AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪುದು ಸಡನ್ ಡೆತ್ -ಈ ಹಿಂದೆ ಯಾವುದೇ ಸಮಸ್ಯೆ ಇರಲಿಲ್ಲ: ಕೊನೆಯ ಕ್ಷಣ ವಿವರಿಸಿದ ಡಾ. ರಮಣ, ವಿಡಿಯೋ ನೋಡಿ

ಇಸಿಜಿ ಪರೀಕ್ಷೆಯಲ್ಲಿ ಸಮಸ್ಯೆ ಕಾಣಿಸಿತ್ತು. ಕೂಡಲೇ ಆಸ್ಪತ್ರೆಗೆ ಹೋಗುವಂತೆ ಪುನೀತ್‌ಗೆ ಸೂಚಿಸಿದ್ದೆ. ಐದೇ ನಿಮಿಷದಲ್ಲಿ ವಿಕ್ರಂ ಆಸ್ಪತ್ರೆಗೆ ಪುನೀತ್ ದಾಖಲಾಗಿದ್ರು. ನಟ ಪುನೀತ್‌ರದ್ದು ಸಡನ್ ಡೆತ್ ಎಂದು ಡಾಕ್ಟರ್ ರಮಣರಾವ್ ಹೇಳಿದ್ದಾರೆ.

ಅಪ್ಪುದು ಸಡನ್ ಡೆತ್ -ಈ ಹಿಂದೆ ಯಾವುದೇ ಸಮಸ್ಯೆ ಇರಲಿಲ್ಲ: ಕೊನೆಯ ಕ್ಷಣ ವಿವರಿಸಿದ ಡಾ. ರಮಣ, ವಿಡಿಯೋ ನೋಡಿ
ಬೆಂಗಳೂರು ಮೂಲದ ವೈದ್ಯ ಮತ್ತು ಹೃದ್ರೋಗ ತಜ್ಞ ಡಾ. ಬಿ. ರಮಣ ರಾವ್
TV9 Web
| Updated By: ಆಯೇಷಾ ಬಾನು|

Updated on:Oct 30, 2021 | 3:58 PM

Share

ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಹೃದಯಾಘಾತದಿಂದ ಅಕ್ಟೋಬರ್ ​ 29 ರಂದು ನಿಧನರಾದರು. ಎರಡು ಗಂಟೆಗಳ ಕಾಲ ಜಿಮ್ನಲ್ಲಿ ವರ್ಕೌಟ್ ಮಾಡಿ ಎದೆ ನೋವಿನಿಂದ ಕ್ಲಿನಿಕ್‌ಗೆ ಬಂದಿದ್ದ ಪುನೀತ್ರನ್ನು ಫ್ಯಾಮಿಲಿ ಡಾಕ್ಟರ್ ರಮಣರಾವ್ ಚಿಕಿತ್ಸೆ ನೀಡಿದ್ದರು. ಈ ವೇಳೆ ಅವರ ಆರೋಗ್ಯ ಸ್ಥಿತಿ ಹೇಗಿತ್ತು ಎಂಬ ಬಗ್ಗೆ ಟಿವಿ9 ಜೊತೆ ಡಾಕ್ಟರ್ ರಮಣರಾವ್ ಮಾಹಿತಿ ನೀಡಿದ್ದಾರೆ.

ನಟ ಪುನೀತ್ ನನ್ನನ್ನು ಅಪ್ಪಾಜಿ ಎಂದು ಕರೆಯುತ್ತಿದ್ದರು. ನಿನ್ನೆ 11.15ಕ್ಕೆ ಪುನೀತ್ ನಮ್ಮ ಕ್ಲಿನಿಕ್‌ಗೆ ಬಂದಿದ್ದರು. ಕ್ಲಿನಿಕ್‌ಗೆ ಬರುತ್ತಿದ್ದಂತೆ ಒಳಗೆ ಕರೆದುಕೊಂಡು ಮಾತಾಡಿದೆ. ಪುನೀತ್ ರಾಜ್‌ಕುಮಾರ್ ಕ್ಲಿನಿಕ್‌ಗೆ ಬಂದಾಗ ಬೆವರುತ್ತಿದ್ದರು. ಕೇಳಿದ್ರೆ ಇಲ್ಲಾ ನಾನು ಜಿಮ್‌ನಿಂದ ಬರುತ್ತಿದ್ದೇನೆ ಎಂದರು. ಆದರೂ ಇರಲಿ ಎಂದು ನಾವು ಇಸಿಜಿ ಮಾಡಿಸಿದ್ದೆವು. ಇಸಿಜಿ ಪರೀಕ್ಷೆಯಲ್ಲಿ ಸಮಸ್ಯೆ ಕಾಣಿಸಿತ್ತು. ಕೂಡಲೇ ಆಸ್ಪತ್ರೆಗೆ ಹೋಗುವಂತೆ ಪುನೀತ್‌ಗೆ ಸೂಚಿಸಿದ್ದೆ. ಐದೇ ನಿಮಿಷದಲ್ಲಿ ವಿಕ್ರಂ ಆಸ್ಪತ್ರೆಗೆ ಪುನೀತ್ ದಾಖಲಾಗಿದ್ರು. ನಟ ಪುನೀತ್‌ರದ್ದು ಸಡನ್ ಡೆತ್ ಎಂದು ಡಾಕ್ಟರ್ ರಮಣರಾವ್ ಹೇಳಿದ್ದಾರೆ.

ನಟ ಪುನೀತ್‌ರದ್ದು ಸಡನ್ ಡೆತ್. ಇದಕ್ಕೂ ನಿರ್ದಿಷ್ಟ ಕಾರಣ ಏನೆಂದು ಗೊತ್ತಾಗುವುದಿಲ್ಲ. ಪುನೀತ್‌ರದ್ದು ಸಡನ್ ಡೆತ್ ಅಥವಾ ಕಾರ್ಡಿಯಾಕ್ ಅರೆಸ್ಟ್ ಇರಬೇಕು. ನಟ ಪುನೀತ್‌ಗೆ ಈ ಹಿಂದೆ ಯಾವುದೇ ಸಮಸ್ಯೆ ಇರಲಿಲ್ಲ. ಪುನೀತ್ ರೆಗ್ಯುಲರ್ ಆಗಿ ವ್ಯಾಯಾಮ ಮಾಡುತ್ತಿದ್ದರು. ನಟ ಪುನೀತ್ ನಮ್ಮನ್ನು ಇಂದು ಬಿಟ್ಟು ಹೋಗಿರಬರುದು. ಆದರೆ ಅಪ್ಪು ಸದಾ ನಮ್ಮ ಜೊತೆಯಲ್ಲಿಯೇ ಇರುತ್ತಾರೆ ಎಂದರು.

ಇದನ್ನೂ ಓದಿ: Puneeth rajkumar: ಇಂದು ಸಂಜೆಯೇ ಪುನೀತ್ ಅಂತ್ಯಕ್ರಿಯೆ; ರಾಕ್​ಲೈನ್ ವೆಂಕಟೇಶ್ ಮಾಹಿತಿ

Published On - 11:30 am, Sat, 30 October 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ