AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ನಂದಿನಿ ಉತ್ಪನ್ನಗಳ ರಾಯಭಾರಿ ಆದ ನಟ ಶಿವರಾಜ್​ಕುಮಾರ್

ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹಾಗೂ ಎಂಡಿ ಜಗದೀಶ್ ಶಿವರಾಜ್​ಕುಮಾರ್ ಬಳಿ ಈ ಬಗ್ಗೆ ಮನವಿ ಮಾಡಿದ್ದರು. ಶಿವರಾಜ್​ಕುಮಾರ್ ಅವರು ಈ ಮನವಿಗೆ ಸ್ಪಂದಿಸಿದ್ದಾರೆ.

Shivarajkumar: ನಂದಿನಿ ಉತ್ಪನ್ನಗಳ ರಾಯಭಾರಿ ಆದ ನಟ ಶಿವರಾಜ್​ಕುಮಾರ್
ಶಿವರಾಜ್​ಕುಮಾರ್
Shivaraj
| Edited By: |

Updated on: Aug 01, 2023 | 2:34 PM

Share

ನಟ ಶಿವರಾಜ್​ಕುಮಾರ್ ಅವರು ನಂದಿನಿ ಉತ್ಪನ್ನಗಳ ರಾಯಭಾರಿ ಆಗಲು ಒಪ್ಪಿಗೆ ಸೂಚಿಸಿದ್ದಾರೆ. ಈ ವಿಚಾರವನ್ನು ಕೆಎಂಎಫ್​ ಅಧ್ಯಕ್ಷ ಭೀಮಾ ನಾಯ್ಕ್ ಅವರು ಖಚಿಪಡಿಸಿದ್ದಾರೆ. ಈ ವಿಚಾರ ಕೇಳಿ ಶಿವರಾಜ್​ಕುಮಾರ್ (Shivarajkumar) ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಶಿವರಾಜ್​ಕುಮಾರ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಜನರಿಗೆ ಹೆಚ್ಚು ಇಷ್ಟವಾಗುತ್ತಾರೆ. ಈ ಕಾರಣಕ್ಕೆ ಅವರನ್ನು ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿ ಆಗಿ ಕರೆತರಲಾಗಿದೆ ಎಂದು ತಿಳಿದು ಬಂದಿದೆ. ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ಈ ಮೊದಲು ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿ ಆಗಿದ್ದರು.

ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹಾಗೂ ಎಂಡಿ ಜಗದೀಶ್ ಶಿವರಾಜ್​ಕುಮಾರ್ ಬಳಿ ಈ ಬಗ್ಗೆ ಮನವಿ ಮಾಡಿದ್ದರು. ಶಿವರಾಜ್​ಕುಮಾರ್ ಅವರು ಈ ಮನವಿಗೆ ಸ್ಪಂದಿಸಿದ್ದಾರೆ. ನಂದಿನಿ ಉತ್ಪನ್ನಗಳ ಜಾಹೀರಾತಿನಲ್ಲಿ ಶಿವರಾಜ್​ಕುಮಾರ್ ಅವರು ಕಾಣಿಸಿಕೊಳ್ಳಲಿದ್ದಾರೆ. ಶಿವಣ್ಣಗೆ ಹೂಗುಚ್ಛ ನೀಡಿ ಭೀಮಾನಾಯ್ಕ್ ಅಭಿನಂದಿಸಿದ್ದಾರೆ.

ಶಿವರಾಜ್​ಕುಮಾರ್ ಅವರು ಹತ್ತಕ್ಕೂ ಅಧಿಕ ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ತಮಿಳು ಚಿತ್ರಗಳನ್ನು ಒಪ್ಪಿಕೊಂಡಿರುವುದರಿಂದ ಅವರು ಬೇರೆ ರಾಜ್ಯಗಳಿಗೂ ತೆರಳಬೇಕಾಗುತ್ತದೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ‘ಜೈಲರ್’ ಚಿತ್ರದ ಆಡಿಯೋ ಲಾಂಚ್​ನಲ್ಲಿ ಅವರು ಭಾಗಿ ಆಗಿದ್ದರು. ಅವರು ವೇದಿಕೆ ಏರಿದ ವೇಳೆ ಸಿಳ್ಳೆಗಳು ಬಿದ್ದಿದ್ದವು. ಈ ಮೂಲಕ ಪರಭಾಷೆಯಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ ಎಂಬುದು ಸಾಬೀತಾಗಿತ್ತು. ಇಷ್ಟೆಲ್ಲ ಕೆಲಸಗಳ ಮಧ್ಯೆ ಅವರು ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ ಮುಂದಾಗಿರುವುದು ಅನೇಕರಿಗೆ ಖುಷಿ ನೀಡಿದೆ.

ಇದನ್ನೂ ಓದಿ: ‘ಯು ಆರ್​ ಸೋ ಕ್ಯೂಟ್​’; ನವಾಜ್​ ಡೈಲಾಗ್​ಗೆ ಫಿದಾ ಆದ ಶಿವರಾಜ್​ಕುಮಾರ್

ಈ ಮೊದಲು ರಾಜ್​ಕುಮಾರ್ ಅವರು ಕೂಡ ನಂದಿನಿ ಉತ್ಪನ್ನದ ರಾಯಭಾರಿ ಆಗಿದ್ದರು. ಅವರು ಪ್ರಚಾರಕ್ಕೆ ಯಾವುದೇ ಸಂಭಾವನೆ ಪಡೆದಿರಲಿಲ್ಲ. ರೈತರಿಗೆ ಸಹಕಾರಿ ಆಗುತ್ತದೆ ಎಂಬ ಉದ್ದೇಶ ರಾಜ್​ಕುಮಾರ್ ಸಂಭಾವನೆ ಪಡೆದಿರಲಿಲ್ಲ.  ಅವರ ಹಾದಿಯಲ್ಲಿ ಪುನೀತ್ ಸಾಗಿದ್ದರು. ಅವರು ಹಲವು ವರ್ಷಗಳ ಕಾಲ ನಂದಿನಿ ಪ್ರಾಡಕ್ಟ್​​ಗಳ ಪ್ರಚಾರದಲ್ಲಿ ಭಾಗಿ ಆಗಿದ್ದರು. ಇದಕ್ಕಾಗಿ ಅವರು ಯಾವುದೇ ಸಂಭಾವನೆ ಪಡೆದಿರಲಿಲ್ಲ ಎಂಬ ಸುದ್ದಿ ಅವರ ಸಾವಿನ ಬಳಿಕ ಕೇಳಿ ಬಂದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shivaraj
Shivaraj
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು