AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಿಗಮ ವಿಜಿ ಆರೋಗ್ಯ ಹೇಗಿದೆ? ಭೇಟಿಯಾದವರು ನೀಡಿದ್ದಾರೆ ಮಾಹಿತಿ

Sarigama Viji health update: ಕನ್ನಡ ಚಿತ್ರರಂಗದ ಜನಪ್ರಿಯ ಹಿರಿಯ ನಟ ಸರಿಗಮ ವಿಜಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಕೆಲ ದಿನಗಳಿಂದಲೂ ಆಸ್ಪತ್ರೆಯಲ್ಲಿದ್ದಾರೆ. ಆಸ್ಪತ್ರೆಯಲ್ಲಿ ಅವರನ್ನು ಭೇಟಿ ಮಾಡಿರುವ ಅವರ ಆಪ್ತರು ಕೆಲವರು ಟಿವಿ9 ಜೊತೆ ಮಾತನಾಡಿದ್ದು, ವಿಜಿ ಅವರ ಆರೋಗ್ಯ ಈಗ ಹೇಗಿದೆ ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.

ಸರಿಗಮ ವಿಜಿ ಆರೋಗ್ಯ ಹೇಗಿದೆ? ಭೇಟಿಯಾದವರು ನೀಡಿದ್ದಾರೆ ಮಾಹಿತಿ
Viji (1)
ಮಂಜುನಾಥ ಸಿ.
|

Updated on: Jan 13, 2025 | 12:46 PM

Share

ಕನ್ನಡ ಚಿತ್ರರಂಗ ಮತ್ತು ಟಿವಿ ಲೋಕದ ಜನಪ್ರಿಯ ನಟ ಸರಿಗಮ ವಿಜಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ವಿಜಿ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಇದೀಗ ವಿಜಿ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಚಿತ್ರರಂಗದ ಪ್ರಮುಖರು ಅವರ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ನರಸಿಂಹರಾಜು ಅವರ ಪುತ್ರಿ ಸುಧಾ ನರಸಿಂಹರಾಜು ಹಾಗೂ ಇನ್ನೂ ಕೆಲವರು ಆಸ್ಪತ್ರೆಗೆ ಹೋಗಿ ಸರಿಗಮ ವಿಜಿ ಅವರನ್ನು ಭೇಟಿಯಾಗಿದ್ದು, ಅವರ ಆರೋಗ್ಯದ ಬಗ್ಗೆ ಟಿವಿ9 ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ.

ಸುಧಾ ನರಸಿಂಹರಾಜು ಅವರು ಹೇಳಿರುವಂತೆ, ವಿಜಿ ಅವರ ಆರೋಗ್ಯ ಸುಧಾರಿಸುತ್ತಿದೆ. ತಾವು ಭೇಟಿ ನೀಡಿ ಮಾತನಾಡಿಸಿದಾಗ ಮಾತುಗಳಿಗೆ ಸ್ಪಂದಿಸಿದರು ಎಂದಿದ್ದಾರೆ. ‘ನಾವು ಭೇಟಿ ನೀಡಿದಾಗ ಕೆಲ ಸಮಯ ನಮ್ಮೊಟ್ಟಿಗೆ ಮಾತನಾಡಿದರು. ನೀರು ಕುಡಿದರು. ನಮ್ಮ ಮಾತುಗಳಿಗೆ ತಲೆ ಆಡಿಸಿ ಉತ್ತರಗಳನ್ನು ನೀಡಿದರು. ಅವರ ಆರೋಗ್ಯ ಚೇತರಿಕೆ ಆಗುತ್ತಿದೆ. ಅನವಶ್ಯಕವಾಗಿ ಯಾರೂ ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು ಬೇಡ. ಸುದ್ದಿಗಳನ್ನು ಕೇಳಿ ನಾವು ಆತಂಕಗೊಂಡಿದ್ದೆವು ಹಾಗಾಗಿ ನಾವು ಆಸ್ಪತ್ರೆಗೆ ಹೋಗಿದ್ದೆವು ಆದರೆ ವಿಜಿ ಅವರ ಆರೋಗ್ಯ ಸುಧಾರಣೆ ಆಗುತ್ತಿದೆ’ ಎಂದಿದ್ದಾರೆ.

ವಿಜಿ ಅವರನ್ನು ಭೇಟಿಯಾಗಿರುವ ಅವರ ಆಪ್ತರೊಬ್ಬರು ಮಾತನಾಡಿ, ‘ಇಂದಷ್ಟೆ ಅವರನ್ನು ಭೇಟಿ ಮಾಡಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ದಿನೇ ದಿನೇ ಉತ್ತಮಗೊಳ್ಳುತ್ತಿದ್ದಾರೆ ಎಂದು ವೈದ್ಯರು ಸಹ ಹೇಳಿದ್ದಾರೆ. ನಾನು ಮಾತನಾಡಿಸಿದಾಗ ಮಾತನಾಡುವ ಪ್ರಯತ್ನ ಮಾಡಿದರು. ತಲೆ ಆಡಿಸಿ ಉತ್ತರಗಳನ್ನು ನೀಡಿದರು. ದೇವರ ದಯದಿಂದ ಅವರು ಆದಷ್ಟು ಬೇಗ ಗುಣಮುಖರಾಗಿ ಬರಲಿದ್ದಾರೆ’ ಎಂದಿದ್ದಾರೆ. ‘ಕೆಲವರು ಅವರ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ, ಯಾರೂ ಸಹ ಅವುಗಳನ್ನು ನಂಬುವುದು ಬೇಡ’ ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ದರ್ಶನ್ ಚಿತ್ರವೊಂದಕ್ಕೆ ₹ 22 ಕೋಟಿ ಸಂಭಾವನೆ ಪಡೆಯುತ್ತಿರುವುದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ

ವಿಜಿ ಅವರು ಕನ್ನಡ ಚಿತ್ರರಂಗದ ಜನಪ್ರಿಯ ನಟರಾಗಿದ್ದು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಶ್ವಾಸಕೋಶದಲ್ಲಿ ಸಮಸ್ಯೆ ಎದುರಾಗಿದೆ. ಕಫದ ಸಮಸ್ಯೆಯಿಂದ ಅವರು ಬಳಲುತ್ತಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ