AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ನಂದಿನಿ ಉತ್ಪನ್ನಗಳ ರಾಯಭಾರಿ ಆದ ನಟ ಶಿವರಾಜ್​ಕುಮಾರ್

ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹಾಗೂ ಎಂಡಿ ಜಗದೀಶ್ ಶಿವರಾಜ್​ಕುಮಾರ್ ಬಳಿ ಈ ಬಗ್ಗೆ ಮನವಿ ಮಾಡಿದ್ದರು. ಶಿವರಾಜ್​ಕುಮಾರ್ ಅವರು ಈ ಮನವಿಗೆ ಸ್ಪಂದಿಸಿದ್ದಾರೆ.

Shivarajkumar: ನಂದಿನಿ ಉತ್ಪನ್ನಗಳ ರಾಯಭಾರಿ ಆದ ನಟ ಶಿವರಾಜ್​ಕುಮಾರ್
ಶಿವರಾಜ್​ಕುಮಾರ್
Shivaraj
| Edited By: |

Updated on: Aug 01, 2023 | 2:34 PM

Share

ನಟ ಶಿವರಾಜ್​ಕುಮಾರ್ ಅವರು ನಂದಿನಿ ಉತ್ಪನ್ನಗಳ ರಾಯಭಾರಿ ಆಗಲು ಒಪ್ಪಿಗೆ ಸೂಚಿಸಿದ್ದಾರೆ. ಈ ವಿಚಾರವನ್ನು ಕೆಎಂಎಫ್​ ಅಧ್ಯಕ್ಷ ಭೀಮಾ ನಾಯ್ಕ್ ಅವರು ಖಚಿಪಡಿಸಿದ್ದಾರೆ. ಈ ವಿಚಾರ ಕೇಳಿ ಶಿವರಾಜ್​ಕುಮಾರ್ (Shivarajkumar) ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಶಿವರಾಜ್​ಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಜನರಿಗೆ ಹೆಚ್ಚು ಇಷ್ಟವಾಗುತ್ತಾರೆ. ಈ ಕಾರಣಕ್ಕೆ ಅವರನ್ನು ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿ ಆಗಿ ಕರೆತರಲಾಗಿದೆ ಎಂದು ತಿಳಿದು ಬಂದಿದೆ. ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ಈ ಮೊದಲು ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿ ಆಗಿದ್ದರು.

ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹಾಗೂ ಎಂಡಿ ಜಗದೀಶ್ ಶಿವರಾಜ್​ಕುಮಾರ್ ಬಳಿ ಈ ಬಗ್ಗೆ ಮನವಿ ಮಾಡಿದ್ದರು. ಶಿವರಾಜ್​ಕುಮಾರ್ ಅವರು ಈ ಮನವಿಗೆ ಸ್ಪಂದಿಸಿದ್ದಾರೆ. ನಂದಿನಿ ಉತ್ಪನ್ನಗಳ ಜಾಹೀರಾತಿನಲ್ಲಿ ಶಿವರಾಜ್​ಕುಮಾರ್ ಅವರು ಕಾಣಿಸಿಕೊಳ್ಳಲಿದ್ದಾರೆ. ಶಿವಣ್ಣಗೆ ಹೂಗುಚ್ಛ ನೀಡಿ ಭೀಮಾನಾಯ್ಕ್ ಅಭಿನಂದಿಸಿದ್ದಾರೆ.

ಶಿವರಾಜ್​ಕುಮಾರ್ ಅವರು ಹತ್ತಕ್ಕೂ ಅಧಿಕ ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ತಮಿಳು ಚಿತ್ರಗಳನ್ನು ಒಪ್ಪಿಕೊಂಡಿರುವುದರಿಂದ ಅವರು ಬೇರೆ ರಾಜ್ಯಗಳಿಗೂ ತೆರಳಬೇಕಾಗುತ್ತದೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ‘ಜೈಲರ್’ ಚಿತ್ರದ ಆಡಿಯೋ ಲಾಂಚ್​ನಲ್ಲಿ ಅವರು ಭಾಗಿ ಆಗಿದ್ದರು. ಅವರು ವೇದಿಕೆ ಏರಿದ ವೇಳೆ ಸಿಳ್ಳೆಗಳು ಬಿದ್ದಿದ್ದವು. ಈ ಮೂಲಕ ಪರಭಾಷೆಯಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ ಎಂಬುದು ಸಾಬೀತಾಗಿತ್ತು. ಇಷ್ಟೆಲ್ಲ ಕೆಲಸಗಳ ಮಧ್ಯೆ ಅವರು ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ ಮುಂದಾಗಿರುವುದು ಅನೇಕರಿಗೆ ಖುಷಿ ನೀಡಿದೆ.

ಇದನ್ನೂ ಓದಿ: ‘ಯು ಆರ್​ ಸೋ ಕ್ಯೂಟ್​’; ನವಾಜ್​ ಡೈಲಾಗ್​ಗೆ ಫಿದಾ ಆದ ಶಿವರಾಜ್​ಕುಮಾರ್

ಈ ಮೊದಲು ರಾಜ್​ಕುಮಾರ್ ಅವರು ಕೂಡ ನಂದಿನಿ ಉತ್ಪನ್ನದ ರಾಯಭಾರಿ ಆಗಿದ್ದರು. ಅವರು ಪ್ರಚಾರಕ್ಕೆ ಯಾವುದೇ ಸಂಭಾವನೆ ಪಡೆದಿರಲಿಲ್ಲ. ರೈತರಿಗೆ ಸಹಕಾರಿ ಆಗುತ್ತದೆ ಎಂಬ ಉದ್ದೇಶ ರಾಜ್​ಕುಮಾರ್ ಸಂಭಾವನೆ ಪಡೆದಿರಲಿಲ್ಲ.  ಅವರ ಹಾದಿಯಲ್ಲಿ ಪುನೀತ್ ಸಾಗಿದ್ದರು. ಅವರು ಹಲವು ವರ್ಷಗಳ ಕಾಲ ನಂದಿನಿ ಪ್ರಾಡಕ್ಟ್​​ಗಳ ಪ್ರಚಾರದಲ್ಲಿ ಭಾಗಿ ಆಗಿದ್ದರು. ಇದಕ್ಕಾಗಿ ಅವರು ಯಾವುದೇ ಸಂಭಾವನೆ ಪಡೆದಿರಲಿಲ್ಲ ಎಂಬ ಸುದ್ದಿ ಅವರ ಸಾವಿನ ಬಳಿಕ ಕೇಳಿ ಬಂದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್