AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ನಂದಿನಿ ಉತ್ಪನ್ನಗಳ ರಾಯಭಾರಿ ಆದ ನಟ ಶಿವರಾಜ್​ಕುಮಾರ್

ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹಾಗೂ ಎಂಡಿ ಜಗದೀಶ್ ಶಿವರಾಜ್​ಕುಮಾರ್ ಬಳಿ ಈ ಬಗ್ಗೆ ಮನವಿ ಮಾಡಿದ್ದರು. ಶಿವರಾಜ್​ಕುಮಾರ್ ಅವರು ಈ ಮನವಿಗೆ ಸ್ಪಂದಿಸಿದ್ದಾರೆ.

Shivarajkumar: ನಂದಿನಿ ಉತ್ಪನ್ನಗಳ ರಾಯಭಾರಿ ಆದ ನಟ ಶಿವರಾಜ್​ಕುಮಾರ್
ಶಿವರಾಜ್​ಕುಮಾರ್
Follow us
Shivaraj
| Updated By: ರಾಜೇಶ್ ದುಗ್ಗುಮನೆ

Updated on: Aug 01, 2023 | 2:34 PM

ನಟ ಶಿವರಾಜ್​ಕುಮಾರ್ ಅವರು ನಂದಿನಿ ಉತ್ಪನ್ನಗಳ ರಾಯಭಾರಿ ಆಗಲು ಒಪ್ಪಿಗೆ ಸೂಚಿಸಿದ್ದಾರೆ. ಈ ವಿಚಾರವನ್ನು ಕೆಎಂಎಫ್​ ಅಧ್ಯಕ್ಷ ಭೀಮಾ ನಾಯ್ಕ್ ಅವರು ಖಚಿಪಡಿಸಿದ್ದಾರೆ. ಈ ವಿಚಾರ ಕೇಳಿ ಶಿವರಾಜ್​ಕುಮಾರ್ (Shivarajkumar) ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಶಿವರಾಜ್​ಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಜನರಿಗೆ ಹೆಚ್ಚು ಇಷ್ಟವಾಗುತ್ತಾರೆ. ಈ ಕಾರಣಕ್ಕೆ ಅವರನ್ನು ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿ ಆಗಿ ಕರೆತರಲಾಗಿದೆ ಎಂದು ತಿಳಿದು ಬಂದಿದೆ. ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ಈ ಮೊದಲು ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿ ಆಗಿದ್ದರು.

ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹಾಗೂ ಎಂಡಿ ಜಗದೀಶ್ ಶಿವರಾಜ್​ಕುಮಾರ್ ಬಳಿ ಈ ಬಗ್ಗೆ ಮನವಿ ಮಾಡಿದ್ದರು. ಶಿವರಾಜ್​ಕುಮಾರ್ ಅವರು ಈ ಮನವಿಗೆ ಸ್ಪಂದಿಸಿದ್ದಾರೆ. ನಂದಿನಿ ಉತ್ಪನ್ನಗಳ ಜಾಹೀರಾತಿನಲ್ಲಿ ಶಿವರಾಜ್​ಕುಮಾರ್ ಅವರು ಕಾಣಿಸಿಕೊಳ್ಳಲಿದ್ದಾರೆ. ಶಿವಣ್ಣಗೆ ಹೂಗುಚ್ಛ ನೀಡಿ ಭೀಮಾನಾಯ್ಕ್ ಅಭಿನಂದಿಸಿದ್ದಾರೆ.

ಶಿವರಾಜ್​ಕುಮಾರ್ ಅವರು ಹತ್ತಕ್ಕೂ ಅಧಿಕ ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ತಮಿಳು ಚಿತ್ರಗಳನ್ನು ಒಪ್ಪಿಕೊಂಡಿರುವುದರಿಂದ ಅವರು ಬೇರೆ ರಾಜ್ಯಗಳಿಗೂ ತೆರಳಬೇಕಾಗುತ್ತದೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ‘ಜೈಲರ್’ ಚಿತ್ರದ ಆಡಿಯೋ ಲಾಂಚ್​ನಲ್ಲಿ ಅವರು ಭಾಗಿ ಆಗಿದ್ದರು. ಅವರು ವೇದಿಕೆ ಏರಿದ ವೇಳೆ ಸಿಳ್ಳೆಗಳು ಬಿದ್ದಿದ್ದವು. ಈ ಮೂಲಕ ಪರಭಾಷೆಯಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ ಎಂಬುದು ಸಾಬೀತಾಗಿತ್ತು. ಇಷ್ಟೆಲ್ಲ ಕೆಲಸಗಳ ಮಧ್ಯೆ ಅವರು ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ ಮುಂದಾಗಿರುವುದು ಅನೇಕರಿಗೆ ಖುಷಿ ನೀಡಿದೆ.

ಇದನ್ನೂ ಓದಿ: ‘ಯು ಆರ್​ ಸೋ ಕ್ಯೂಟ್​’; ನವಾಜ್​ ಡೈಲಾಗ್​ಗೆ ಫಿದಾ ಆದ ಶಿವರಾಜ್​ಕುಮಾರ್

ಈ ಮೊದಲು ರಾಜ್​ಕುಮಾರ್ ಅವರು ಕೂಡ ನಂದಿನಿ ಉತ್ಪನ್ನದ ರಾಯಭಾರಿ ಆಗಿದ್ದರು. ಅವರು ಪ್ರಚಾರಕ್ಕೆ ಯಾವುದೇ ಸಂಭಾವನೆ ಪಡೆದಿರಲಿಲ್ಲ. ರೈತರಿಗೆ ಸಹಕಾರಿ ಆಗುತ್ತದೆ ಎಂಬ ಉದ್ದೇಶ ರಾಜ್​ಕುಮಾರ್ ಸಂಭಾವನೆ ಪಡೆದಿರಲಿಲ್ಲ.  ಅವರ ಹಾದಿಯಲ್ಲಿ ಪುನೀತ್ ಸಾಗಿದ್ದರು. ಅವರು ಹಲವು ವರ್ಷಗಳ ಕಾಲ ನಂದಿನಿ ಪ್ರಾಡಕ್ಟ್​​ಗಳ ಪ್ರಚಾರದಲ್ಲಿ ಭಾಗಿ ಆಗಿದ್ದರು. ಇದಕ್ಕಾಗಿ ಅವರು ಯಾವುದೇ ಸಂಭಾವನೆ ಪಡೆದಿರಲಿಲ್ಲ ಎಂಬ ಸುದ್ದಿ ಅವರ ಸಾವಿನ ಬಳಿಕ ಕೇಳಿ ಬಂದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ