ಸ್ಯಾಂಡಲ್ ವುಡ್​ನಲ್ಲಿ ಸ್ಟಾರ್ ನಟರ ಕುಡಿಗಳ ಕಮಾಲ್: ಫೋಟೋಶೂಟ್​ನಲ್ಲಿ ಶಶಿಕುಮಾರ್ ಪುತ್ರ ಬ್ಯುಸಿ

ಸ್ಟಾರ್ ಫ್ಯಾಮಿಲಿಯಿಂದ ಗಾಂಧಿನಗರಕ್ಕೆ ಎಂಟ್ರಿ ಕೊಡ್ತಿರೋ ನಟರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗ್ತಾನೇ ಇದೆ. ಈಗಾಗಲೇ ಶಶಿಕುಮಾರ್ ಪುತ್ರ ಕೂಡ ಈ ಸಾಲಿಗೆ ಸೇರಿದ್ದು ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿ ಕಮಾಲ್ ಮಾಡ್ತಿದ್ದಾರೆ. ಮೊದಲ ಸಿನಿಮಾ ರಿಲೀಸ್‌ಗೂ ಮುಂಚೆನೆ ಓ ಮೈ ಲವ್ ಅಂತ ಕಾಲೇಜ್ ಹುಡುಗನಾಗಿರೋ ಅಕ್ಷಿತ್, ಫೋಟೋ ಶೂಟ್ ನಲ್ಲಿ ಹೇಗೆ ಕಾಣಿಸಿದ್ದಾರೆ ಅನ್ನೋದರ ಝಲಕ್ ಇಲ್ಲಿದೆ ನೋಡಿ.

ಸ್ಯಾಂಡಲ್ ವುಡ್​ನಲ್ಲಿ ಸ್ಟಾರ್ ನಟರ ಕುಡಿಗಳ ಕಮಾಲ್: ಫೋಟೋಶೂಟ್​ನಲ್ಲಿ ಶಶಿಕುಮಾರ್ ಪುತ್ರ ಬ್ಯುಸಿ
ಅಕ್ಷಿತ್ ಫೋಟೋ ಶೂಟ್
Follow us
|

Updated on:Dec 21, 2020 | 7:31 AM

ಸ್ಯಾಂಡಲ್‌ವುಡ್‌ನಲ್ಲಿ ಸ್ಟಾರ್‌ ಫ್ಯಾಮಿಲಿಯಿಂದ ಎಂಟ್ರಿ ಕೊಡ್ತಿರೋರ ಸಂಖ್ಯೆ ಹೆಚ್ಚಾಗ್ತಾನೇ ಇದೆ. ಒಂದೊಂದು ಸ್ಟಾರ್‌ ಫ್ಯಾಮಿಲಿಯಿಂದ ಒಬ್ಬೊಬ್ಬ ನವ ನಟ ಎಂಟ್ರಿ ಕೊಡ್ತಿದ್ದಾರೆ. ಇದೇ ವರ್ಷ ರಾಜ್‌ ಕುಟುಂಬದ ಯುವರಾಜ್‌ ಕುಮಾರ್ ರಣಧೀರ ಕಂಠೀರವನಾಗಿ, ಕ್ರೇಜಿ ಸ್ಟಾರ್‌ ಕುಟುಂಬದಿಂದ ರವಿಚಂದ್ರನ್‌ ಪುತ್ರ ವಿಕ್ರಮ್‌ ತ್ರಿವಿಕ್ರಮನಾಗಿ ಕೂಡ ಹೊಸ ಹೊಸ ಸಿನಿಮಾಗಳ ಮೂಲಕ ಗಾಂಧಿನಗರಕ್ಕೆ ಎಂಟ್ರಿ ಕೊಡ್ತಿದ್ದಾರೆ. ಅಷ್ಟೇ ಅಲ್ಲ ಉಪ್ಪಿ ಕುಟುಂಬದ ನಿರಂಜನ್‌ ಕೂಡ ಸೂಪರ್ ಸ್ಟಾರ್‌ ಸಿನಿಮಾ ಮೂಲಕ ಬಣ್ಣ ಹಚ್ಚಿದ್ದಾರೆ.

ಫೋಟೋ ಶೂಟ್​ನಲ್ಲಿ ಶಶಿಕುಮಾರ್ ಪುತ್ರ ಬ್ಯುಸಿ: ಹೀಗೆ ಸಾಲು ಸಾಲು ನಟರು ಸ್ಟಾರ್ ಕುಟುಂಬದಿಂದ ಎಂಟ್ರಿ ಕೊಡ್ತಿರೋ ಬೆನ್ನಲ್ಲೇ ಸ್ಯಾಂಡಲ್‌ವುಡ್‌ ಸುಪ್ರೀಂ ಹೀರೋ ಶಶಿಕುಮಾರ್‌ ಪುತ್ರ ಕೂಡ ಈಗಾಗ್ಲೇ ಗಾಂಧಿನಗರದಲ್ಲಿ ಸೀತಾಯಣ ಸಿನಿಮಾ ಮೂಲಕ ಕಮಾಲ್‌ ಮಾಡ್ತಿರೋದು ಗೊತ್ತೇ ಇದೆ. ಅಷ್ಟೇ ಅಲ್ಲ, ಟಾಲಿವುಡ್‌ನಲ್ಲಿ ಸಮಿತ್‌ ಸಿನಿಮಾಗೂ ಬಣ್ಣ ಹಚ್ಚೋಕೆ ರೆಡಿಯಾಗಿದ್ದಾರೆ. ಇದೆಲ್ಲದರ ಜೊತೆಗೆ ಸದ್ಯ ಕಾಲೇಜ್‌ ಹುಡುಗನಾಗಿ ಸ್ಮೈಲ್‌ ಸೀನು ಆ್ಯಕ್ಷನ್‌ ಕಟ್ ಹೇಳ್ತಿರೋ ಓ ಮೈ ಲವ್‌ ಸಿನಿಮಾದಲ್ಲಿ ನಟಿಸ್ತಿದ್ದು, ಸದ್ದಿಲ್ಲದೇ ರೊಮ್ಯಾಂಟಿಕ್‌ ಫೋಟೋ ಶೂಟ್‌ ಮಾಡಿದ್ದಾರೆ.

ಸದ್ಯ ಓ ಮೈ ಲವ್‌ ಸಿನಿಮಾದಲ್ಲಿ ಸಖತ್‌ ರೊಮ್ಯಾಂಟಿಕ್ ಆಗಿ ಮೋಡಿ ಮಾಡಲಿರೋ ಅಕ್ಷಿತ್‌ ಶಶಿಕುಮಾರ್ ಇಬ್ಬರು ನಾಯಕಿಯರ ಜತೆ ಫೋಟೋ ಶೂಟ್‌ನಲ್ಲಿ ಬ್ಯುಸಿಯಾಗಿದ್ರು. ಅಕ್ಷಿತ್‌ ಜೊತೆ ಕೀರ್ತಿ ಹಾಗೂ ದೀಪಿಕಾ ಸ್ಕ್ರೀನ್ ಶೇರ್‌ ಮಾಡ್ತಿದ್ದಾರೆ.

ಒಟ್ನಲ್ಲಿ ಸದ್ಯ ಸ್ಟಾರ್‌ ಕುಟುಂಬದ ಕುಡಿಗಳು ಗಾಂಧಿನಗರದಲ್ಲಿ ಹೇಗೆ ಮೋಡಿ ಮಾಡ್ತಾರೆ ಅನ್ನೋದನ್ನ ಅವ್ರ ಅಭಿಮಾನಿಗಳು ಕ್ಯೂರಿಯಾಸಿಟಿಯಿಂದ ನೋಡ್ತಿದ್ದಾರೆ. ಇನ್ನು ಈ ಸಾಲಿಗೆ ಸೇರಿರೋ ಶಶಿಕುಮಾರ್ ಪುತ್ರ ಅಕ್ಷಿತ್‌ ಸಾಲು ಸಾಲು ಸಿನಿಮಾಗಳನ್ನ ಒಪ್ಪಿಕೊಂಡಿದ್ದು ಅದ್ಹೇಗೆ ಅಭಿಮಾನಿಗಳನ್ನ ರಂಜಿಸ್ತಾರೆ ಅನ್ನೋದನ್ನ ಕಾದು ನೋಡ್ಬೇಕಿದೆ.

Published On - 7:31 am, Mon, 21 December 20

ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​