ ಅಥವಾ ಕಾರ್ಡಿಯಾಕ್ ಅರೆಸ್ಟ್ ಇರಬೇಕು. ನಟ ಪುನೀತ್‌ಗೆ ಈ ಹಿಂದೆ ಯಾವುದೇ ಸಮಸ್ಯೆ ಇರಲಿಲ್ಲ. ಪುನೀತ್ ರೆಗ್ಯುಲರ್ ಆಗಿ ವ್ಯಾಯಾಮ ಮಾಡುತ್ತಿದ್ದರು. ನಟ ಪುನೀತ್ ನಮ್ಮನ್ನು ಇಂದು ಬಿಟ್ಟು ಹೋಗಿರಬರುದು. ಆದರೆ ಅಪ್ಪು ಸದಾ ನಮ್ಮ ಜೊತೆಯಲ್ಲಿಯೇ ಇರುತ್ತಾರೆ ಎಂದರು.

ಇದನ್ನೂ ಓದಿ: Puneeth rajkumar: ಇಂದು ಸಂಜೆಯೇ ಪುನೀತ್ ಅಂತ್ಯಕ್ರಿಯೆ; ರಾಕ್​ಲೈನ್ ವೆಂಕಟೇಶ್ ಮಾಹಿತಿ

Published On - 11:30 am, Sat, 30 October 21

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್