AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಿಗಮ ವಿಜಿ ಆರೋಗ್ಯ ಹೇಗಿದೆ? ಭೇಟಿಯಾದವರು ನೀಡಿದ್ದಾರೆ ಮಾಹಿತಿ

Sarigama Viji health update: ಕನ್ನಡ ಚಿತ್ರರಂಗದ ಜನಪ್ರಿಯ ಹಿರಿಯ ನಟ ಸರಿಗಮ ವಿಜಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಕೆಲ ದಿನಗಳಿಂದಲೂ ಆಸ್ಪತ್ರೆಯಲ್ಲಿದ್ದಾರೆ. ಆಸ್ಪತ್ರೆಯಲ್ಲಿ ಅವರನ್ನು ಭೇಟಿ ಮಾಡಿರುವ ಅವರ ಆಪ್ತರು ಕೆಲವರು ಟಿವಿ9 ಜೊತೆ ಮಾತನಾಡಿದ್ದು, ವಿಜಿ ಅವರ ಆರೋಗ್ಯ ಈಗ ಹೇಗಿದೆ ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.

ಸರಿಗಮ ವಿಜಿ ಆರೋಗ್ಯ ಹೇಗಿದೆ? ಭೇಟಿಯಾದವರು ನೀಡಿದ್ದಾರೆ ಮಾಹಿತಿ
Viji (1)
ಮಂಜುನಾಥ ಸಿ.
|

Updated on: Jan 13, 2025 | 12:46 PM

Share

ಕನ್ನಡ ಚಿತ್ರರಂಗ ಮತ್ತು ಟಿವಿ ಲೋಕದ ಜನಪ್ರಿಯ ನಟ ಸರಿಗಮ ವಿಜಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ವಿಜಿ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಇದೀಗ ವಿಜಿ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಚಿತ್ರರಂಗದ ಪ್ರಮುಖರು ಅವರ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ನರಸಿಂಹರಾಜು ಅವರ ಪುತ್ರಿ ಸುಧಾ ನರಸಿಂಹರಾಜು ಹಾಗೂ ಇನ್ನೂ ಕೆಲವರು ಆಸ್ಪತ್ರೆಗೆ ಹೋಗಿ ಸರಿಗಮ ವಿಜಿ ಅವರನ್ನು ಭೇಟಿಯಾಗಿದ್ದು, ಅವರ ಆರೋಗ್ಯದ ಬಗ್ಗೆ ಟಿವಿ9 ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ.

ಸುಧಾ ನರಸಿಂಹರಾಜು ಅವರು ಹೇಳಿರುವಂತೆ, ವಿಜಿ ಅವರ ಆರೋಗ್ಯ ಸುಧಾರಿಸುತ್ತಿದೆ. ತಾವು ಭೇಟಿ ನೀಡಿ ಮಾತನಾಡಿಸಿದಾಗ ಮಾತುಗಳಿಗೆ ಸ್ಪಂದಿಸಿದರು ಎಂದಿದ್ದಾರೆ. ‘ನಾವು ಭೇಟಿ ನೀಡಿದಾಗ ಕೆಲ ಸಮಯ ನಮ್ಮೊಟ್ಟಿಗೆ ಮಾತನಾಡಿದರು. ನೀರು ಕುಡಿದರು. ನಮ್ಮ ಮಾತುಗಳಿಗೆ ತಲೆ ಆಡಿಸಿ ಉತ್ತರಗಳನ್ನು ನೀಡಿದರು. ಅವರ ಆರೋಗ್ಯ ಚೇತರಿಕೆ ಆಗುತ್ತಿದೆ. ಅನವಶ್ಯಕವಾಗಿ ಯಾರೂ ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು ಬೇಡ. ಸುದ್ದಿಗಳನ್ನು ಕೇಳಿ ನಾವು ಆತಂಕಗೊಂಡಿದ್ದೆವು ಹಾಗಾಗಿ ನಾವು ಆಸ್ಪತ್ರೆಗೆ ಹೋಗಿದ್ದೆವು ಆದರೆ ವಿಜಿ ಅವರ ಆರೋಗ್ಯ ಸುಧಾರಣೆ ಆಗುತ್ತಿದೆ’ ಎಂದಿದ್ದಾರೆ.

ವಿಜಿ ಅವರನ್ನು ಭೇಟಿಯಾಗಿರುವ ಅವರ ಆಪ್ತರೊಬ್ಬರು ಮಾತನಾಡಿ, ‘ಇಂದಷ್ಟೆ ಅವರನ್ನು ಭೇಟಿ ಮಾಡಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ದಿನೇ ದಿನೇ ಉತ್ತಮಗೊಳ್ಳುತ್ತಿದ್ದಾರೆ ಎಂದು ವೈದ್ಯರು ಸಹ ಹೇಳಿದ್ದಾರೆ. ನಾನು ಮಾತನಾಡಿಸಿದಾಗ ಮಾತನಾಡುವ ಪ್ರಯತ್ನ ಮಾಡಿದರು. ತಲೆ ಆಡಿಸಿ ಉತ್ತರಗಳನ್ನು ನೀಡಿದರು. ದೇವರ ದಯದಿಂದ ಅವರು ಆದಷ್ಟು ಬೇಗ ಗುಣಮುಖರಾಗಿ ಬರಲಿದ್ದಾರೆ’ ಎಂದಿದ್ದಾರೆ. ‘ಕೆಲವರು ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ, ಯಾರೂ ಸಹ ಅವುಗಳನ್ನು ನಂಬುವುದು ಬೇಡ’ ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ದರ್ಶನ್ ಚಿತ್ರವೊಂದಕ್ಕೆ ₹ 22 ಕೋಟಿ ಸಂಭಾವನೆ ಪಡೆಯುತ್ತಿರುವುದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ

ವಿಜಿ ಅವರು ಕನ್ನಡ ಚಿತ್ರರಂಗದ ಜನಪ್ರಿಯ ನಟರಾಗಿದ್ದು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಶ್ವಾಸಕೋಶದಲ್ಲಿ ಸಮಸ್ಯೆ ಎದುರಾಗಿದೆ. ಕಫದ ಸಮಸ್ಯೆಯಿಂದ ಅವರು ಬಳಲುತ್ತಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ