AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಾಣ ಒತ್ತೆಯಿಟ್ಟು ಮಾಡಿದ ಸಿನಿಮಾಗೆ ಇಂಥ ಅನ್ಯಾಯ’! ನೋವು ತೋಡಿಕೊಂಡ ಖ್ಯಾತ ನಟ ಸಂಚಾರಿ ವಿಜಯ್​

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಸಂಚಾರಿ ವಿಜಯ್​ ಅವರು ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ತಮಗಾದ ಅನ್ಯಾಯದ ವಿರುದ್ಧ ಗುಡುಗಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ...

‘ಪ್ರಾಣ ಒತ್ತೆಯಿಟ್ಟು ಮಾಡಿದ ಸಿನಿಮಾಗೆ ಇಂಥ ಅನ್ಯಾಯ’! ನೋವು ತೋಡಿಕೊಂಡ ಖ್ಯಾತ ನಟ ಸಂಚಾರಿ ವಿಜಯ್​
ಸಂಚಾರಿ ವಿಜಯ್​- ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ ಲೋಗೋ
ಮದನ್​ ಕುಮಾರ್​
| Edited By: |

Updated on: Mar 09, 2021 | 12:29 PM

Share

‘ನಾನು ಅವನಲ್ಲ ಅವಳು’ ಚಿತ್ರದ ನಟನೆಗಾಗಿ ‘ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ’ ಪಡೆದುಕೊಂಡ ಕಲಾವಿದ ಸಂಚಾರಿ ವಿಜಯ್​ ಅವರು ಒಂದು ಹೊಸ ಸಿನಿಮಾದಲ್ಲಿ ನಟಿಸಿದ್ದಾರೆ. ‘ತಲೆದಂಡ’ ಶೀರ್ಷಿಕೆಯ ಈ ಚಿತ್ರಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಅನ್ಯಾಯ ಆಗಿದೆ ಎಂದು ಸಂಚಾರಿ ವಿಜಯ್​ ಈಗ ಆರೋಪಿಸಿದ್ದಾರೆ.

ಮಾ.24ರಿಂದ 31ರವರೆಗೆ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ ನಡೆಯಲಿದೆ. ಇದರ ಹಲವು ವಿಭಾಗಗಳಿಗೆ ಸಿನಿಮಾ ಆಯ್ಕೆ ನಡೆಯುತ್ತಿದೆ. ಸ್ಪರ್ಧೆಯ ವಿಭಾಗದಲ್ಲಿ ತೀವ್ರ ಪೈಪೋಟಿ ಇದೆ. ಆದರೆ ಈ ವಿಭಾಗದಲ್ಲಿ ಕನ್ನಡದ ‘ತಲೆದಂಡ’ ಚಿತ್ರಕ್ಕೆ ಅವಕಾಶ ನಿರಾಕರಿಸಲಾಗಿದೆ. ಚಿತ್ರೋತ್ಸವ ಆಯೋಜಕರ ಈ ನಿರ್ಧಾರಕ್ಕೆ ಸಂಚಾರಿ ವಿಜಯ್​ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ತಲೆದಂಡ’ ಚಿತ್ರಕ್ಕೆ ಛಾಯಾಗ್ರಹಣ ಮಾಡಿರುವುದು ಅಶೋಕ್​ ಕಶ್ಯಪ್​. ಅವರು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಸದಸ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಚಿತ್ರೋತ್ಸವದ ನಿಯಮದ ಪ್ರಕಾರ, ಅಕಾಡೆಮಿಯಲ್ಲಿ ಇರುವವರ ಮತ್ತು ಅವರ ಆಪ್ತರ ಸಿನಿಮಾಗಳನ್ನು ಸ್ಪರ್ಧೆಯ ವಿಭಾಗಕ್ಕೆ ಆಯ್ಕೆ ಮಾಡುವಂತಿಲ್ಲ. ಆದರೆ ಈ ನಿಯಮದಿಂದ ಒಂದು ಒಳ್ಳೆಯ ಸಿನಿಮಾಗೆ ತೊಂದರೆ ಆಗುತ್ತಿದೆ ಎಂಬುದು ಸಂಚಾರಿ ವಿಜಯ್​ ಅವರ ವಾದ.

‘ನಮ್ಮ ಸಿನಿಮಾ ಸೆನ್ಸಾರ್​ ಆಗಿರುವುದು 2020ರಲ್ಲಿ. ಅದು ಈ ವರ್ಷವೇ ಪ್ರದರ್ಶನ ಆಗಬೇಕು. ಮುಂದಿನ ವರ್ಷ ಅವಕಾಶ ಇರುವುದಿಲ್ಲ. ಬಹಳ ಕಷ್ಟಪಟ್ಟು, ಅವರಿವರ ಕೈ-ಕಾಲು ಹಿಡಿದು ಸಾಲ ಮಾಡಿ ಸಿನಿಮಾ ನಿರ್ಮಿಸಲಾಗಿದೆ. ಆದರೆ ನೀವು ಹೇಗೆ ಈ ಚಿತ್ರವನ್ನು ಕಾಂಪಿಟೀಷನ್​ ಸೆಕ್ಷನ್​ನಿಂದ ಹೊರಗೆ ಇಟ್ಟಿದ್ದೀರಿ? ಅದಕ್ಕೆ ಮಾನದಂಡಗಳೇನು? ಹೀಗೆ ಒಂದು ಸಿನಿಮಾಗೆ ಅನ್ಯಾಯ ಆಗುತ್ತಿದೆ. ಇದು ಸಾಮಾಜಿಕ ಸಂದೇಶ ಇರುವ ಸಿನಿಮಾ’ ಎಂದಿದ್ದಾರೆ ಸಂಚಾರಿ ವಿಜಯ್​.

‘ಮರಗಳನ್ನು ಕಡಿಯಬೇಡಿ. ಅರಣ್ಯ ನಾಶ ಮಾಡಿದರೆ ಜಾಗತಿಕವಾಗಿ ತಾಪಮಾನ ಹೆಚ್ಚುತ್ತದೆ ಎಂಬ ಮೆಸೇಜ್​ ಇದರಲ್ಲಿ ಇದೆ. ಇಂಥ ಸಿನಿಮಾವನ್ನು ಹೊರಗೆ ಇಟ್ಟಿರುವುದನ್ನು ತಿಳಿದು ಬಹಳ ಬೇಸರ ಆಯಿತು. ಚಿತ್ರೀಕರಣದ ವೇಳೆ ನನ್ನ ಜೀವವನ್ನೇ ಪಣಕ್ಕಿಟ್ಟು ಕೆಲಸ ಮಾಡಿದ್ದೇನೆ. ಬದುಕಿದ್ದೇ ಹೆಚ್ಚು ಎಂಬಷ್ಟರಮಟ್ಟಿಗೆ ರಿಸ್ಕ್​ ತೆಗೆದುಕೊಂಡು ನಾನು ಕೆಲಸ ಮಾಡಿದ್ದೇನೆ. ಹೆಚ್ಚು-ಕಡಿಮೆ ಆಗಿದ್ದರೆ ನಾನೇ ಬದುಕಿ ಉಳಿಯುತ್ತಿರಲಿಲ್ಲ. ಇಂಥ ಸಿನಿಮಾ ಜನರಿಗೆ ತಲುಪಬೇಕು, ಆ ಚಿತ್ರಕ್ಕೆ ನ್ಯಾಯ ಸಿಗಬೇಕು ಎಂಬ ಕಾರಣಕ್ಕಾಗಿ ನಾವು ಇಷ್ಟೆಲ್ಲ ರಿಸ್ಕ್​ ತೆಗೆದುಕೊಂಡು ಸಿನಿಮಾ ಮಾಡುತ್ತೇವೆ. ಆದರೆ ಚಿತ್ರೋತ್ಸವದಲ್ಲಿ ಅನ್ಯಾಯ ಆಗಿರುವುದರಿಂದ ನಮಗೆ ಬಹಳಷ್ಟು ನೋವಾಗಿದೆ’ ಎಂದು ಸೋಶಿಯಲ್​ ಮೀಡಿಯಾ ಮೂಲಕ ಅವರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಕೆಂಪೇಗೌಡ ಸಿನಿಮಾ ನಿರ್ಮಾಪಕ ಶಂಕರ್ ಗೌಡ ಕಚೇರಿ ಮೇಲೆ ಖಾಕಿ ದಾಳಿ

ರಾಬರ್ಟ್‌ ಸಿನಿಮಾನ್ನ ನಾನು ನೋಡುತ್ತೇನೆ, ನೀವೂ ನೋಡಿ – ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ