AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನೂನಿನ ಪ್ರಕಾರವೇ ವಿಷ್ಣುವರ್ಧನ್ ಸಮಾಧಿ ನೆಲಸಮ ಆಗಿದೆ: ರಂಗಾಯಣ ರಘು

ವಿಷ್ಣುವರ್ಧನ್ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮ ಮಾಡಿದ್ದರಿಂದ ಅಭಿಮಾನಿಗಳಿಗೆ ತೀವ್ರ ನೋವಾಗಿದೆ. ಈ ಬಗ್ಗೆ ಚಿತ್ರರಂಗದ ಅನೇಕರು ಮಾತನಾಡಿದ್ದಾರೆ. ರಂಗಾಯಣ ರಘು ಅವರು ಕೂಡ ಅಭಿಪ್​ರಾಯ ತಿಳಿಸಿದ್ದಾರೆ. ‘ಪೊಲೀಸರ ಸಮ್ಮುಖದಲ್ಲೇ ಆಗಿದೆ ಎಂದರೆ ಕಾನೂನಾತ್ಮಕವೇ ಆಯಿತಲ್ಲ’ ಎಂದು ಅವರು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಕಾನೂನಿನ ಪ್ರಕಾರವೇ ವಿಷ್ಣುವರ್ಧನ್ ಸಮಾಧಿ ನೆಲಸಮ ಆಗಿದೆ: ರಂಗಾಯಣ ರಘು
Rangayana Raghu, Vishnuvardhan
ಮದನ್​ ಕುಮಾರ್​
|

Updated on: Aug 10, 2025 | 9:28 AM

Share

ಅಭಿಮಾನ್ ಸ್ಟುಡಿಯೋದಲ್ಲಿ ಇದ್ದ ವಿಷ್ಣುವರ್ಧನ್ ಸಮಾಧಿ (Vishnuvardhan Samadhi) ನೆಲಸಮ ಮಾಡಿದ ಘಟನೆ ಬಗ್ಗೆ ಕನ್ನಡ ಚಿತ್ರರಂಗದ ಅನೇಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಹಿರಿಯ ನಟ ರಂಗಾಯಣ ರಘು (Rangayana Raghu) ಅವರು ಕೂಡ ಈ ಕುರಿತು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅಭಿಮಾನ್ ಸ್ಟುಡಿಯೋದಲ್ಲೇ ವಿಷ್ಣು (Vishnuvardhan) ಸಮಾಧಿ ಇರಬೇಕು ಎಂಬುದು ಅಭಿಮಾನಿಗಳ ಆಸೆ ಆಗಿತ್ತು. ಆದರೆ ಕಾನೂನಿನ ತೊಡಕಿನಿಂದಾಗಿ ಮೈಸೂರಿಗೆ ಸ್ಮಾರಕ ಸ್ಥಳಾಂತರ ಆಯಿತು. ಇತ್ತೀಚೆಗೆ ಅಭಿಮಾನ್ ಸ್ಟುಡಿಯೋದಲ್ಲಿ ಇದ್ದ ಸಮಾಧಿಯನ್ನು ನೆಲಸಮ ಮಾಡಿದ್ದಕ್ಕೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ‘ಎಲ್ಲವೂ ಕಾನೂನಿನ ಪ್ರಕಾರವೇ ಆಗಿದೆ’ ಎಂದಿದ್ದಾರೆ ರಂಗಾಯಣ ರಘು.

‘ವಿಷ್ಣು ಸರ್ ಹೆಚ್ಚು ಸಮಯ ಕಳೆದಿದ್ದು ಭಾರತಿ ಮೇಡಂ ಜೊತೆ. ಈಗಲೂ ಭಾರತಿ ಮೇಡಂ ಇದ್ದಾರೆ. ಅಳಿಯ, ಮಕ್ಕಳು ಇದ್ದಾರೆ. ತಾವು ಹೇಗಿರಬೇಕು ಎಂಬುದನ್ನೆಲ್ಲ ವಿಷ್ಣುವರ್ಧನ್ ಅವರು ಭಾರತಿ ಮೇಡಂ ಬಳಿ ಹೇಳಿದ್ದಾರೆ. ಅದಕ್ಕಾಗಿಯೇ ಅವರು ಮೈಸೂರಿನಲ್ಲಿ ಸ್ಮಾರಕ ಮಾಡಿದ್ದಾರೆ. ಬಾಲಣ್ಣ ಅವರ ಸ್ಟುಡಿಯೋ ಜಾಗ ಆದ್ದರಿಂದ ಕಾನೂನಿಕ ಸಮಸ್ಯೆ ಆಗಿದೆ’ ಎಂದು ರಂಗಾಯಣ ರಘು ಹೇಳಿದ್ದಾರೆ.

‘ಇಲ್ಲಿ ಯಾರದ್ದು ಸರಿ, ಯಾರದ್ದು ತಪ್ಪು ಅಂತ ಹೇಳೋಕೆ ಆಗಲ್ಲ. ಭಾರತಿ ಮೇಡಂ ಮತ್ತು ಅನಿರುದ್ಧ್ ಅವರು ತುಂಬಾ ಪ್ರಯತ್ನ ಮಾಡಿದರು. ವೀರಕಪುತ್ರ ಶ್ರೀನಿವಾಸ್ ಮುಂತಾದ ಅಭಿಮಾನಿಗಳು ಸಾಕಷ್ಟು ಕಾರ್ಯಕ್ರಮ ಮಾಡಿದರು. ಸದ್ಯಕ್ಕೆ ಅದು ಆಗಲ್ಲ ಎಂದಾದಾಗ ವಿಷ್ಣು ಸರ್ ಅವರ ಹೆಸರೇ ಹಾಗೆ ಎನಿಸುತ್ತದೆ. ಅವರು ಇದ್ದಾಗಲೂ ಹಾಗೆಯೇ ಆಯಿತು. ಭಾರತಿ ಮೇಡಂ ಯೋಚನೆ ಮಾಡಿ, ಮೈಸೂರಿನಲ್ಲಿ ಸ್ಮಾರಕ ಮಾಡಿದರು’ ಎಂದಿದ್ದಾರೆ ರಂಗಾಯಣ ರಘು.

ಇದನ್ನೂ ಓದಿ
Image
ತೆಲುಗಿನ ಈ ಸ್ಟಾರ್ ನಟನಿಗೂ ವಿಷ್ಣುವರ್ಧನ್​ಗೂ ಇರುವ ನಂಟು ಗೊತ್ತೆ?
Image
ಪೂಜೆಗೆ ಸಿಗದ ಅವಕಾಶ: ವಿಷ್ಣು ಸಮಾಧಿ ಬಳಿ ಅಭಿಮಾನಿಗಳ ಗಲಾಟೆ
Image
ವಿಷ್ಣುವರ್ಧನ್​ಗೆ ಆ ಒಂದು ವಿಚಾರದಲ್ಲಿ ಇತ್ತು ಕೊರಗು; ಕೊನೆಗೂ ಈಡೇರಲಿಲ್ಲ
Image
ವಿಷ್ಣುವರ್ಧನ್ ಸಸ್ಯಹಾರಿಯೋ, ಮಾಂಸಾಹಾರಿಯೋ? ಹಿರಿಯ ನಿರ್ದೇಶಕ ಹೇಳಿದ್ದೇನು?

‘ಭಾರತಿ ಮೇಡಂ ಅವರಿಗೆ ಎಲ್ಲವೂ ಗೊತ್ತಿರುತ್ತದೆ. ಅಭಿಮಾನಿಗಳು ಸಿನಿಮಾ ನೋಡಿ ಅಭಿಮಾನ ಬೆಳೆಸಿಕೊಳ್ಳುತ್ತಾರೆ. ಆದರೆ ಹಗಲು-ರಾತ್ರಿ ಜೊತೆಗೆ ಇದ್ದವರು ಭಾರತಿ ಮೇಡಂ. ಏನಾಗಬೇಕು, ಏನಾಗಬಾರದು ಎಂಬುದನ್ನು ಅವರಿಗೆ ವಿಷ್ಣುವರ್ಧನ್ ಹೇಳಿರುತ್ತಾರೆ. ಕಾನೂನಿನ ತೊಡಕು ಇದ್ದು, ಇಲ್ಲಿಗೆ ಬರಬೇಡಿ, ಆಚೆಗೆ ಹೋಗಿ ಎಂದರೆ ಮತ್ತೆ ಅವಮಾನ ಆಗುತ್ತದೆ. ಹಾಗಾಗಿ ಮೈಸೂರಿನಲ್ಲಿ ಸ್ಮಾರಕ ಮಾಡಿದ್ದಾರೆ. ಮೈಸೂರಿಗೆ ಚಾಮುಂಡಿ ಬೆಟ್ಟ ನೋಡಲು ಹೋದಂತೆ ವಿಷ್ಣುವರ್ಧನ್ ಸ್ಮಾರಕ ನೋಡಲೂ ಹೋಗುತ್ತೇವೆ.’ ಎಂಬುದು ರಂಗಾಯಣ ರಘು ಮಾತು.

ಇದನ್ನೂ ಓದಿ: ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಜಕ್ಕೂ ಆ ಜಾಗ ಯಾರದ್ದು? ಅದರ ಇತಿಹಾಸವೇನು?

‘ರಾತ್ರೋರಾತ್ರಿ ಪೊಲೀಸರ ಸಮ್ಮುಖದಲ್ಲಿ ತೆರವು ಮಾಡಿದ್ದಾರೆ ಅಂತ ಹೇಳುತ್ತಾರೆ. ಪೊಲೀಸರು ಬಂದಿದ್ದಾರೆ ಎಂದರೆ ಕಾನೂನಿನ ಪ್ರಕಾರವೇ ಆಯಿತಲ್ಲ. ಅದು ಬಾಲಣ್ಣ ಅವರ ಜಾಗ. ಆವತ್ತು ಅಂಬರೀಷ್ ಇದ್ದರು. ಇಲ್ಲಿ ಮಾಡೋಣ ಅಂದರು, ಮಾಡಿಬಿಟ್ಟರು. ನಾವೆಲ್ಲರೂ ಅಲ್ಲಿಗೆ ಹೋಗಿದ್ದೆವು. ಇಂಥ ಕಡೆ ಸಮಾಧಿ ಇರಬೇಕು ಎಂಬ ಆಸೆ ಅಭಿಮಾನಿಗಳಿಗೆ ಸಹಜ. ಆದರೆ ಅದಕ್ಕೆ ಕಾನೂನಾತ್ಮಕವಾಗಿ ಕೂಡ ಎಲ್ಲವೂ ಸರಿಯಾಗಿ ಇರಬೇಕು’ ಎಂದು ರಂಗಾಯಣ ರಘು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ