Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಾಣ ಒತ್ತೆಯಿಟ್ಟು ಮಾಡಿದ ಸಿನಿಮಾಗೆ ಇಂಥ ಅನ್ಯಾಯ’! ನೋವು ತೋಡಿಕೊಂಡ ಖ್ಯಾತ ನಟ ಸಂಚಾರಿ ವಿಜಯ್​

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಸಂಚಾರಿ ವಿಜಯ್​ ಅವರು ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ತಮಗಾದ ಅನ್ಯಾಯದ ವಿರುದ್ಧ ಗುಡುಗಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ...

‘ಪ್ರಾಣ ಒತ್ತೆಯಿಟ್ಟು ಮಾಡಿದ ಸಿನಿಮಾಗೆ ಇಂಥ ಅನ್ಯಾಯ’! ನೋವು ತೋಡಿಕೊಂಡ ಖ್ಯಾತ ನಟ ಸಂಚಾರಿ ವಿಜಯ್​
ಸಂಚಾರಿ ವಿಜಯ್​- ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ ಲೋಗೋ
Follow us
ಮದನ್​ ಕುಮಾರ್​
| Updated By: ganapathi bhat

Updated on: Mar 09, 2021 | 12:29 PM

‘ನಾನು ಅವನಲ್ಲ ಅವಳು’ ಚಿತ್ರದ ನಟನೆಗಾಗಿ ‘ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ’ ಪಡೆದುಕೊಂಡ ಕಲಾವಿದ ಸಂಚಾರಿ ವಿಜಯ್​ ಅವರು ಒಂದು ಹೊಸ ಸಿನಿಮಾದಲ್ಲಿ ನಟಿಸಿದ್ದಾರೆ. ‘ತಲೆದಂಡ’ ಶೀರ್ಷಿಕೆಯ ಈ ಚಿತ್ರಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಅನ್ಯಾಯ ಆಗಿದೆ ಎಂದು ಸಂಚಾರಿ ವಿಜಯ್​ ಈಗ ಆರೋಪಿಸಿದ್ದಾರೆ.

ಮಾ.24ರಿಂದ 31ರವರೆಗೆ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವ ನಡೆಯಲಿದೆ. ಇದರ ಹಲವು ವಿಭಾಗಗಳಿಗೆ ಸಿನಿಮಾ ಆಯ್ಕೆ ನಡೆಯುತ್ತಿದೆ. ಸ್ಪರ್ಧೆಯ ವಿಭಾಗದಲ್ಲಿ ತೀವ್ರ ಪೈಪೋಟಿ ಇದೆ. ಆದರೆ ಈ ವಿಭಾಗದಲ್ಲಿ ಕನ್ನಡದ ‘ತಲೆದಂಡ’ ಚಿತ್ರಕ್ಕೆ ಅವಕಾಶ ನಿರಾಕರಿಸಲಾಗಿದೆ. ಚಿತ್ರೋತ್ಸವ ಆಯೋಜಕರ ಈ ನಿರ್ಧಾರಕ್ಕೆ ಸಂಚಾರಿ ವಿಜಯ್​ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ತಲೆದಂಡ’ ಚಿತ್ರಕ್ಕೆ ಛಾಯಾಗ್ರಹಣ ಮಾಡಿರುವುದು ಅಶೋಕ್​ ಕಶ್ಯಪ್​. ಅವರು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಸದಸ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಚಿತ್ರೋತ್ಸವದ ನಿಯಮದ ಪ್ರಕಾರ, ಅಕಾಡೆಮಿಯಲ್ಲಿ ಇರುವವರ ಮತ್ತು ಅವರ ಆಪ್ತರ ಸಿನಿಮಾಗಳನ್ನು ಸ್ಪರ್ಧೆಯ ವಿಭಾಗಕ್ಕೆ ಆಯ್ಕೆ ಮಾಡುವಂತಿಲ್ಲ. ಆದರೆ ಈ ನಿಯಮದಿಂದ ಒಂದು ಒಳ್ಳೆಯ ಸಿನಿಮಾಗೆ ತೊಂದರೆ ಆಗುತ್ತಿದೆ ಎಂಬುದು ಸಂಚಾರಿ ವಿಜಯ್​ ಅವರ ವಾದ.

‘ನಮ್ಮ ಸಿನಿಮಾ ಸೆನ್ಸಾರ್​ ಆಗಿರುವುದು 2020ರಲ್ಲಿ. ಅದು ಈ ವರ್ಷವೇ ಪ್ರದರ್ಶನ ಆಗಬೇಕು. ಮುಂದಿನ ವರ್ಷ ಅವಕಾಶ ಇರುವುದಿಲ್ಲ. ಬಹಳ ಕಷ್ಟಪಟ್ಟು, ಅವರಿವರ ಕೈ-ಕಾಲು ಹಿಡಿದು ಸಾಲ ಮಾಡಿ ಸಿನಿಮಾ ನಿರ್ಮಿಸಲಾಗಿದೆ. ಆದರೆ ನೀವು ಹೇಗೆ ಈ ಚಿತ್ರವನ್ನು ಕಾಂಪಿಟೀಷನ್​ ಸೆಕ್ಷನ್​ನಿಂದ ಹೊರಗೆ ಇಟ್ಟಿದ್ದೀರಿ? ಅದಕ್ಕೆ ಮಾನದಂಡಗಳೇನು? ಹೀಗೆ ಒಂದು ಸಿನಿಮಾಗೆ ಅನ್ಯಾಯ ಆಗುತ್ತಿದೆ. ಇದು ಸಾಮಾಜಿಕ ಸಂದೇಶ ಇರುವ ಸಿನಿಮಾ’ ಎಂದಿದ್ದಾರೆ ಸಂಚಾರಿ ವಿಜಯ್​.

‘ಮರಗಳನ್ನು ಕಡಿಯಬೇಡಿ. ಅರಣ್ಯ ನಾಶ ಮಾಡಿದರೆ ಜಾಗತಿಕವಾಗಿ ತಾಪಮಾನ ಹೆಚ್ಚುತ್ತದೆ ಎಂಬ ಮೆಸೇಜ್​ ಇದರಲ್ಲಿ ಇದೆ. ಇಂಥ ಸಿನಿಮಾವನ್ನು ಹೊರಗೆ ಇಟ್ಟಿರುವುದನ್ನು ತಿಳಿದು ಬಹಳ ಬೇಸರ ಆಯಿತು. ಚಿತ್ರೀಕರಣದ ವೇಳೆ ನನ್ನ ಜೀವವನ್ನೇ ಪಣಕ್ಕಿಟ್ಟು ಕೆಲಸ ಮಾಡಿದ್ದೇನೆ. ಬದುಕಿದ್ದೇ ಹೆಚ್ಚು ಎಂಬಷ್ಟರಮಟ್ಟಿಗೆ ರಿಸ್ಕ್​ ತೆಗೆದುಕೊಂಡು ನಾನು ಕೆಲಸ ಮಾಡಿದ್ದೇನೆ. ಹೆಚ್ಚು-ಕಡಿಮೆ ಆಗಿದ್ದರೆ ನಾನೇ ಬದುಕಿ ಉಳಿಯುತ್ತಿರಲಿಲ್ಲ. ಇಂಥ ಸಿನಿಮಾ ಜನರಿಗೆ ತಲುಪಬೇಕು, ಆ ಚಿತ್ರಕ್ಕೆ ನ್ಯಾಯ ಸಿಗಬೇಕು ಎಂಬ ಕಾರಣಕ್ಕಾಗಿ ನಾವು ಇಷ್ಟೆಲ್ಲ ರಿಸ್ಕ್​ ತೆಗೆದುಕೊಂಡು ಸಿನಿಮಾ ಮಾಡುತ್ತೇವೆ. ಆದರೆ ಚಿತ್ರೋತ್ಸವದಲ್ಲಿ ಅನ್ಯಾಯ ಆಗಿರುವುದರಿಂದ ನಮಗೆ ಬಹಳಷ್ಟು ನೋವಾಗಿದೆ’ ಎಂದು ಸೋಶಿಯಲ್​ ಮೀಡಿಯಾ ಮೂಲಕ ಅವರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಕೆಂಪೇಗೌಡ ಸಿನಿಮಾ ನಿರ್ಮಾಪಕ ಶಂಕರ್ ಗೌಡ ಕಚೇರಿ ಮೇಲೆ ಖಾಕಿ ದಾಳಿ

ರಾಬರ್ಟ್‌ ಸಿನಿಮಾನ್ನ ನಾನು ನೋಡುತ್ತೇನೆ, ನೀವೂ ನೋಡಿ – ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ

ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು